Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಂವಿಧಾನಿಕ ನೈತಿಕತೆಯಿಂದಲೇ ಸಮಾನತೆ...

ಸಾಂವಿಧಾನಿಕ ನೈತಿಕತೆಯಿಂದಲೇ ಸಮಾನತೆ ಸಾಧ್ಯ: ಡಾ.ಪ್ರಸಾದ್ ರಾವ್

ವಾರ್ತಾಭಾರತಿವಾರ್ತಾಭಾರತಿ24 Aug 2026 7:04 PM IST
share
ಸಾಂವಿಧಾನಿಕ ನೈತಿಕತೆಯಿಂದಲೇ ಸಮಾನತೆ ಸಾಧ್ಯ: ಡಾ.ಪ್ರಸಾದ್ ರಾವ್

ಉಡುಪಿ, ಆ.24: ಧರ್ಮಾಧಾರಿತ ನೈತಿಕತೆಗಿಂತ ಸಾಂವಿಧಾನಿಕ ನೈತಿಕತೆಯನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದು ಬಾರಕೂರು ಎಸ್‌ಆರ್‌ಎಸ್‌ಎಂಎನ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಪ್ರಸಾದ್ ರಾವ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಸಹಯೋಗದಲ್ಲಿ ಸೋಮವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ’ದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತಿದ್ದರು.

ಅಂಬೇಡ್ಕರ್ ಅವರ ವಿಚಾರಧಾರೆ ಹಾಗೂ ಬದುಕನ್ನು ಅಧ್ಯಯನ ಮಾಡುವುದರಿಂದ ಸ್ವಾತಂತ್ರ್ಯ ಮತ್ತು ಜವಾಬ್ದಾರಿಯ ಅರಿವು ಬೆಳೆಸಿ ಕೊಳ್ಳಬಹುದು. ಅವರ ಚಿಂತನೆಗಳನ್ನು ಅಳವಡಿಸಿಕೊಂಡು ವೈಯಕ್ತಿಕ ಆಶೋತ್ತರ ಗಳನ್ನು ಈಡೇರಿಸಿಕೊಳ್ಳುವುದರ ಜೊತೆಗೆ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ ರೂಪುಗೊಳ್ಳಬಹುದು ಎಂದರು.

ಅಂಬೇಡ್ಕರ್ ಅವರನ್ನು ಮೂರು ರೀತಿಯಲ್ಲಿ ಓದಬೇಕು. ವಿದ್ಯಾರ್ಥಿಗಳು ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಮೂರು ರೀತಿಯಲ್ಲಿ ಓದುವ ಮೂಲಕ ಅವರ ವಿಚಾರಧಾರೆ ಹಾಗೂ ಅಧ್ಯಯನದ ಆಳವನ್ನು ಅರಿತುಕೊಳ್ಳಬೇಕು. ಅಂಬೇಡ್ಕರ್ ಏನನ್ನು ಓದಿದ್ದರು ಎಂಬುದನ್ನು ತಿಳಿದು ಕೊಂಡು, ಅವರ ಅಧ್ಯಯನದ ವ್ಯಾಪ್ತಿಯನ್ನು ಅರ್ಥ ಮಾಡಿ ಕೊಳ್ಳಬೇಕು ಎಂದು ಅವರು ಹೇಳಿದರು.

ಮರಾಠಿ ಭಾಷಿಕರಾಗಿದ್ದ ಅಂಬೇಡ್ಕರ್, ಸಂಸ್ಕೃತ, ಪಾಲಿ, ಹಿಂದಿ, ಜರ್ಮನ್, ಇಂಗ್ಲಿಷ್ ಹಾಗೂ ಫ್ರೆಂಚ್ ಸೇರಿದಂತೆ ಹಲವು ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು. ಅಪಾರ ಓದುಗರಾಗಿದ್ದ ಅವರು ಸುಮಾರು 50 ಸಾವಿರ ಪುಸ್ತಕ ಗಳನ್ನು ಓದಿ, ಅವುಗಳ ಕುರಿತು ಟಿಪ್ಪಣಿಗಳನ್ನು ಬರೆದಿದ್ದರು ಎಂದು ಅವರು ತಿಳಿಸಿದರು.

ಅಂಬೇಡ್ಕರ್ ಮಹಾತ್ಮ ಗಾಂಧೀಜಿ, ವಿನಾಯಕ ದಾಮೋದರ ಸಾವರ್ಕರ್ ಹಾಗೂ ಡಬ್ಲ್ಯೂಇಬಿಡು ಬಾಯ್ಸ್ ಅವರಿಗೆ ಬರೆದ ಪತ್ರಗಳನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು. ಅವರು ರಚಿಸಿದ ಜಾತಿ ವಿನಾಶ’ ಕೃತಿಯ ಅಧ್ಯಯನವು ನಮ್ಮ ಚಿಂತನಾ ಕ್ರಮವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದೆ ಎಂದರು.

ಕವಿ ಸಿದ್ದಲಿಂಗಯ್ಯ ಅವರು ಅಂಬೇಡ್ಕರ್ ಕುರಿತು ಬರೆದಿರುವ ಕೃತಿಗಳನ್ನೂ ವಿದ್ಯಾರ್ಥಿಗಳು ಓದಬೇಕು. ಅಂತರ್ಜಾಲದಲ್ಲಿ ಲಭ್ಯವಿರುವ ವಿಶ್ವಾಸಾರ್ಹ ಮಾಹಿತಿಗಳನ್ನು ಅಧ್ಯಯನ ಮಾಡುವ ಮೂಲಕ ಅಂಬೇರ್ಡ್ಕ ಅವರ ವಿಚಾರಗಳನ್ನು ಮತ್ತಷ್ಟು ಆಳವಾಗಿ ತಿಳಿದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ ಮಾತನಾಡಿ, ಅಂಬೇಡ್ಕರ್ ಅವರ ಮೌಲ್ಯಗಳು ಸಾರ್ವಕಾಲಿಕವಾಗಿವೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿ, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರಗಳಿವೆ. ಅಂಬೇಡ್ಕರ್ ಪ್ರತಿಪಾದಿಸಿದ ಎಲ್ಲರನ್ನು ಒಳಗೊಳ್ಳುವಿಕೆ’ಯ ಆಶಯವನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಅಂಬೇಡ್ಕರ್ ಕುರಿತು ನಡೆದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾ ಯಿತು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಾಜೇಂದ್ರ ಕೆ. ಮಂಜುನಾಥ್ ಉಪಸ್ಥಿತರಿದ್ದರು. ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕಿ ಆಶಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X