Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಕಸ್ತೂರಿರಂಗನ್ ವರದಿ ಕೇಂದ್ರ ಸರಕಾರ...

‘ಕಸ್ತೂರಿರಂಗನ್ ವರದಿ ಕೇಂದ್ರ ಸರಕಾರ ಹಿಂದಕ್ಕೆ ಪಡೆಯಲಿ’

ವಾರ್ತಾಭಾರತಿವಾರ್ತಾಭಾರತಿ15 Sept 2026 10:02 PM IST
share
‘ಕಸ್ತೂರಿರಂಗನ್ ವರದಿ ಕೇಂದ್ರ ಸರಕಾರ ಹಿಂದಕ್ಕೆ ಪಡೆಯಲಿ’

ಉಡುಪಿ, ಸೆ.15: ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ಅಧಿಸೂಚನೆ ಯನ್ನು ಕೇಂದ್ರ ಸರಕಾರ ತಕ್ಷಣವೇ ಹಿಂದಕ್ಕೆ ಪಡೆಯುವಂತೆ ವರದಿ ಜಾರಿ ಯನ್ನು ವಿರೋಧಿಸುತ್ತಿರುವ ಹೆಬ್ರಿ, ಕಾರ್ಕಳ ಭಾಗದ ಕಾಂಗ್ರೆಸ್ ನಾಯಕರು ಮುನಿಯಾಲು ಉದಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಆಗ್ರಹಿಸಿದರು.

ಉಡುಪಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಏಳನೇ ಬಾರಿಗೆ ಅಧಿ ಸೂಚನೆ ಹೊರಡಿಸಿರುವುದು ಅಲ್ಲಿನ ನಿವಾಸಿಗಳಿಗೆ ಆತಂಕವನ್ನುಂಟು ಮಾಡಿದೆ. ಸೆ. 18ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೆಬ್ರಿ ತಾಲೂಕಿಗೆ ಆಗಮಿಸುವ ಸಂದರ್ಭದಲ್ಲಿ ವರದಿ ಬಾಧಿತ ಪ್ರದೇಶದ ಜನರು ಸಮಸ್ಯೆಯ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು. ರಾಜ್ಯದ 35 ಗ್ರಾಮಗಳು ಈ ವರದಿಯ ವ್ಯಾಪ್ತಿಯಲ್ಲಿವೆ. ಜನವಿರೋದಿ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಹಿಂಪಡೆಯುವಂತೆ ನಾವು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದೇವೆ ಎಂದರು.

ಈ ಭಾಗದ ಜನರು ನೂರಾರು ವರ್ಷಗಳಿಂದ ಭತ್ತ ತೆಂಗು, ಕಾಳು ಮೆಣಸು, ತರಕಾರಿ, ರಬ್ಬರ್ ಮೊದಲಾದ ಬೆಳೆಗಳನ್ನು ಬೆಳೆಸುತ್ತಾ ಕೃಷಿ ಕಾಯಕದಲ್ಲಿ ತೊಡಗಿದ್ದು ಕೇಂದ್ರ ಸರ್ಕಾರದ ಅಧಿಸೂಚನೆಯಿಂದ ಆತಂಕಿತರಾ ಗಿದ್ದಾರೆ. ಸ್ಥಳೀಯರ ಭೂಹಕ್ಕಿಗೆ ಧಕ್ಕೆ ಬರಬಾರದು, ಜನರು ನಿರಾತಂಕವಾಗಿ ಜೀವನ ಮಾಡುವಂತಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಸ್ಥಳೀಯರ ಅಹವಾಲುಗಳನ್ನು ಕೇಳದೆ, ಗ್ರಾಮ ಸಭೆಗಳನ್ನು ನಡೆಸದೆ ಕೇವಲ ವೈಮಾನಿಕ ಸಮೀಕ್ಷೆಯನ್ನು ನಡೆಸಿ ಎಸಿ ರೂಮಿನಲ್ಲಿ ಕುಳಿತು ಪಶ್ಚಿಮ ಘಟ್ಟ ರಕ್ಷಣೆ ಮಾಡುತ್ತೇವೆ ಎಂದು ವರದಿ ಕೇಳುವುದು ತೀವ್ರ ಖಂಡನೀಯ ಎಂದರು.

ಕಳೆದ ಮೂರು ದಶಕಗಳಿಂದ ಕರಾವಳಿಯಲ್ಲಿ ಬಿಜೆಪಿ ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಾ ಬಂದರೂ ಈ ಭಾಗದ ಜನರಿಗೆ ಬಿಜೆಪಿಯ ಕೊಡುಗೆ ಶೂನ್ಯ. ತುಳುನಾಡಿನ ಜನ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರು, ಆದಕ್ಕೆ ಪ್ರತಿಯಾಗಿ ಬಿಜೆಪಿ ತುಳುನಾಡಿನ ಜನರಿಗೆ ಯಾವ ಕೊಡುಗೆಯನ್ನು ನೀಡದೆ ಮೋಸ ಮಾಡಿದೆ, ಕೇವಲ ಧರ್ಮ ಧರ್ಮಗಳ ನಡುವೆ ಹೊಡೆದಾಡುವ ಗಲಭೆಗಳನ್ನು ಸೃಷ್ಟಿಸಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಹಾಳುಗೆಡವಿದ್ದೇ ಬಿಜೆಪಿ ಈ ಜಿಲ್ಲೆಗೆ ನೀಡಿದ ಕೊಡುಗೆಯಾಗಿದೆ ಎಂದು ಆರೋಪಿಸಿದರು.

ಕರಾವಳಿ ಜಿಲ್ಲೆಗಳು ರಾಜ್ಯದ ಸೇವಾ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿವೆ. ಸೇವಾವಲಯ ಗಳಾದ ಹೋಟೆಲ್ ಉದ್ಯಮ, ಬ್ಯಾಂಕಿಂಗ್ ಸೇವೆ, ಶಿಕ್ಷಣ ಕ್ರೇತ್ರ, ಕೈಗಾರಿಕೆಗಳಲ್ಲಿ ರಾಜ್ಯಕ್ಕೆ ಕರಾವಳಿಯ ಕೊಡುಗೆ ಅಪಾರವಾಗಿದೆ. ರಾಜ್ಯದ ತಲಾದಾಯದಲ್ಲಿಯೂ ಕರಾವಳಿ ಜಿಲ್ಲೆಯ ಸಾಮರ್ಥ್ಯ ಬೆಂಗಳೂರಿನ ನಂತರದ ಸ್ಥಾನ ದಲ್ಲಿದೆ. ಕರಾವಳಿ ರಾಜ್ಯದ ವಾಣಿಜ್ಯ ನಗರಿಯಾಗಿ ಬೆಳೆಯುವ ಎಲ್ಲಾ ಶಕ್ತಿ ಸಾಮರ್ಥ್ಯವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ವಿಶೇಷ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆಯಾಗಿರುವ ತುಳುವನ್ನು ಅಧಿಕೃತ ಬಾಷೆಯಾಗಿ ಘೋಷಿಸುವುದು ಮತು 8ನೇ ಪರಿಚ್ಛೇಧಕ್ಕೆ ಸೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲು ರಾಜ್ಯ ಸರಕಾರ ಮುಂದಾಗ ಬೇಕು. ತುಳುವರಿಗಾಗಿ ತುಳು ಅಭಿವೃದ್ಧಿ ನಿಗಮ ಘೋಷಿಸ ಬೇಕು ಎಂದೂ ಅವರು ಸರಕಾರವನ್ನು ಆಗ್ರಹಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಗೋಪಿನಾಥ್ ಭಟ್, ಯೋಗೀಶ್ ಆಚಾರ್ಯ, ಪ್ರದೀಪ್ ಬೇಲಾಡಿ, ಅಜಿತ್ ಹೆಗ್ಡೆ, ಅನಿಲ್ ಪೂಜಾರಿ ಮಾಳ, ಭಾನುಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X