Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾದಕ ವ್ಯಸನ ಮುಕ್ತ ಯುವ ಸಮಾಜಕ್ಕಾಗಿ...

ಮಾದಕ ವ್ಯಸನ ಮುಕ್ತ ಯುವ ಸಮಾಜಕ್ಕಾಗಿ ಜಾಗೃತಿ ಅತ್ಯಗತ್ಯ: ನಿತಿನ್ ರಾವ್ ವೈ

ವಾರ್ತಾಭಾರತಿವಾರ್ತಾಭಾರತಿ22 July 2026 7:47 PM IST
share
ಮಾದಕ ವ್ಯಸನ ಮುಕ್ತ ಯುವ ಸಮಾಜಕ್ಕಾಗಿ ಜಾಗೃತಿ ಅತ್ಯಗತ್ಯ: ನಿತಿನ್ ರಾವ್ ವೈ

ಉಡುಪಿ, ಜು.22: ಮಾದಕ ದ್ರವ್ಯ ಸೇವನೆ ವ್ಯಸನ ಇತ್ತೀಚೆಗೆ ದೇಶದ ಯುವಜನತೆಯಲ್ಲಿ ಹೆಚ್ಚಾಗಿದ್ದು, ಜಿಲ್ಲೆಯಲ್ಲೂ ಸಾಕಷ್ಟು ಪ್ರಕರಣಗಳು ಕಂಡುಬಂದಿವೆ. ಆದ್ದರಿಂದಮಾದಕ ವ್ಯಸನ ಮುಕ್ತ ಯುವ ಸಮಾಜದ ನಿರ್ಮಾಣಕ್ಕಾಗಿ ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಹೇಳಿದ್ದಾರೆ.

ನಗರದ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ ‘ರೈಸ್ ಆ್ಯಂಡ್ ಬೇಡ ಬ್ರೋ’ ಅಂಗವಾಗಿ ಜಿಲ್ಲಾಮಟ್ಟದ ಕಾಲೇಜು ಮಾದಕ ವ್ಯಸನ ವಿರೋಧಿ ಮತ್ತು ಜಾಗೃತಿ ಸಮಿತಿಗಳ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನರು ಮಾದಕ ವ್ಯಸನಿಗಳಾಗಲು ಕೌಟುಂಬಿಕ ಸಮಸ್ಯೆ, ಶೈಕ್ಷಣಿಕ ಒತ್ತಡ, ಸ್ನೇಹಿತರ ಒತ್ತಾಯ, ಕುತೂಹಲ, ಚಲನಚಿತ್ರಗಳ ಪ್ರಭಾವ ಪ್ರಮುಖ ಕಾರಣಗಳಾಗಬಹುದು. ಆದರೆ ಯುವ ಜನತೆ ಇವುಗಳ ಬಲೆಗೆ ಸಿಲುಕಿ ಅಥವಾ ಪ್ರೇರಣೆ ಪಡೆದು ದುಶ್ಚಟಗಳ ದಾಸರಾಗಬಾರದು ಎಂದು ಕಿವಿಮಾತು ಹೇಳಿದರು.

ಎನ್‌ಡಿಪಿಎಸ್ ಕಾಯ್ದೆ ಪ್ರಕಾರ ಮಾದಕ ವಸ್ತುಗಳ ಉತ್ಪಾದನೆ, ಸಾಗಾಣಿಕೆ, ಸೇವನೆ ಮತ್ತು ಇಟ್ಟುಕೊಳ್ಳುವಿಕೆ ಶಿಕ್ಷಾರ್ಹ ಅಪರಾಧ. 1 ಕಿಲೋಗಿಂತ ಹೆಚ್ಚಿನ ಮಾದಕ ವಸ್ತುಗಳನ್ನು ಹೊಂದಿದ್ದರೆ ಅದು ವಾಣಿಜ್ಯ ಪ್ರಕರಣವಾಗಿ ಇದರಲ್ಲಿ ಜಾಮೀನು ಕೂಡಾ ಸಿಗುವುದಿಲ್ಲ. ಯಾರಾದರೂ ಮಾದಕ ವಸ್ತುಗಳನ್ನು ಸೇವಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದಲ್ಲಿ ಕೂಡಲೇ ಕುಟುಂಬ ಸದಸ್ಯರಿಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ‘ಬೇಡ ಬ್ರೋ’ ಜಾಗೃತಿ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಯುವಜನತೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮದ ಅವಶ್ಯಕತೆ ಇದೆ. ಜೀವನದಲ್ಲಿ ನಾವು ಏನಾಗಬೇಕು ಎನ್ನುವುದು ನಮ್ಮ ಕೈಯಲ್ಲೇ ಇದೆ. ಯುವ ಜನರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಕಾರ್ಯಾಗಾರದಲ್ಲಿ ಪಡೆದ ಮಾಹಿತಿಯನ್ನು ಸ್ನೇಹಿತರು ಮತ್ತು ಕುಟುಂಬದವರ ಜೊತೆ ಹಂಚಿಕೊಂಡು ಎಲ್ಲರೂ ಮಾದಕ ವಸ್ತುಗಳಿಂದ ದೂರ ಇರುವಂತೆ ಮಾಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲೆಯಲ್ಲಿ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಾದಕ ವಸ್ತುಗಳನ್ನು ಸೇವಿಸು ವಂತೆ ಆಮಿಷ ನೀಡಲಾಗುತ್ತದೆ. ಇದು ಕೇವಲ ವೈಯಕ್ತಿಕ ಮತ್ತು ಸಾಮಾಜಿಕ ಸಮಸ್ಯೆ ಮಾತ್ರವಲ್ಲ ಇದು ದೇಶದ ಆಂತರಿಕ ಭದ್ರತೆಯ ಸಮಸ್ಯೆ ಕೂಡಾ ಹೌದು. ನಮ್ಮ ಯುವಕರನ್ನು ಮಾದಕ ವಸ್ತುಗಳ ದಾಸರಾಗಿಸಿ ದೇಶದ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುವ ಶತ್ರು ದೇಶಗಳ ಹುನ್ನಾರವಾಗಿದೆ. ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ತಡೆಯಲು ಕ್ಯೂಆರ್ ಕೋಡ್ ಅನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರು ಮಾಹಿತಿ ನೀಡಬಹುದು. ಅದಾಗಲೇ 500 ಇನ್‌ಪುಟ್‌ಗಳು ಬಂದಿದ್ದು 42 ಪ್ರಕರಣಗಳು ದಾಖಲಾಗಿದೆ ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಶ್ರೀ ಮಾತಾ ಆಸ್ಪತ್ರೆಯ ಪ್ರಕಾಶ್ ತೋಳಾರ್, ಮನೋ ವೈದ್ಯ ಡಾ.ವಿರೂಪಾ ಕ್ಷಪ್ಪ ದೇವರಮನೆ ಹಾಗೂ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಸರ್ಜನ್ ಡಾ. ಅಶೋಕ್, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಷನ್, ಪದವಿ ಕಾಲೇಜುಗಳ ಸಮನ್ವಯಕಾರ ರವೀಂದ್ರ ಉಪಾಧ್ಯಾಯ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಂಜುನಾಥ್ ಭಟ್, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ತೆಂಕ ನಿಡಿಯೂರು ಕಾಲೇಜು ಪ್ರಾಂಶುಪಾಲ ಪ್ರೊ.ನಿತ್ಯಾನಂದ ಗಾಂವ್ಕರ್ ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ ಉಪ ವಿಭಾಗ ಉಪನಿರೀಕ್ಷಕ ಎಚ್.ಡಿ ಕುಲಕರ್ಣಿ ಸ್ವಾಗತಿಸಿ, ಮಹಿಳಾ ಪೊಲೀಸ್ ಠಾಣೆ ನಿರೀಕ್ಷಕ ರಾಘವೇಂದ್ರ ವಂದಿಸಿದರು. ಎಪಿಸಿ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X