Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೇವಾ ನ್ಯೂನತೆ: ಗ್ರಾಹಕರಿಗೆ ಪರಿಹಾರ...

ಸೇವಾ ನ್ಯೂನತೆ: ಗ್ರಾಹಕರಿಗೆ ಪರಿಹಾರ ನೀಡಲು ಇನ್ಸೂರೆನ್ಸ್ ಕಂಪೆನಿಗೆ ಗ್ರಾಹಕ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ20 Jun 2026 8:26 PM IST
share
ಸೇವಾ ನ್ಯೂನತೆ: ಗ್ರಾಹಕರಿಗೆ ಪರಿಹಾರ ನೀಡಲು ಇನ್ಸೂರೆನ್ಸ್ ಕಂಪೆನಿಗೆ ಗ್ರಾಹಕ ನ್ಯಾಯಾಲಯ ಆದೇಶ

ಉಡುಪಿ, ಜೂ.20: ಸೇವಾ ನ್ಯೂನತೆ, ಅನುಚಿತ ವ್ಯಾಪಾರ ಸಾಬೀತಾಗಿ ರುವ ಹಿನ್ನೆಲೆಯಲ್ಲಿ ಚೋಲಮಂಡಲಮ್ ಜನರಲ್ ಇನ್ಸ್‌ರೆನ್ಸ್ ಕಂಪೆನಿಯು 15ಲಕ್ಷ ರೂ. ಶೇ.9ಬಡ್ಡಿಯೊಂದಿಗೆ ಹಾಗೂ ಪರಿಹಾರ ಮೊತ್ತವನ್ನು ಗ್ರಾಹಕರಿಗೆ ಪಾವತಿಸುವಂತೆ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.

ಬ್ರಹ್ಮಾವರ ಕೋಡಿ ಕನ್ಯಾನ ನಿವಾಸಿ ವೀಣಾ ಕಾಂಚನ್ ಎಂಬವರ ಮಗ ಚರಣ್ ಕಾಂಚನ್ ರಸ್ತೆ ಅಪಘಾತದಲ್ಲಿ ಮೃತಪಟ್ಟದ್ದರು. ಚರಣ್ ಹೊಂದಿದ್ದ ಕಡ್ಡಾಯ ವೈಯಕ್ತಿಕ ವಿಮಾ ಪಾಲಿಸಿ ಸಿಪಿಎಯಡಿಯಲ್ಲಿ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ವೀಣಾ ಕಾಂಚನ್ ಚೋಲಮಂಡಲಮ್ ಜನರಲ್ ಇನ್ಸ್‌ರೆನ್ಸ್ ಕಂಪೆನಿಗೆ ಸೂಕ್ತವಾದ ಎಲ್ಲಾ ದಾಖಲೆಗಳೊಂದಿಗೆ ಕ್ಲೇಮು ಅರ್ಜಿಯನ್ನು ಸಲ್ಲಿಸಿದ್ದರು.

ಆ ಕಂಪೆನಿಯು ಸಮಂಜಸ ಕಾರಣ ಇಲ್ಲದೆ ಕ್ಲೇಮು ಮೊತ್ತವನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತು. ನೊಂದ ಗ್ರಾಹಕರು ವಕೀಲರ ಮೂಲಕ ಸಂಬಂಧಪಟ್ಟ ಕಂಪೆನಿಗೆ ನೋಟೀಸನ್ನು ನೀಡಿದರೂ ಹಣವನ್ನು ಬಿಡುಗಡೆ ಗೊಳಿಸಲಿಲ್ಲ. ಕ್ಲೇಮು ಮೊತ್ತ ಹಾಗೂ ಪರಿಹಾರವನ್ನು ಪಡೆಯಲು ವೀಣಾ ಕಾಂಚನ್, ಗ್ರಾಹಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಅರ್ಜಿದಾರರ ಕ್ಲೇಮು ಸಲ್ಲಿಸಲಾದ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನ್ಯಾಯಾಲಯವು, ವಿಮಾ ಕಂಪೆನಿಗೆ ಸೂಕ್ತ ದಾಖಲೆಗಳನ್ನು ಕ್ಲೇಮುದಾರರು ಸಲ್ಲಿಸಿದರೂ, ಹೆಚ್ಚುವರಿ ದಾಖಲೆಯಾದ ಎಮ್‌ಎಲ್‌ಸಿ ಟ್ರೀಟ್‌ ಮೆಂಟ್ ರಿಪೋರ್ಟ್ ಕೇಳಿರುವುದು ಹಾಗೂ ಅದರ ಅಗತ್ಯತೆಯನ್ನು ವಿವರಿಸದೇ ಅನಗತ್ಯವಾಗಿ ಕ್ಲೇಮು ಮೊತ್ತ ವನ್ನು ನೀಡದೆ ಇರುವುದು ಸಕಾರಣವಾಗಿರುವುದಿಲ್ಲ ಎಂದು ಮನಗಂಡಿತು.

ವಿಮಾ ಕಂಪೆನಿಯ ಸೇವಾ ನ್ಯೂನತೆ ಹಾಗೂ ಅನುಚಿತ ವ್ಯಾಪಾರವನ್ನು ಸಾಬೀತು ಪಡಿಸುತ್ತದೆ ಎಂದು ಅರ್ಜಿದಾರರ ದೂರು ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು. ಕ್ಲೇಮು ಮೊತ್ತವಾದ 15ಲಕ್ಷ ರೂ.ವನ್ನು ವಕೀಲರ ನೋಟೀಸು ನೀಡಿದ 2024ರ ನ.23ರಿಂದ ಶೇ.9ರ ಬಡ್ಡಿಯೊಂದಿಗೆ ಪಾವತಿಸುವ ವರೆಗೆ ಹಾಗೂ ಪರಿಹಾರ ಮೊತ್ತ 25,000ರೂ. ಹಾಗೂ 10,000ರೂ. ವ್ಯಾಜ್ಯ ಖರ್ಚನ್ನು 2026ರ ಮೇ 18ರ ಆದೇಶದ ದಿನಾಂಕ ದಿಂದ 45 ದಿವಸದ ಒಳಗಾಗಿ ಪಾವತಿಸಬೇಕೆಂದು ಆದೇಶಿಸಿದೆ.

ಜಿಲ್ಲಾ ಗ್ರಾಹಕ ನ್ಯಾಯಾಲಯದ ಅಧ್ಯಕ್ಷ ಸುನೀಲ್ ಟಿ.ಮಾಸರಡ್ಡಿ ಹಾಗೂ ಸುಜಾತ ಬಿ.ಕೊರಳ್ಳಿ ಸದಸ್ಯರನ್ನೊಳ ಗೊಂಡ ನ್ಯಾಯಪೀಠವು ಈ ಆದೇಶ ನೀಡಿದೆ. ದೂರು ಅರ್ಜಿದಾರರ ಪರವಾಗಿ ವಕೀಲರಾದ ವಿವೇಕಾನಂದ ಮಲ್ಯ ಕಾರ್ಕಳ ಹಾಗೂ ಪ್ರವೀಣ್ ಎಂ.ಪೂಜಾರಿ ಮಲ್ಪೆ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X