Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆರು ಮಂದಿಯ...

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆರು ಮಂದಿಯ ಹೆಸರು ಶಿಫಾರಸ್ಸು: ಹಿಮ್ಮತ್‌ಸಿಂಗ್

ವಾರ್ತಾಭಾರತಿವಾರ್ತಾಭಾರತಿ25 July 2026 9:39 PM IST
share
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆರು ಮಂದಿಯ ಹೆಸರು ಶಿಫಾರಸ್ಸು: ಹಿಮ್ಮತ್‌ಸಿಂಗ್
ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಉಡುಪಿ: ಎಐಸಿಸಿ ಸಭೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಧಾರದಂತೆ ದೇಶವ್ಯಾಪ್ತಿ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹೊಸ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇದೀಗ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯ ಪಕ್ಷದ ಪ್ರಮುಖರ ಮೂಲಕ ಅಭಿಪ್ರಾಯವನ್ನು ಸಂಗ್ರಹಿಸಿ ಆರು ಮಂದಿಯ ಹೆಸರನ್ನು ಆಯ್ಕೆಗಾಗಿ ಎಐಸಿಸಿಗೆ ಕಳುಹಿಸಿ ಕೊಡಲಾಗುತ್ತದೆ ಎಂದು ಉಡುಪಿ ಜಿಲ್ಲೆಗೆ ಎಐಸಿಸಿ ವೀಕ್ಷಕ ಹಿಮ್ಮತ್‌ಸಿಂಗ್ ಪಟೇಲ್ ಹೇಳಿದ್ದಾರೆ.

ಪಕ್ಷದ ಸಂಘಟನಾ ಸೃಜನಾ ಅಭಿಯಾನ (ಎಸ್‌ಎಸ್‌ಎ)ದ ಅಂಗವಾಗಿ ಜಿಲ್ಲೆಗೆ ಆಗಮಿಸಿ ಬ್ರಹ್ಮಗಿರಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಜಿಲ್ಲಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಕುರಿತು ವಿವರಗಳನ್ನು ನೀಡಿದರು.

ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕೆಲಸವಾಗುತ್ತಿದೆ. ಯುವ ನಾಯಕತ್ವದ ಮೂಲಕ ಪಕ್ಷಕ್ಕೆ ಹೊಸ ರೂಪ ನೀಡುವ ಬಗ್ಗೆ ಚಿಂತಿಸಲಾಗಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಗೆ ಸಿಕ್ಕಿದ ಅಭೂತಪೂರ್ವ ಬೆಂಬಲದಿಂದ ಸ್ಪೂರ್ತಿಗೊಂಡು ಜಿಲ್ಲಾ ಮಟ್ಟದಿಂದಲೇ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಬಗ್ಗೆ ಚಿಂತಿಸಿದ್ದಾರೆ.

ಈ ಸಲುವಾಗಿ ಸಂಘಟನಾ ಸೃಜನಾ ಅಭಿಯಾನವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಚುಕ್ಕಾಣಿಯನ್ನು ಯಾರಿಗೆ ನೀಡಬೇಕೆನ್ನುವ ಬಗ್ಗೆ ಸರ್ವೇ ನಡೆಸಲು ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಲಿ ಸಭೆ ನಡೆಸಿ ಅಲ್ಲಿನ ಕಾರ್ಯಕರ್ತರ, ನಾಯಕರ ಅಭಿಪ್ರಾಯ ಪಡೆಯಲಾಗುವುದು. ಕೊನೆಗೆ ಜಿಲ್ಲೆಯಿಂದ ಅರ್ಹರಾದ ಆರು ಮಂದಿಯ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವ ಉದ್ದೇಶದಿಂದ ಹೊಸ ನಾಯಕರ ಆಯ್ಕೆ ಮಾಡಲಾಗುತ್ತಿದೆ. ಈ ಬಗ್ಗೆ ಜಿಲ್ಲೆಯ ಮಾಜಿ ಶಾಸಕರು, ಸಚಿವರು, ಸಂಸದರು, ಚುನಾಯಿತ ಜನಪ್ರತಿನಿಧಿ, ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಅಭಿಪ್ರಾಯವನ್ನು ಕ್ರೋಢಿಕರಿಸಲಾಗುತ್ತದೆ. ಈ ಮೂಲಕ ಜಿಲ್ಲೆಗೆ ಬೇಕಾದ ನಾಯಕರನ್ನು ಜನರೇ ಆಯ್ಕೆ ಮಾಡುವ ಇರಾದೆಯನ್ನು ಪಕ್ಷ ಹೊಂದಿದೆ. ಈ ಪ್ರಕ್ರಿಯೆ ಚುನಾವಣೆಗೆ ಸಂಬಂಧಿತ ವಿಚಾರವಲ್ಲ ಎಂದರು.

ತಿಂಗಳೊಳಗೆ ಜಿಲ್ಲಾಧ್ಯಕ್ಷರ ಆಯ್ಕೆ: ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ, ಬ್ಲಾಕ್ ಮಟ್ಟ ಹಾಗೂ ಜನಪ್ರತಿನಿಧಿಗಳನ್ನು ಭೇಟಿಯಾಗಿ ಅಭಿಪ್ರಾಯವನ್ನು ಸಂಗ್ರಹಿಸುತ್ತೇವೆ. ಒಂದು ವಾರ ಜಿಲ್ಲೆಯಲ್ಲಿದ್ದು, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ 6 ಮಂದಿಯ ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ. ಈ ಪಟ್ಟಿಯಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರು ಸೇರಿದಂತೆ ಸಾಮಾಜಿಕ ನ್ಯಾಯಕ್ಕೆ ಆದ್ಯತೆಯನ್ನು ಕೊಡಲಾಗುತ್ತದೆ. ಹೈಕಮಾಂಡ್ ಈ ಪಟ್ಟಿಯನ್ನು ಪರಿಶೀಲಿಸಿ ಅಭ್ಯರ್ಥಿಯ ಸಾಮರ್ಥ್ಯಕ್ಕೆ ಅನುಗುಣವಾಗಿ ಆಗಸ್ಟ್ ಕೊನೆಯ ವಾರದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ತಳಮಟ್ಟದಿಂದ ಪಕ್ಷ ಸಂಘಟಿಸಿ ಇನ್ನಷ್ಟು ಗಲಿಷ್ಠಗೊಳಿ ಸುವ ಉದ್ದೇಶದಿಂದ ಹಿಮ್ಮತ್ ಸಿಂಗ್ ಅವರು ಆಗಮಿಸಿದ್ದು, ಜು.30ರವರಗೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ, 10 ಬ್ಲಾಕ್‌ಗಳಿಗೆ ಭೇಟಿ ನೀಡಲಿದ್ದಾರೆ. ನಾಯಕರು, ಅಭ್ಯರ್ಥಿಗಳು, ರಾಜಕೀಯ ನೇತಾರರ ಅಭಿಪ್ರಾಯವನ್ನು ಸಂಗ್ರ ಹಿಸಿ ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡುವ ಹೊಸ ನಾಯಕತ್ವ ವನ್ನು ಉತ್ತೇಜಿಸುವ ಉದ್ದೇಶ ಹೊಂದಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಭಿಯಾನದ ಉಸ್ತುವಾರಿ ಶಾಲೆಟ್ ಪಿಂಟೋ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಹರೀಶ್ ಕಿಣಿ ಅಲೆವೂರು, ಜ್ಯೋತಿ ಹೆಬ್ಬಾರಂ, ಕೃಷ್ಣ ಶೆಟ್ಟಿ ಬಜಗೋಳಿ, ವಿಶ್ವಾಸ್ ಅಮೀನ್, ಅಬ್ದುಲ್ ಅಝೀಝ್, ನವೀನ್ಚಂದ್ರ ಶೆಟ್ಟಿ, ರೋಶನ್ ಶೆಟ್ಟಿ, ಸೌರಭ್ ಬಲ್ಲಾಳ್, ಸದಾನಂದ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.‌





share
ವಾರ್ತಾಭಾರತಿ
ವಾರ್ತಾಭಾರತಿ
Next Story
X