ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.15:ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಗೃಹರಕ್ಷಕ ದಳ, ಕರಾವಳಿ ಕಾವಲು ಪಡೆ, ಎಂಐಟಿಯ ಎನ್ನೆಸ್ಸೆಸ್ ವಿದ್ಯಾರ್ಥಿಗಳು, ರಾಜ್ ಫೀಶ್ ಮಿಲ್ ಹಾಗೂ ಕೊಚ್ಚಿನ್ ಶಿಪ್ ಯಾರ್ಡ್ನ ಸಿಬ್ಬಂದಿಗಳ ಸಹಯೋಗದೊಂದಿಗೆ ಮಲ್ಪೆ ಕಡಲ ತೀರದ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಸ್ವತಹ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ನಮ್ಮ ಉಡುಪಿ ಸ್ವಚ್ಛ ಉಡುಪಿ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ನಿಸರ್ಗದತ್ತವಾಗಿ ದೊರಕಿರುವ ಸುಂದರ ಕಡಲ ತೀರಗಳನ್ನು ಸ್ವಚ್ಛ ಹಾಗೂ ಸುರಕ್ಷಿತ ವಾಗಿಡಲು ಪ್ರತಿಯೊಬ್ಬ ನಾಗರಿಕರೂ ಪ್ರಯತ್ನಿಸಬೇಕು ಎಂದರು.
ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹೊಂದಿರುವ ಮಲ್ಪೆ ಬೀಚ್ನ ಹಿರಿಮೆಯನ್ನು, ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಕಡಲ ತೀರದ ಸ್ವಚ್ಛತೆ ಹಾಗೂ ಸುರಕ್ಷತೆ ಅತೀ ಮಹತ್ವದ್ದಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್ಗೆ ಆಗುಮಿಸುತ್ತಿರುದರಿಂದ ಬೀಚ್ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು ಎಂದರು.
ಪ್ಲಾಸ್ಟಿಕ್ನಂತಹ ವಸ್ತುಗಳ ಅವ್ಯಾಹತ ಬಳಕೆ ಮತ್ತು ಅವೈಜ್ಞಾನಿಕ ವಿಲೇವಾರಿಯಿಂದ ಪರಿಸರ ಮಾಲಿನ್ಯವಾ ಗುತ್ತಿದ್ದು, ಇದನ್ನು ಸಂರಕ್ಷಿಸುವ ಸಲುವಾಗಿ ಬೀಚ್ಗೆ ಆಗಮಿಸುವ ಸಾರ್ವಜನಿಕರು ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಸುರಕ್ಷಿತ ಸುಂದರ ಪರಿಸರವನ್ನು ರ್ನಿುಸಲು ಸಹಕರಿಸುವಂತೆ ತಿಳಿಸಿದರು.
ಸ್ವಚ್ಚತಾ ಕಾರ್ಯವನ್ನು ಮಲ್ಪೆಯ ಗಾಂಧಿ ವೃತ್ತದ ಎಡ ಹಾಗೂ ಬಲ ಭಾಗದ ಎರಡು ಕಿ.ಮೀ ರೆಗೆ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ರೋಶನ್ ಕುಮಾರ್ ಶೆಟ್ಟಿ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.






