Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ತಗ್ಗಿದ ಮಳೆಯ...

ಉಡುಪಿ ಜಿಲ್ಲೆಯಲ್ಲಿ ತಗ್ಗಿದ ಮಳೆಯ ಬಿರುಸು

ವಾರ್ತಾಭಾರತಿವಾರ್ತಾಭಾರತಿ5 Aug 2026 9:42 PM IST
share
ಉಡುಪಿ ಜಿಲ್ಲೆಯಲ್ಲಿ ತಗ್ಗಿದ ಮಳೆಯ ಬಿರುಸು

ಉಡುಪಿ, ಆ.5: ಈ ತಿಂಗಳ ಮೊದಲ ದಿನದಿಂದ ಧಾರಾಕಾರವಾಗಿ ಸುರಿದ ಮುಂಗಾರು ಮಳೆಯ ಬಿರುಸು ಇಂದು ತಗ್ಗಿದೆ. ಬುಧವಾರ ಹಗಲಿನಲ್ಲಿ ಆಗಾಗ ಕಾಣಿಸಿಕೊಂಡ ಮಳೆ, ಸಂಜೆಯ ವೇಳೆ ಬಿರುಸು ಪಡೆಯುವ ಲಕ್ಷಣ ಕಂಡುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಶೇ.27ರಷ್ಟು ಮಳೆ ಕೊರತೆ ಕಾಣಿಸಿಕೊಂಡಿದ್ದರೆ, ಇದೀಗ ಆಗಸ್ಟ್‌ನ ಮೊದಲ ಐದು ದಿನಗಳಲ್ಲಿ ವಾಡಿಕೆಗಿಂತ ಶೇ. 63ರಷ್ಟು ಅಧಿಕ ಮಳೆ ಸುರಿದಿದೆ. ಈ ಅವಧಿಯಲ್ಲಿ 213ಮಿ.ಮೀ. ಮಳೆಯಾ ಗಬೇಕಿದ್ದು ಈ ಬಾರಿ 346 ಮಿ.ಮೀ. ಮಳೆಯಾಗಿದೆ. ಇದರಿಂದ ನಿರಾಶೆಯಲ್ಲಿದ್ದ ಜಿಲ್ಲೆಯ ರೈತರ ಮುಖದಲ್ಲಿ ಮತ್ತೆ ನಗು ಕಾಣಿಸಿಕೊಂಡಿದೆ.

ನಿನ್ನೆ ಬೀಸಿದ ಗಾಳಿ-ಮಳೆಯಿಂದ ಕುಂದಾಪುರ ತಾಲೂಕು ಆನಗಳ್ಳಿ ಗ್ರಾಮದ ಮಂಜಯ್ಯ ಶೆಟ್ಟಿ ಅವರ ವಾಸ್ತವ್ಯದ ಮನೆ ಸಂಪೂರ್ಣ ಹಾನಿ ಗೊಂಡಿದ್ದು, ಒಂದು ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಜಿಲ್ಲೆಯಲ್ಲಿ 70.4ಮಿ.ಮೀ. ಮಳೆ: ಜಿಲ್ಲೆಯಲ್ಲಿ ಇಂದು ಸರಾಸರಿ 70.4ಮಿ.ಮೀ. ಮಳೆಯಾದ ವರದಿ ಬಂದಿದೆ. ಹೆಬ್ರಿಯಲ್ಲಿ 112.1ಮಿ.ಮೀ. ಮಳೆಯಾದರೆ ಕುಂದಾಪುರದಲ್ಲಿ 83.5ಮಿ.ಮೀ. ಬ್ರಹ್ಮಾವರದಲ್ಲಿ 78.7, ಬೈಂದೂರು 70.3, ಕಾರ್ಕಳ 50.3, ಉಡುಪಿ 40.9, ಕಾಪು 24.4ಮಿ.ಮೀ ಮಳೆಯಾದ ವರದಿ ಬಂದಿದೆ.

ಹೆಬ್ರಿಯಲ್ಲಿ ಅತ್ಯಧಿಕ ಮಳೆ: ಇಂದಿನ ಮಟ್ಟಿಗೆ ರಾಜ್ಯದಲ್ಲಿ ಅತ್ಯಧಿಕ ಮಳೆ ಬಿದ್ದಿರುವುದು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ. ಇಲ್ಲಿ ಆ.4ರ ಬೆಳಗ್ಗೆ 8:30ರಿಂದ ಆ.5ರ ಬೆಳಗ್ಗೆ 8:30ರವರೆಗೆ 24 ಗಂಟೆಗಳ ಅವಧಿಯಲ್ಲಿ ಒಟ್ಟು 185.2ಮಿ.ಮೀ. ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆ 143 ಮಿ.ಮೀ. ಮಳೆ ಕಂಡು ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕಳ್ತೂರಿನಲ್ಲಿ 140ಮಿ.ಮೀ. ಹಾಗೂ ನಾಲ್ಕೂರಿನಲ್ಲಿ 139.5ಮಿ.ಮೀ ಮಳೆಯಾದ ವರದಿ ಬಂದಿದೆ.

ಉಡುಪಿ ಜಿಲ್ಲೆಯ ಕುಚ್ಚೂರು (126), ಶಿವಪುರ (122), ಬಿಲ್ಲಾಡಿ (117), ಬೆಳ್ವೆ (111) ಮಿ.ಮೀ. ಮಳೆ ಕಂಡಿದೆ. ಉಳಿದಂತೆ ಹೆಂಗವಳ್ಳಿ, ಹಂಗಳೂರು, ಹಕ್ಲಾಡಿ, ಬಸರೂರು, ಕರ್ಜೆ, ಮೊಳಹಳ್ಳಿಗಳಲ್ಲೂ 100ಮಿ.ಮೀ.ಗಿಂತ ಅಧಿಕ ಮಳೆ ಸುರಿದಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X