ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ

ಕಾಪು, ಸೆ.5: ಉಡುಪಿ ಜಿಲ್ಲಾ ಕನ್ನಡ ಸಾತ್ಯ ಪರಿಷತ್ತು, ಕಾಪು ತಾಲೂಕು ಘಟಕದ ವತಿಯಿಂದ ಅ.3ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜರಗಲಿರುವ ಕಾಪು ತಾಲೂಕು ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ಧತಾ ಸಭೆಯು ಶುಕ್ರವಾರ ಕಾಲೇಜಿನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜರಗಿತು.
ಕಸಾಪ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ವಿಸ್ತಾರ, ಕಾರ್ಯಯೋಜನೆಗಳು, ಸಾಹಿತ್ಯ ಸಮ್ಮೇಳನಗಳ ಬಗ್ಗೆ ಮಾಹಿತಿ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು.
ಕಸಾಪ ಕಾಪು ಘಟಕದ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್ ಸಮ್ಮೇಳನದ ನೂತನ ಸ್ವಾಗತ ಸಮಿತಿ ರಚನೆಯ ಪ್ರಕ್ರಿಯೆ ನಡೆಸಿಕೊಟ್ಟರು. ಗೌರವ ಅಧ್ಯಕ್ಷರುಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರು ಗಳಾದ ಲಾಲಾಜಿ ಆರ್ ಮೆಂಡನ್, ವಿನಯಕುಮಾರ್ ಸೊರಕೆ, ಕಾಪು ಪುರಸಭಾ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಅಹಮ್ಮದ್ ಖಾನ್, ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ಕಾಲೇಜಿನ ಪ್ರಾಚಾರ್ಯ ಡಾ.ಗೋಪಾಲಕೃಷ್ಣ ಎಂ.ಗಾಂವ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು, ಜತೆ ಕಾರ್ಯದರ್ಶಿ ಅನ್ವರ್ಅಲಿ, ಸಮ್ಮೇಳನದ ಸರ್ವಾಧ್ಯಕ್ಷರ ಸ್ವಾಗತದೊಂದಿಗೆ ಕನ್ನಡ ಭುವನೇಶ್ವರೀ ಭಾರತಮಾತೆಯ ಶೋಭಾಯಾತ್ರೆ ಸಮಿತಿಯ ಸಂಚಾಲಕರಾಗಿ ಪುರಸಭಾ ಸದಸ್ಯರುಗಳಾದ ಅರುಣ್ ಶೆಟ್ಟಿ ಪಾದೂರು, ಅನಿಲ್ಕುಮಾರ್, ಊಟೋಪಚಾರ ಸಮಿತಿ ಸಂಚಾಲಕರಾಗಿ ಮಧುಕರ್ ಎಸ್.ಕಲ್ಯಾ, ಸ್ವಯಂ ಸೇವಕ ಸಮಿತಿ- ಶ್ರೀಕ್ಷೇ,ಧ.ಗ್ರಾಮಾಭಿವೃದ್ಧಿ ಯೋಜನೆ ಕಾಪು ಘಟಕವನ್ನು ನೇಮಿಸಲಾಯಿತು.
ಸಭೆಯಲ್ಲಿ ಕಾಪು ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಕಸಾಪ ಪ್ರತಿನಿಧಿ ಕೆ.ದೇವದಾಸ್ ಹೆಬ್ಬಾರ್, ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಎಂ.ಗಾಂವ್ಕರ್, ಪ್ರಾಧ್ಯಾಪಕ ಡಾ.ರಾಘವ ನಾಯ್ಕ್, ಕಾಪು ಪುರಸಭಾ ಸದಸ್ಯರುಗಳಾದ ಅರುಣ್ ಶೆಟ್ಟಿ ಪಾದೂರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ, ಹಿರಿಯ ಸಾಹಿತಿ ಮೋಹನ್ದಾಸ್ ಕಿಣಿ ಕಾಪು ಮೊದಲಾದವರುವ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಾಪು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ವಂದಿಸಿದರು.






