Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭವಿಷ್ಯನಿಧಿ ಪಿಂಚಣಿದಾರರ ಪಿಂಚಣಿ...

ಭವಿಷ್ಯನಿಧಿ ಪಿಂಚಣಿದಾರರ ಪಿಂಚಣಿ ಹೆಚ್ಚಳಕ್ಕೆ ಹೋರಾಟ ಒಂದೇ ದಾರಿ: ಸುಕುಮಾರ್ ತೊಕ್ಕೊಟ್ಟು

ವಾರ್ತಾಭಾರತಿವಾರ್ತಾಭಾರತಿ5 July 2026 7:13 PM IST
share
ಭವಿಷ್ಯನಿಧಿ ಪಿಂಚಣಿದಾರರ ಪಿಂಚಣಿ ಹೆಚ್ಚಳಕ್ಕೆ ಹೋರಾಟ ಒಂದೇ ದಾರಿ: ಸುಕುಮಾರ್ ತೊಕ್ಕೊಟ್ಟು

ಉಡುಪಿ, ಜು.5: ಭವಿಷ್ಯನಿಧಿ ಪಿಂಚಣಿದಾರರ ಕನಿಷ್ಠ ಪಿಂಚಣಿಯನ್ನು 2014ರಲ್ಲಿ 1000ರೂ. ನಿಗದಿ ಪಡಿಸಲಾ ಗಿದ್ದು, ಕಳೆದ 12ವರ್ಷಗಳಿಂದ ನಯಾ ಪೈಸೆ ಕೂಡ ಹೆಚ್ಚಳ ಮಾಡಿಲ್ಲ. ಈ ಪಿಂಚಣಿಯನ್ನು ಹೆಚ್ಚಿಸಲು ಬೀದಿಗೆ ಇಳಿದು ಹೋರಾಟ ಮಾಡುವುದು ಒಂದೇ ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಿಂಚಣಿದಾರ ಸಂಘದ ಪ್ರಧಾನ ಕಾರ್ಯದರ್ಶಿ ಸುಕುಮಾರ್ ತೊಕ್ಕೊಟ್ಟು ಹೇಳಿದ್ದಾರೆ.

ಉಡುಪಿ ವಲಯ ಭವಿಷ್ಯ ನಿಧಿ ಪಿಂಚಣಿದಾರರ ಸಂಘ(ಸಿಐಟಿಯು) ವತಿಯಿಂದ ಬನ್ನಂಜೆ ಶ್ರೀನಾರಾಯಣ ಗುರು ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಾರ್ಮಿಕರ ಭವಿಷ್ಯಕ್ಕಾಗಿ 1952ರಲ್ಲಿ ಭವಿಷ್ಯ ನಿಧಿಯನ್ನು ಸರಕಾರ ಸ್ಥಾಪಿಸಿದ್ದು, 1995ರಲ್ಲಿ ಇದರಲ್ಲಿ ಪಿಂಚಣಿ ಯೋಜನೆಯನ್ನು ಆರಂಭಿಸ ಲಾಯಿತು. ಇದಕ್ಕೆ ಹಣವನ್ನು ಕೇಂದ್ರ ಅಥವಾ ರಾಜ್ಯ ಸರಕಾರ ನೀಡದೆ ಕಾರ್ಮಿಕರ ಸಂಬಂಳದಿಂದಲೇ ಕಡಿತ ಮಾಡಲಾಗುತ್ತದೆ. ಅದಕ್ಕೆ ಮಾಲಕರ ಹಣ ಸೇರಿಸಿ ಭವಿಷ್ಯ ನಿಧಿಯನ್ನು ಪಾವತಿಸಲಾ ಗುತ್ತದೆ. 2014ರಲ್ಲಿ ಕನಿಷ್ಠ ಪಿಂಚಣಿಯನ್ನು 1000ರೂ. ನಿಗದಿ ಮಾಡಲಾಯಿತು ಎಂದರು.

ದೇಶದಲ್ಲಿ 75ಲಕ್ಷ ಮಂದಿ ಭವಿಷ್ಯ ನಿಧಿಯಲ್ಲಿ ಪಿಂಚಣಿ ಪಡೆಯುತ್ತಿದ್ದು, ಇದರಲ್ಲಿ ಬಹುತೇಕ ಮಂದಿ ಕನಿಷ್ಠ ಪಿಂಚಣಿಯ ಒಳಗೆ ಬರುವವರು ಆಗಿದ್ದಾರೆ. ಉಳಿದಂತೆ ಹೆಚ್ಚುವರಿ ಪಿಂಚಣಿ ಪಡೆಯುವವರು ಕೂಡ ಇದ್ದಾರೆ. ಭವಿಷ್ಯ ನಿಧಿಯಲ್ಲಿ ಸುಮಾರು 10ಸಾವಿರ ಕೋಟಿ ರೂ. ಹಣ ಕ್ಲೈಮ್ ಆಗದೇ ಉಳಿದುಕೊಂಡಿದೆ. ಇದನ್ನು ಪಡೆ ಯಲು ಆ ವ್ಯಕ್ತಿಗಳೇ ಇಲ್ಲ. ಆ ಹಣವನ್ನು ಪಿಂಚಣಿಗೆ ವರ್ಗಾಯಿಸಲು ಆಡಳಿತ ಮಂಡಳಿ ನಿರಾ ಕರಿಸುತ್ತಿದೆ. ಈ ಹಣ ವರ್ಗಾಯಿಸಿದರೆ ಪಿಂಚಣಿ ಮೊತ್ತವನ್ನು ಹೆಚ್ಚಳ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ತಿಳಿಸಿದರು.

2014ರಲ್ಲಿ ನಿಗದಿ ಪಡಿಸಿದ ಪಿಂಚಣಿ ಮೊತ್ತವನ್ನು 12ವರ್ಷಗಳ ನಂತರ ಅಂದರೆ 2026ರಲ್ಲಿಯೂ ಅಷ್ಟೇ ನೀಡಲಾಗುತ್ತಿದೆ. ಪಿಂಚಣಿದಾರರಲ್ಲಿ ಬಹುತೇಕರು ಹಿರಿಯ ನಾಗರಿಕರು. ಅವರಿಗೆ ಮುಖ್ಯವಾಗಿ ಆರೋಗ್ಯದ ಸಮಸ್ಯೆಗಳಿಗೆ ಈ ಪಿಂಚಣಿ ಬಳಕೆ ಆಗುತ್ತದೆ. ಆದರೆ ಔಷಧಿ ಬೆಲೆ ಏರಿಕೆ, ಆಸ್ಪತ್ರೆ ಶುಲ್ಕಗಳ ಏರಿಕೆಯಿಂದ ಆ ಪಿಂಚಣಿ ಹಣ ಸಾಕಾಗುತ್ತಿಲ್ಲ ಎಂದು ಅವರು ಹೇಳಿದರು.

ಭವಿಷ್ಯ ನಿದಿ ಪಿಂಚಣಿದಾರರ ಪಿಂಚಣಿ ಹೆಚ್ಚು ಮಾಡಲು ಸಂಘಟನೆ ಹಾಗೂ ಹೋರಾಟ ಮಾಡದಿದ್ದರೆ ಬೇರೆ ದಾರಿಯೇ ಇಲ್ಲ. ಈ ಬಗ್ಗೆ ಸಂಸದರು, ಶಾಸಕರು, ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಅದಕ್ಕಾಗಿ ಬೀದಿಗೆ ಇಳಿದು ಹೋರಾಟ ಮಾಡಬೇಕು. ಅದಕ್ಕೆ ಸಂಘಟನೆ ಮುಖ್ಯವಾಗಿದೆ ಎಂದು ಅವರು ತಿಳಿಸಿದರು.

ಅತಿಥಿಗಳಾಗಿ ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಶಶಿಧರ್ ಗೊಲ್ಲ, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್, ಜಿಲ್ಲಾ ಕೋಶಾಧಿಕಾರಿ ಬಲ್ಕೀಸ್, ಪಿಂಚಣಿದಾರರ ಸಂಘದ ಅಧ್ಯಕ್ಷೆ ಲಲಿತಾ ಸುವರ್ಣ ಗರಡಿಮಜಲು ಉಪಸ್ಥಿತರಿದ್ದರು.

ಕಾರ್ಯದರ್ಶಿ ಉಮೇಶ್ ಕುಂದರ್ ವರದಿ ವಾಚಿಸಿ, ಲೆಕ್ಕಚಾರ ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಮೂರು ವರ್ಷಕ್ಕೆ 19ಜನರ ಹೊಸ ಸಮಿತಿ ಆಯ್ಕೆ ಮಾಡಲಾಯಿತು. ನಳಿನಿ ಎಸ್. ನಿರ್ಣಯ ಮಂಡಿಸಿದರು. ಸರೋಜ ಎಸ್. ವಂದಿಸಿದರು.

‘ಉಡುಪಿ ಜಿಲ್ಲೆಯಲ್ಲಿ 25000ಕ್ಕೂ ಅಧಿಕ ಪಿಂಚಣಿದಾರರು ಇದ್ದಾರೆ. ಆದರೆ ಇಲ್ಲಿ ಭವಿಷ್ಯ ನಿಧಿ ಕಚೇರಿ ಕೂಡ ಇಲ್ಲ. ಸಂಘಟನೆ ಮೂಲಕ ಹೋರಾಟ ಮಾಡದೆ ಇದ್ದರೆ ನಮಗೆ ಯಾವುದೇ ಸೌಲಭ್ಯ ಪಡೆಯಲು ಸಾಧ್ಯ ಇಲ್ಲ’

-ಸುಕುಮಾರ್ ತೊಕ್ಕೊಟ್ಟು, ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪಿಂಚಣಿದಾರರ ಸಂಘ

‘ಪಿಂಚಣಿಗೆ ಪ್ರತಿವರ್ಷ ಡಿಎ ಸೇರಿಸಿ’

ಈಗ ನಿಗದಿ ಪಡಿಸಿರುವ ಪಿಂಚಣಿಗೆ ಪ್ರತಿವರ್ಷ ಬೆಲೆ ಏರಿಕೆ ಆಗು ವಂತಹ ಅಂಶ(ಡಿಎ)ವನ್ನು ಸೇರಿಸಬೇಕು. ಇದನ್ನು ಪ್ರತಿವರ್ಷ ಸರಕಾರವೇ ಮಾರ್ಚ್‌ನಲ್ಲಿ ಪ್ರಕಟಿಸುತ್ತದೆ. ಅದರ ಆಧಾರದಲ್ಲಿ ಮಾಡಿದರೆ ಕ್ರಮೇಣ ಪಿಂಚಣಿ ಹೆಚ್ಚಾಗುತ್ತದೆ. ಇದು ನಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ಸುಕುಮಾರ್ ತೊಕ್ಕೊಟ್ಟು ತಿಳಿಸಿದರು.

ಅದೇ ರೀತಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಆರೋಗ್ಯ ಕಾರ್ಡ್ ನೀಡಿ ಉಚಿತ ಅಥವಾ ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆ ಒದಗಿಸಬೇಕು. ಪಿಂಚಣಿ ಯೋಜನೆಯಲ್ಲಿ ರದ್ದು ಮಾಡಲಾದ ಆರ್‌ಓಸಿ ಮತ್ತು ಕಮುಟೆಷನ್ ವ್ಯವಸ್ಥೆಯನ್ನು ಮರು ಸ್ಥಾಪನೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X