Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ...

ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು: ಡಾ. ದಿವ್ಯಾ ರಾಣಿ

ವಾರ್ತಾಭಾರತಿವಾರ್ತಾಭಾರತಿ20 Sept 2026 6:31 PM IST
share
ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು: ಡಾ. ದಿವ್ಯಾ ರಾಣಿ

ಉಡುಪಿ : ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ ರೀತಿಯ ಲೈಂಗಿಕ ಕಿರುಕುಳಕ್ಕೆ ಸಮ್ಮತಿಯಾಗುವುದಿಲ್ಲ. ಅನುಚಿತ ವರ್ತನೆಗೆ ಅದನ್ನು ಅನುಭವಿಸಿದ ವ್ಯಕ್ತಿಯನ್ನೇ ಹೊಣೆ ಮಾಡುವುದು ಸರಿಯಲ್ಲ ಎಂದು ಉಡುಪಿ ಜಿಲ್ಲಾ ಪೊಶ್ ಸಮಿತಿ ಸದಸ್ಯೆ ಡಾ.ದಿವ್ಯಾ ರಾಣಿ ಪ್ರದೀಪ್ ಹೇಳಿದ್ದಾರೆ.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿ, ಯುವ ರೆಡ್‌ಕ್ರಾಸ್ ಘಟಕ, ಎನ್‌ಎಸ್‌ಎಸ್ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಲೈಂಗಿಕ ಕಿರುಕುಳ ತಡೆ(ಪೊಶ್) ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡುತಿದ್ದರು.

ಸಮ್ಮತಿ ಇಲ್ಲದೆ ನಡೆಯುವ ಯಾವುದೇ ಲೈಂಗಿಕ ವರ್ತನೆಯನ್ನು ಸಮರ್ಥಿಸಲಾಗದು. ಯಾರೊಂದಿಗಾದರೂ ಸ್ನೇಹ ಹೊಂದಿರುವುದು, ಏಕಾಂಗಿಯಾಗಿ ಇರುವುದಾಗಲಿ, ವಾಹನದಲ್ಲಿ ಪ್ರಯಾಣಿಸಲು ಒಪ್ಪಿಕೊಳ್ಳುವುದಾಗಲಿ ಅಥವಾ ಸೌಜನ್ಯದಿಂದ ವರ್ತಿಸುವುದಾಗಲಿ ಲೈಂಗಿಕ ವರ್ತನೆಗೆ ಅನುಮತಿ ನೀಡಿದಂತಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಲೈಂಗಿಕ ಕಿರುಕುಳದ ಕುರಿತು ಲಿಖಿತ ದೂರನ್ನು ಆಂತರಿಕ ಸಮಿತಿಗೆ ಸಲ್ಲಿಸಬಹುದು. ದೂರು ವಿಚಾರಣೆಯ ಸಂದರ್ಭದಲ್ಲಿ ಸಂಬಂಧಪಟ್ಟ ಎಲ್ಲರಿಗೂ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಬೇಕು. ಪ್ರಕ್ರಿಯೆಯು ಕಾನೂನು ಹಾಗೂ ಸಂಸ್ಥೆಯ ನಿಯಮಗಳಿಗೆ ಅನುಗುಣವಾಗಿ ನಡೆಯಬೇಕು ಎಂದು ಅವರು ಹೇಳಿದರು.

ಕನ್ನಡ ಲೇಖಕಿ ವಸಂತಿ ಶೆಟ್ಟಿ ಬ್ರಹ್ಮಾವರ ಮಾತನಾಡಿ, ಕಾಲ ಬದಲಾದಂತೆ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಸ್ವರೂಪವೂ ಬದಲಾಗಿದೆ. ಹಿಂದೆ ಕೌಟುಂಬಿಕ ದೌರ್ಜನ್ಯ ಸೇರಿದಂತೆ ಕೆಲವು ಸಮಸ್ಯೆಗಳು ಪ್ರಮುಖ ವಾಗಿದ್ದರೆ, ಇಂದು ಅತ್ಯಾಚಾರ, ಕೊಲೆ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಸವಾಲುಗಳು ಎದುರಾಗಿವೆ. ಮನೆ, ಕೆಲಸದ ಸ್ಥಳ ಹಾಗೂ ಸಮಾಜದಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಸಂಯೋಜಕಿ ಹಾಗೂ ಕಾಲೇಜಿನ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯ ಸಂಚಾಲಕಿ ಕವಿತಾ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಪ್ರೊ.ನಿಕೇತನ ವಹಿಸಿದ್ದರು. ಪ್ರೊ.ಕೃಷ್ಣ ಭಟ್, ಉಡುಪಿ ಪೋಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಶ್ರುತಿ ಹಾಗೂ ರಶ್ಮಿ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ರಾಕೇಶ್ ನಿರೂಪಿಸಿದರು. ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕಿ ರೇಖಾ ಎಸ್.ಎನ್. ಸ್ವಾಗತಿಸಿದರು. ರಮ್ಯಾ ಕೆ ಐತಾಳ್ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕರಾದ ರಮ್ಯಾ ವಿ. ಹಾಗೂ ಡಾ.ಸಫಿಯಾ ಅತಿಥಿಗಳನ್ನು ಪರಿಚಯಿಸಿದರು. ಶರತ್ ಕುಮಾರ್ ವಂದಿಸಿದರು.

ಕಾರ್ಯಾಗಾರಕ್ಕೂ ಮುನ್ನ, ಮಹಿಳಾ ಕುಂದುಕೊರತೆ ಪರಿಹಾರ ಸಮಿತಿಯ ಸಭೆ ಪ್ರಾಂಶುಪಾಲೆ ಪ್ರೊ.ನಿಕೇತನ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮಗಳ ಬಗ್ಗೆ ಸಮಾಲೋಚಿಸಲಾಯಿತು. ಸಮಿತಿಯ ಸದಸ್ಯರು, ಇಬ್ಬರು ಉಡುಪಿ ಪೋಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಹಾಗೂ ಜಿಲ್ಲಾ ಪೊಶ್ ಸಮಿತಿಯ ಸದಸ್ಯೆ ಸಭೆಯಲ್ಲಿ ಭಾಗವಹಿಸಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X