Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಬಂದರಿನಲ್ಲಿ ನಿರ್ವಹಣೆ ಇಲ್ಲದೆ...

ಮಲ್ಪೆ ಬಂದರಿನಲ್ಲಿ ನಿರ್ವಹಣೆ ಇಲ್ಲದೆ ಪಾಳುಬಿದ್ದ ಶೌಚಾಲಯ: ಮೂಲಸೌಕರ್ಯಗಳ ಕೊರತೆಗೆ ಮೀನುಗಾರರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ29 Jun 2026 7:46 PM IST
share
ಮಲ್ಪೆ ಬಂದರಿನಲ್ಲಿ ನಿರ್ವಹಣೆ ಇಲ್ಲದೆ ಪಾಳುಬಿದ್ದ ಶೌಚಾಲಯ: ಮೂಲಸೌಕರ್ಯಗಳ ಕೊರತೆಗೆ ಮೀನುಗಾರರ ಆಕ್ರೋಶ

ಉಡುಪಿ, ಜೂ.29: ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾ ಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ಇಂದಿಗೂ ಬಳಕೆಗೆ ಲಭ್ಯವಾಗದೇ ನಿರುಪಯುಕ್ತವಾಗಿ ಬಿದ್ದಿವೆ. ಮಹಿಳಾ ಮೀನುಗಾರರಿಗಾಗಿ ನಿರ್ಮಿಸಿದ್ದ ವಿಶ್ರಾಂತಿ ಕೊಠಡಿಯೂ ಪಾಳುಬಿದ್ದಿದ್ದು, ಮೂಲಸೌಕರ್ಯಗಳ ಕೊರತೆ ಬಗ್ಗೆ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆ ಇಲಾಖೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಿದ್ದರೂ, ಅವುಗಳನ್ನು ನಿರ್ವಹಿಸಲು ಸಿಬ್ಬಂದಿ ಯನ್ನು ನೇಮಿಸದ ಕಾರಣ ಸಾರ್ವಜನಿಕ ಬಳಕೆಗೆ ತೆರೆಯಲಾಗಿಲ್ಲ ಎಂದು ಮೀನುಗಾರರು ದೂರಿದ್ದಾರೆ.

ಮಲ್ಪೆ ಬಂದರಿನಲ್ಲಿ ಪ್ರತಿದಿನ ಸುಮಾರು 700 ಮೀನುಗಾರಿಕಾ ದೋಣಿಗಳು ಮೀನು ಇಳಿಸುತ್ತಿದ್ದು, ಸಾವಿರಾರು ಮೀನುಗಾರರು ಮತ್ತು ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೆ ಶೌಚಾಲಯದ ಸೌಲಭ್ಯ ಇಲ್ಲದ ಕಾರಣ ಅವರು ಕಿಲೋಮೀಟರ್ಗಳಷ್ಟು ದೂರ ತೆರಳಿ ಶೌಚಾಲಯ ಬಳಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ ಎಂದು ಮಲ್ಪೆ ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ ದಯಾಕರ ಸುವರ್ಣ ತಿಳಿಸಿದ್ದಾರೆ.

ಶೌಚಾಲಯಗಳ ನಿರ್ವಹಣೆಗಾಗಿ ಸಿಬ್ಬಂದಿಯನ್ನು ನೇಮಿಸುವಂತೆ ಮೀನುಗಾರಿಕೆ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜನಪ್ರತಿನಿಧಿಗಳು ಕೂಡ ಇತ್ತ ಗಮನಹರಿಸುತ್ತಿಲ್ಲ ಎಂದು ಅವರು ದೂರಿದರು.

ಕುಡಿಯುವ ನೀರಿನ ಟ್ಯಾಂಕ್ ಕೂಡ ದುಸ್ಥಿತಿಯಲ್ಲಿದ್ದು, ನಿರ್ಮಿಸಲಾದ ಮೂಲಸೌಕರ್ಯಗಳು ನಿರ್ವಹಣೆಯ ಕೊರತೆ ಯಿಂದ ಹಾಳಾಗುತ್ತಿವೆ. ಹಾಗಾಗಿ ಕೂಡಲೇ ಶೌಚಾಲಯಗಳನ್ನು ದುರಸ್ತಿಗೊಳಿಸಿ, ಅವುಗಳ ನಿರ್ವಹಣೆಗೆ ಸಿಬ್ಬಂದಿ ಯನ್ನು ನೇಮಿಸಬೇಕು. ಸಾಧ್ಯವಾಗದಿದ್ದರೆ ಸ್ಥಳೀಯರಿಗೆ ಟೆಂಡರ್ ಮೂಲಕ ನಿರ್ವಹಣೆಯ ಜವಾಬ್ದಾರಿ ವಹಿಸಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.

ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆ ಯತ್ತ ತಕ್ಷಣ ಗಮನಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X