ಕಾಂಗ್ರೆಸ್ ಸೇವಾದಳದಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಉಡುಪಿ, ಆ.15: ಉಡುಪಿ ಜಿಲ್ಲಾ ಸೇವಾದಳ ಕಾಂಗ್ರೆಸ್ ವತಿಯಿಂದ ಆಯೋಜಿಸಿದ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರಂ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ಉದಯ್ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ಸೇವಾದಳದ ಸದಸ್ಯರು ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.
Next Story




