Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾಹೆ ಸಹಕುಲಪತಿಯಾಗಿ ಮೇ.ಜ.ಮ್ಯಾಥ್ಯೂಸ್...

ಮಾಹೆ ಸಹಕುಲಪತಿಯಾಗಿ ಮೇ.ಜ.ಮ್ಯಾಥ್ಯೂಸ್ ಜೇಕಬ್

ವಾರ್ತಾಭಾರತಿವಾರ್ತಾಭಾರತಿ17 Jun 2026 9:29 PM IST
share
ಮಾಹೆ ಸಹಕುಲಪತಿಯಾಗಿ ಮೇ.ಜ.ಮ್ಯಾಥ್ಯೂಸ್ ಜೇಕಬ್

ಮಣಿಪಾಲ, ಜೂ.17: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿವಿಯ ಆರೋಗ್ಯ ವಿಜ್ಞಾನ ವಿಭಾಗದ ನೂತನ ಸಹಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ವಿಎಸ್‌ಎಂ (ನಿವೃತ್ತ) ಇವರನ್ನು ನೇಮಕ ಮಾಡಲಾಗಿದೆ.

ಡಾ.ಮ್ಯಾಥ್ಯೂಸ್ ಜೇಕಬ್, ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ 36 ವರ್ಷಗಳ ಸುದೀರ್ಘ ಹಾಗೂ ವಿಶಿಷ್ಟ ಸೇವಾ ಅನುಭವ ಹೊಂದಿದ್ದಾರೆ. ಕ್ಲಿನಿಕಲ್ ಕೇರ್, ವೈದ್ಯಕೀಯ ಶಿಕ್ಷಣ, ಸಂಶೋಧನೆ, ಆರೋಗ್ಯ ರಕ್ಷಣಾ ನಾಯಕತ್ವ ಮತ್ತು ಸಾಂಸ್ಥಿಕ ಆಡಳಿತದಲ್ಲಿ ಅಪಾರ ಪರಿಣತಿ ಹೊಂದಿದ್ದಾರೆ.

ಪುಣೆಯ ಪ್ರತಿಷ್ಠಿತ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಅಲ್ಲದೇ ಅರಿವಳಿಕೆ ಮತ್ತು ಕ್ರಿಟಿಕಲ್ ಕೇರ್‌ನಲ್ಲಿ ಎಂಡಿ ಪದವಿ ಪಡೆದಿದ್ದಾರೆ. ಜೊತೆಗೆ ಡಿಎನ್‌ಬಿ ಮತ್ತು ನ್ಯಾಷನಲ್ ಅಕಾಡೆಮಿ ಆಫ್ ಮೆಡಿಕಲ್ ಸಾಯನ್ಸ್‌ನ ಸದಸ್ಯತ್ವ ಹೊಂದಿದ್ದಾರೆ. ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸಾಯನ್ಸ್‌ನಿಂದ ಆಸ್ಪತ್ರೆ ಆಡಳಿತದಲ್ಲಿ ಎಕ್ಸಿಕ್ಯೂಟಿವ್ ಸ್ನಾತಕೋತ್ತರ ಡಿಪ್ಲೊಮಾ, ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಿಂದ ಮೆಡಿಕಲ್ ಲಾ ಮತ್ತು ಎಥಿಕ್ಸ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದಿದ್ದಾರೆ.

ಪ್ರಸಿದ್ಧ ಅರಿವಳಿಕೆ ಮತ್ತು ಕ್ರಿಟಿಕಲ್ ಕೇರ್ ತಜ್ಞರಾಗಿರುವ ಇವರು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ಹೊಸ ಆವಿಷ್ಕಾರಗಳನ್ನು ಮಾಡಿದ್ದು, ರೋಗಿಗಳ ಆರೈಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದ ಅನುಭವ ಹೊಂದಿದ್ದಾರೆ.

ಪ್ರಾಧ್ಯಾಪಕರಾಗಿ ಬೋಧನೆ, ಸ್ನಾತಕೋತ್ತರ ತರಬೇತಿ, ಪಠ್ಯಕ್ರಮ ಅಭಿವೃದ್ಧಿ, ಮೌಲ್ಯಮಾಪನ ಮತ್ತು ವಿದ್ಯಾರ್ಥಿ ಮಾರ್ಗದರ್ಶನದಲ್ಲಿ 14 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿರುವ ಇವರು, ರಾಷ್ಟ್ರೀಯ ಮತ್ತು ಅಂತಾ ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ 35ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ.

ಸಶಸ್ತ್ರ ಪಡೆಗಳು ಮತ್ತು ಆರೋಗ್ಯ ವಲಯಕ್ಕೆ ನೀಡಿದ ಅಸಾಧಾರಣ ಸೇವೆ ಹಾಗೂ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ, 2023ರಲ್ಲಿ ಪ್ರತಿಷ್ಠಿತ ’ವಿಶಿಷ್ಟ ಸೇವಾ ಪದಕ’ವನ್ನು ಡಾ.ಜೇಕಬ್‌ಗೆ ನೀಡಿ ಗೌರವಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X