Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಶಿಸದ ಪರಂಪರೆ ಯಕ್ಷಗಾನ: ಮೋಹನ್ ಹೆಗಡೆ...

ನಶಿಸದ ಪರಂಪರೆ ಯಕ್ಷಗಾನ: ಮೋಹನ್ ಹೆಗಡೆ ಅಭಿಮತ

ವಾರ್ತಾಭಾರತಿವಾರ್ತಾಭಾರತಿ11 July 2026 9:38 PM IST
share
ನಶಿಸದ ಪರಂಪರೆ ಯಕ್ಷಗಾನ: ಮೋಹನ್ ಹೆಗಡೆ ಅಭಿಮತ
ಮೂವರು ಹಿರಿಯ ತಾಳಮದ್ದಲೆ ಅರ್ಥಧಾರಿಗಳಿಗೆ ಪ್ರಶಸ್ತಿ ಪ್ರದಾನ

ಉಡುಪಿ, ಜು.11: ಯಕ್ಷಗಾನ ಎಂದೂ ನಶಿಸದ ಪರಂಪರೆ. ಎಲ್ಲವನ್ನೂ ಸ್ವೀಕರಿಸಿ ತನ್ನತನ ಉಳಿಸಿಕೊಳ್ಳುವುದು ಕಲೆಯ ಮನೋಧರ್ಮ. ಆದರೆ ಸ್ವಾರ್ಥಕ್ಕೆ ಯಾರೂ ಕಲೆ, ಪರಂಪರೆಯನ್ನು ಬಳಸಬಾರದು ಎಂದು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ನ ನಿರ್ದೇಶಕ ಮೋಹನ್ ಭಾಸ್ಕರ ಹೆಗಡೆ ಹೇಳಿದ್ದಾರೆ.

ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶನಿವಾರ ಸಂಜೆ ಆಯೋಜಿಸಲಾದ ಮೂವರು ಹಿರಿಯ ತಾಳಮದ್ದಲೆ ಅರ್ಥಧಾರಿಗಳಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತಿದ್ದರು.

ಕರಾವಳಿ ಯಕ್ಷಗಾನದಲ್ಲಿ ತೆಂಕು-ಬಡಗು ಎಂಬ ಎರಡು ಪ್ರಭೇದಗಳಿವೆ. ಇವೆರಡನ್ನೂ ಒಗ್ಗೂಡಿಸಿದ ಅಥವಾ ಮಧ್ಯದಲ್ಲಿ ನಿಂತು ಸರಕಾರವೂ ಮಾಡಲಾಗದ ಕಾರ್ಯವನ್ನು ಯಕ್ಷಗಾನ ಕಲಾರಂಗ ಮಾಡುತ್ತಿದೆ ಎಂದು ಶ್ಲಾಘಿ ಸಿದ ಅವರು, ಕಲಾವಿದರ ಯೋಗಕ್ಷೇಮಕ್ಕಾಗಿ ಶ್ರಮಿಸುತ್ತಿರುವ ಮಾದರಿ ಸಂಸ್ಥೆ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಳಮದ್ದಳೆಯ ಹಿರಿಯ ಅರ್ಥಧಾರಿಗಳಾದ ಸುಳ್ಯದ ವೆಂಕಟರಾಮ ಭಟ್ ಅವರಿಗೆ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ಪ್ರಶಸ್ತಿ, ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಡಾ.ಜಿ.ಕೆ. ಹೆಗಡೆ ಅವರಿಗೆ ಮಟ್ಟು ಮುರಳೀಧರ ರಾವ್ ಪ್ರಶಸ್ತಿ ಹಾಗೂ ಕಾರ್ಕಳದ ಕೋಟೆ ರಾಮ ಭಟ್ ಇವರಿಗೆ ಪೆರ್ಲ ಕೃಷ್ಣ ಭಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸ ಲಾಯಿತು.

ಬೆಂಗಳೂರಿನ ಮಾನವ ಹಕ್ಕುಗಳ ಆಯೋಗದ ಸದಸ್ಯ ಡಾ. ಟಿ. ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ಹಿರಿಯ ವಿದ್ವಾಂಸ ಡಾ. ತಾಳ್ತಜೆ ವಸಂತಕುಮಾರ್ ಶುಭಾಶಂಸನೆ ಮಾಡಿದರು. ಕುಂಭಾಶಿಯ ಹಿರಿಯ ಸಾಮಾಜಿಕ ಧುರೀಣ ಕೃಷ್ಣಪ್ರಸಾದ್ ಅಡ್ಯಂತಾಯ ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಸಂಸ್ಥೆಯ ನಾರಾಯಣ ಎಂ. ಹೆಗಡೆ ಪರಿಚಯಿಸಿದರು.

ತಾಳಮದ್ದಲೆ: ಸಭಾ ಕಾರ್ಯಕ್ರಮಕ್ಕೂ ಮೊದಲು ಖ್ಯಾತ ಕಲಾವಿದರ ಒಗ್ಗೂಡುವಿಕೆಯಲ್ಲಿ ಶ್ರೀರಂಗ ತುಲಾಭಾರ’ ತಾಳಮದ್ದಳೆ ಪ್ರದರ್ಶನ ಗೊಂಡಿತು. ಹಿಮ್ಮೇಳನದಲ್ಲಿ ಕಾವ್ಯಶ್ರೀ ಅಜೇರು, ಕೃಷ್ಣಪ್ರಕಾಶ ಉಳಿತ್ತಾಯ, ಚಂದ್ರ ಶೇಖರ ಆಚಾರ್ಯ ಹಾಗೂ ಅರ್ಥಧಾರಿಗಳಾಗಿ ವಾಸುದೇವ ರಂಗ ಭಟ್, ರಾಧಾಕೃಷ್ಣ ಕಲ್ಚಾರ್, ಪವನ್ ಕಿರಣ್‌ಕೆರೆ, ಡಾ.ಪ್ರದೀಪ್ ವಿ. ಸಾಮಗ ಪಾಲ್ಗೊಂಡಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X