Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವೈಜ್ಞಾನಿಕ ಕ್ರಮದಲ್ಲಿ ಕೃಷಿ ಪದ್ದತಿ...

ವೈಜ್ಞಾನಿಕ ಕ್ರಮದಲ್ಲಿ ಕೃಷಿ ಪದ್ದತಿ ಅಗತ್ಯ: ಭೂಮಿಕಾ

ವಾರ್ತಾಭಾರತಿವಾರ್ತಾಭಾರತಿ22 Aug 2026 6:38 PM IST
share
ವೈಜ್ಞಾನಿಕ ಕ್ರಮದಲ್ಲಿ ಕೃಷಿ ಪದ್ದತಿ ಅಗತ್ಯ: ಭೂಮಿಕಾ

ಶಿರ್ವ, ಆ.22: ಕರಾವಳಿ ಭಾಗದಲ್ಲಿ ಶಂಕರಪುರ ಮಲ್ಲಿಗೆ, ಮಂಗಳೂರು, ಕುಂದಾಪುರ, ಭಟ್ಕಳ ಮಲ್ಲಿಗೆ ಪ್ರಸಿದ್ಧವಾಗಿದ್ದು, ಸ್ಥಳದಿಂದ ಸ್ಥಳಕ್ಕೆ ಅದರ ಪರಿಮಳ, ಇಳುವರಿಯಲ್ಲಿ ವೈಧ್ಯತೆಗಳಿವೆ. ಪರಿಸರಕ್ಕೆ ಹೊಂದಿಕೊಂಡು ಆಯಾ ಪ್ರದೇಶಕ್ಕೆ ಅನುಗುಣವಾಗಿ ವೈಜ್ಞಾನಿಕ ಕ್ರಮದಲ್ಲಿ ಕೃಷಿ ಪದ್ದತಿ, ಗೊಬ್ಬರದ ಬಳಕೆ, ನಿರ್ವಹಣೆ, ರೋಗಾಣು ಗಳ ನಿಯಂತ್ರಣ, ಮಳೆ, ಬೇಸಿಗೆ, ಚಳಿಗಾಲದಲ್ಲಿ ಕೃಷಿಕರು ಗಮನಿಸಬೇಕು ಎಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಭೂಮಿಕಾ ಎಚ್.ಆರ್. ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು, ವಳದೂರು ವೆಲ್ಫೇರ್ ಅಸೋಸಿಯೇಶನ್ಸ್ ವಲದೂರು ಇದರ ಸಹಭಾಗಿತ್ವದಲ್ಲಿ ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಬುಧವಾರ ಜರುಗಿದ ಮಲ್ಲಿಗೆ ಕೃಷಿ, ಅಡಿಕೆ ಹಾಗೂ ಭತ್ತದ ಕೃಷಿ ಕುರಿತ ಮಾಹಿತಿ ಕಾಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.

ಕಾಯಾಗಾರವನ್ನು ಉದ್ಘಾಟಿಸಿದ ನಿವೃತ್ತ ಶಿಕ್ಷಕ, ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಮಾತನಾಡಿ, ನಮ್ಮ ಹಿರಿಯರು ಕಠಿಣ ಶ್ರಮಜೀವಿಗಳಾಗಿದ್ದು ಕೃಷಿಯೇ ಜೀವನಾಧಾರವಾಗಿತ್ತು. ವಿವಿಧ ಕಾರಣ ಗಳಿಂದ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿರಲಿಲ್ಲ. ಈಗ ಆಧುನಿಕ ಕಾಲಘಟ್ಟದಲ್ಲಿ ಯಂತ್ರೋಪಕರಣಗಳ ಬಳಕೆ, ವಿವಿಧ ರಸಗೊಬ್ಬರಗಳು, ಕೃಷಿ ಇಲಾಖೆುಂದ ಉಚಿತವಾಗಿ ಸಕಾಲಿಕ ಮಾಹಿತಿ ಹಾಗೂ ಪ್ರೋತ್ಸಾಹ ಸಿಗುತ್ತಿದ್ದು ಅದರ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು. ಕಡಿಮೆ ಶ್ರಮ, ಅಧಿಕ ಇಳುವರಿ ಪಡೆಯಲು ವೈಜ್ಞಾನಿಕ ಕೃಷಿ ಪದ್ಧತಿ ಪೂರಕವಾಗಿದೆ ಎಂದರು.

ಪ್ರಗತಿಪರ ರೈತ ನಿತ್ಯಾನಂದ ನಾಯಕ್ ಪಾಲಮೆ ಪಾದೂರು, ಸಾವಯವ ಭತ್ತದ ಬೆಳೆಯ ಬಗ್ಗೆ ಮಾಹಿತಿ ನೀಡಿ, ಜೀವಾಮೃತ ಸಿದ್ಧ ಪಡಿಸುವುದು, ಬಳಕೆ, ಹಸಿರೆಲೆ ಗೊಬ್ಬರ, ಸೆಣಬು, ಡಯಾಂಚ ಗೊಬ್ಬರ, ಗದ್ದೆ ಹದಗೊಳಿಸುವ ಕ್ರಮದ ಬಗ್ಗೆ ತಿಳಿಸಿ, ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಹಿರಿಯ ಕೃಷಿಕರಾದ ಗೋಪಾಲ ರಾವ್ ಪಾಲಮೆ, ಸೆವ್ರಿನ್ ಕಸ್ತಲಿನೊ ವಲದೂರು ಅವರನ್ನು ಸನ್ಮಾನಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶ್ ಪೂಜಾರಿ ವಲದೂರು ಸನ್ಮಾನಿತರನ್ನು ಪರಿಚಯ ಮಾಡಿದರು.

ಅಧ್ಯಕ್ಷತೆಯನ್ನು ಸಂಘದ ಮಾಜಿ ಅಧ್ಯಕ್ಷೆ ಹರೀಣಾಕ್ಷಿ ಶೆಟ್ಟಿ ವಹಿಸಿದ್ದರು. ವಲದೂರು ವೆಲ್ಫೇರ್ ಎಸೋಸಿಯೇಶನ್ ಕಾರ್ಯದರ್ಶಿ ಅಜಿತ್ ಪೂಜಾರಿ, ಕೃಷಿ ಸಖಿ ಪ್ರಜ್ಞಾ ವೇದಿಕೆಯಲ್ಲಿದ್ದರು. ಕಾಪು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪುಷ್ಪಲತಾ ಪ್ರಾಸ್ತಾಕ ಮಾತುಗಳೊಂದಿಗೆ ಸ್ವಾಗತಿಸಿ ವಂದಿಸಿದರು. ಬಳಿಕ ಕೃಷಿ ಕೇಂದ್ರದಿಂದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X