Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಂಕಣ ರೈಲ್ವೆಯಲ್ಲಿ ಮಾನ್ಸೂನ್ ಗಸ್ತು...

ಕೊಂಕಣ ರೈಲ್ವೆಯಲ್ಲಿ ಮಾನ್ಸೂನ್ ಗಸ್ತು ಬಗ್ಗೆ ಪ್ರಾತ್ಯಕ್ಷಿಕೆ

ವಾರ್ತಾಭಾರತಿವಾರ್ತಾಭಾರತಿ5 Jun 2026 9:32 PM IST
share
ಕೊಂಕಣ ರೈಲ್ವೆಯಲ್ಲಿ ಮಾನ್ಸೂನ್ ಗಸ್ತು ಬಗ್ಗೆ ಪ್ರಾತ್ಯಕ್ಷಿಕೆ

ಉಡುಪಿ, ಜೂ.5: ಕೊಂಕಣ ವಲಯದಲ್ಲಿ ಮುಂಗಾರು ಪ್ರವೇಶಕ್ಕೆ ಸಜ್ಜಾಗುತ್ತಿರುವಂತೆ ಕೊಂಕಣ ರೈಲ್ವೆ ನಿಗಮವು ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿಯ ಗಸ್ತು ಪ್ರಾರಂಭಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಂಡಿದೆ.

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆಗೆ ಗುಡ್ಡಕುಸಿಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಈಗಾಗಲೇ ಗುರುತಿಸಿದ್ದು ಅಲ್ಲಿ ದಿನದ 24 ಗಂಟೆಯೂ ಕಾರ್ಯಾಚರಿಸುವ ವಾಚ್‌ಮೆನ್‌ಗಳನ್ನು ನಿಯೋಜಿಸಿದೆ. ಇವರಿಗೆ ತರಬೇತಿ ಹಾಗೂ ಪ್ರಾತ್ಯಕ್ಷಿಕೆಯ ಕಾರ್ಯಕ್ರಮವೊಂದನ್ನು ಕೆಆರ್‌ಸಿಎಲ್‌ನ ಸುರಕ್ಷಿತಾ ವಿಭಾಗ ರತ್ನಗಿರಿಯಲ್ಲಿ ಬುಧವಾರ ಆಯೋಜಿಸಿತ್ತು.

ಈ ಭಾಗಗಳಲ್ಲಿ ಕೊಂಕಣ ರೈಲ್ವೆ ಇದೇ ಮೊದಲ ಬಾರಿಗೆ ರಾತ್ರಿ ಗಸ್ತನ್ನು ಪರಿಚಯಿಸುತ್ತಿದೆ. ಇವರು ಸೂರ್ಯ ಮುಳುಗುವ ಸಮಯದಿಂದ ಮರುದಿನ ಸೂರ್ಯ ಉದಯಿಸುವ ಸಮಯದವರೆಗೆ ಇಂಥ ಪ್ರದೇಶಗಳಲ್ಲಿ ಕಾರ್ಯಾ ಚರಿಸಲಿದ್ದಾರೆ. ಇವರು ಕಾಲ್ನಡಿಗೆಯಲ್ಲಿ ಇಂಥ ಪ್ರದೇಶಗಳಲ್ಲಿ ಸಂಚರಿಸಿ ರೈಲು ಹಳಿಗೆ ಭೂಕುಸಿತ, ಬಂಡೆ ಜಾರಿ ಬೀಳುವುದು, ಹಠಾತ್ ಪ್ರವಾಹಕ್ಕೆ ಹಳಿ ನೀರಿನಲ್ಲಿ ಮುಳುಗುವುದು ಸೇರಿದಂತೆ ಯಾವುದೇ ಅಪಾಯ ಎದುರಾಗುವ ಬಗ್ಗೆ ನಿಗಾ ವಹಿಸಲಿದ್ದಾರೆ.

ಇಂಥ ಯಾವುದೇ ಸಂಭವನೀಯ ಸಾಧ್ಯತೆ ಕಂಡುಬಂದರೆ ಇವರು ತಕ್ಷಣ ಸಮೀಪದ ಸ್ಟೇಶನ್ ಮಾಸ್ಟರ್‌ಗೆ ಮಾಹಿತಿಯನ್ನು ನೀಡಬೇಕಾಗುತ್ತದೆ. ಇಂಥ ಪ್ರತಿಯೊಬ್ಬ ಗಸ್ತುದಾರಿಗೂ ಐದು ಕಿ.ಮೀ.ವರೆಗಿನ ವ್ಯಾಪ್ತಿಯನ್ನು ನೀಡಲಾ ಗುತ್ತದೆ. ಇವರು ಪೆಟ್ರೋಲ್ ಡೈರಿಯನ್ನು ಪಕ್ಕದ ಗಸ್ತುದಾರಿಯೊಂದಿಗೆ ವಿನಿಮಯ ಮಾಡಿಕೊಳ್ಳಬೇಕಾ ಗುತ್ತದೆ. ಈ ಮೂಲಕ ರೈಲು ಮಾರ್ಗ ಸಂಚಾರಕ್ಕೆ ಸುರಕ್ಷಿತವಾಗಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲಾಗುತ್ತದೆ.

ಪೆಟ್ರೋಲ್ ಡೈರಿಯ ವಿನಿಮಯ ಸೇರಿದಂತೆ ರಾತ್ರಿ ಗಸ್ತಿನ ಸಮಗ್ರ ಮಾಹಿತಿಯನ್ನು ಪ್ರಾತ್ಯಕ್ಷಿಕೆಯಲ್ಲಿ ಪ್ರದರ್ಶಿಸಲಾ ಯಿತು. ವಿವಿಧ ತುರ್ತು ಸಂದರ್ಭಗಳಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ವಿವರವಾಗಿ ಅವರಿಗೆ ತಿಳಿಸಿಕೊಡಲಾಯಿತು.

ಕೆಆರ್‌ಸಿಎಲ್‌ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಸಂತೋಷ್ ಕುಮಾರ್ ಝಾ ಅವರ ಅಧ್ಯಕ್ಷತೆಯಲ್ಲಿ ಈ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಸುರಕ್ಷತಾ ವಿಭಾಗದ ರಾಜೀವ್ ಕುಮಾರ್ ಮಿಶ್ರಾ ಅವರು ಮಳೆಗಾಲದ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಮಾಹಿತಿಗಳನ್ನು ನೀಡಿದರು.

ಈ ಸೆಮಿನಾರ್‌ನಲ್ಲಿ ಕೆಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ 175 ಮಂದಿ ಗಸ್ತುದಾರಿಗಳು, ಟ್ರ್ಯಾಕ್‌ಮೆನ್, ವಾಚ್‌ಮೆನ್, ಸ್ಟೇಶನ್ ಮಾಸ್ಟರ್ಸ್‌ ಹಾಗೂ ತಾಂತ್ರಿಕ ವಿಭಾಗ ಮೇಲ್ವಿಚಾರಕರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X