Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹಕಾರ ಸಂಘಗಳಿಗೆ ಸರಕಾರ ಬೆಂಬಲ: ಸಚಿವ...

ಸಹಕಾರ ಸಂಘಗಳಿಗೆ ಸರಕಾರ ಬೆಂಬಲ: ಸಚಿವ ಬಸವಂತಪ್ಪ

ವಾರ್ತಾಭಾರತಿವಾರ್ತಾಭಾರತಿ16 Sept 2026 9:59 PM IST
share
ಸಹಕಾರ ಸಂಘಗಳಿಗೆ ಸರಕಾರ ಬೆಂಬಲ: ಸಚಿವ ಬಸವಂತಪ್ಪ

ಉಡುಪಿ, ಸೆ.16: ಸಹಕಾರ ಸಂಘಗಳು ದೇಶದ ಆರ್ಥಿಕತೆಗೆ ಉತ್ತೇಜನ ನೀಡುತ್ತವೆ. ಸಮುದಾಯದ ಕಟ್ಟ ಕಡೆಯ ಜನಕ್ಕೂ ಆರ್ಥಿಕ ಶಕ್ತಿ ನೀಡಿ ಅವರ ವ್ಯಾಪಾರಕ್ಕೆ ಉತ್ತೇಜನ ನೀಡುವ ಜೊತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೂ ಚೈತನ್ಯ ನೀಡುತ್ತವೆ. ಸರಕಾರದ ವ್ಯಾಪ್ತಿಯಲ್ಲಿ ಬರುವ ಸಹಕಾರ ಸಂಘಗಳ ಬೆನ್ನಿಗೆ ಸರಕಾರ ಸದಾ ನಿಲ್ಲಲಿದೆ ಎಂದು ರಾಜ್ಯ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೆ. ಎಸ್. ಬಸವಂತಪ್ಪ ಹೇಳಿದ್ದಾರೆ.

ಉದ್ಯಾವರ ಪಿತ್ರೋಡಿಯ ಮೀನುಗಾರಿಕೆ ಮತ್ತು ಮೀನು ಉತ್ಪನ್ನ ಸಾಮಗ್ರಿಗಳ ಸಹಕಾರ ಸಂಘದ ಮಲ್ಪೆ ಶಾಖೆಯಲ್ಲಿ ನೂತನವಾಗಿ ನವೀಕರಣಗೊಂಡ ಡೀಸೆಲ್ ಬಂಕ್ ಕಟ್ಟಡ ಉದ್ಘಾಟನೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಸಹಕಾರ ಸಂಘಗಳಲ್ಲಿ ಬರುವ ಲಾಭದ ಅಂಶವನ್ನು ಸಂಘದ ಸದಸ್ಯರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿನಿಯೋಗಿಸಿ ಕಡು ಬಡವರಿಗೆ ಪ್ರಯೋಜನ ವಾಗುವಂತೆ ನೋಡಿಕೊಳ್ಳಬೇಕು. ಜನರ ಆರ್ಥಿಕತೆಯ ಬೆನ್ನೆಲುಬಾದ ಸಹಕಾರ ಸಂಘ ಹೆಮ್ಮರವಾಗಿ ಬೆಳೆದು ಇನ್ನು ಹೆಚ್ಚಿನ ಅಭಿವೃದ್ಧಿ ಕಾಣಲಿ ಎಂದರು.

ಮಲ್ಪೆ ಬಂದರಿನ ಅವ್ಯವಸ್ಥೆಯನ್ನು ಖುದ್ದಾಗಿ ಕಂಡು ಬಂದಿದ್ದೇನೆ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಂದರಿನ ಸ್ವಚ್ಛತೆ ಆಧುನಿಕರಣ ಮೂಲಸೌಕರ್ಯ ಬಗ್ಗೆ ಮುಂದಿನ ದಿನಗಳಲ್ಲಿ ಗಮನಹರಿಸಿ ಈ ಬಗ್ಗೆ ಚರ್ಚೆ ನಡೆಸಿ ಯೋಜನೆಗಳನ್ನ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದರು.

ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಯಾರೂ ಮನೆಯಿಂದ ಹೊರಗೆ ಕಾಲಿಡಿದ ಕಾಲದಲ್ಲಿ ಮೀನುಗಾರ ಮಹಿಳೆಯರು ಬುಟ್ಟಿಯಲ್ಲಿ ಮೀನು ಹಿಡಿದುಕೊಂಡು ಮನೆಮನೆಗೆ ತೆರಳಿ ಮೀನು ಮಾರಾಟ ಮಾಡಿ ಮನೆಯ ಅರ್ಥ ವ್ಯವಸ್ಥೆಗೆ ಬಲ ತುಂಬಿದ್ದಾರೆ. ಮೀನುಗಾರಿಕೆ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹಳಷ್ಟಿದೆ. ಮೀನುಗಾರರಿಗೆ ನೀಡುವ ಸಂಕಷ್ಟ ಪರಿಹಾರ ನಿಧಿಯನ್ನು ಕಲ್ಯಾಣ ನಿಧಿ ಎಂದು ಬದಲಾಯಿಸಿ ಹೆಚ್ಚಿನ ಅನುದಾನ ದೊರಕುವಂತೆ ಮಾಡಬೇಕು. ಕರಾವಳಿಯಲ್ಲಿ ಒಂದು ಸೀ ಫುಡ್ ಪಾರ್ಕ್ ಆಗಬೇಕು. ಇದರಿಂದ ಕರಾವಳಿ ಭಾಗದಲ್ಲಿ ಉದ್ಯೋಗಾವಕಾಶ ಹೆಚ್ಚಲಿದೆ ಎಂದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ಸದಸ್ಯರು ಹಾಗೂ ಮೀನುಗಾರ ಮುಖಂಡರು ಹಲವು ಬೇಡಿಕೆಗಳನ್ನು ಮುಂದಿಟ್ಟು ಸಚಿವರಿಗೆ ಮನವಿ ಸಲ್ಲಿಸಿದರು.

ಮೀನುಗಾರಿಕೆ ಮತ್ತು ಮೀನು ಉತ್ಪನ್ನ ಸಾಮಗ್ರಿಗಳ ಸಹಕಾರ ಸಂಘದ ಅಧ್ಯಕ್ಷ ಗಿರೀಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ನಾಯಕರಾದ ವಿನಯಕುಮಾರ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಸಾದ್‌ರಾಜ್ ಕಾಂಚನ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರಾ, ಪಿತ್ರೋಡಿ ಹದಿನಾಲ್ಕು ಪಟ್ನ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೇಶವ ಎಂ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಗಿರೀಶ್ ಸುವರ್ಣಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X