Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ...

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ21 May 2026 7:11 PM IST
share
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ

ಉಡುಪಿ, ಮೇ 21: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ ಗೋಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 55ರ ಪಕ್ಕದಲ್ಲೇ ಸುಸಜ್ಜಿತವಾಗಿ ನಿರ್ಮಿಸಿರುವ ಅತ್ಯಾಧುನಿಕ ಹೊಸ ಕಟ್ಟಡಕ್ಕೆ ವರ್ಗಾವಣೆ ಗೊಳ್ಳಲಿದ್ದು, ಜೂನ್ 1ರಿಂದ ಕಾರ್ಯಾರಂಭ ಮಾಡಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ತಿಳಿಸಿದ್ದಾರೆ.

ನೂತನ ಆಸ್ಪತ್ರೆ ಕಟ್ಟಡದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದಕ್ಕೆ ಪೂರ್ವಭಾವಿಯಾಗಿ ಆಸ್ಪತ್ರೆಯು ಮೇ 22 ರಿಂದ 24ರವರೆಗೆ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಮುಕ್ತ ಭೇಟಿಗೆ (ಓಪನ್ ಹೌಸ್) ಅವಕಾಶ ನೀಡಲಿದ್ದು, ಆಸ್ಪತ್ರೆಯಲ್ಲಿರುವ ಸೌಲಭ್ಯ, ಮೂಲಭೂತ ಸೌಕರ್ಯಗಳನ್ನು ಖುದ್ದಾಗಿ ವೀಕ್ಷಿಸಬಹುದಾಗಿದೆ ಎಂದವರು ತಿಳಿಸಿದರು.

1984ರಲ್ಲಿ ತಾಲೂಕು ಕಚೇರಿಯ ಎದುರಿಗಿದ್ದ ಹಿಂದಿನ ಕಾನೂನು ಕಾಲೇಜು ಕಟ್ಟಡದಲ್ಲಿ ಪ್ರಾರಂಭಗೊಂಡಿದ್ದ ಡಾ.ಟಿಎಂಎ ಪೈ ಆಸ್ಪತ್ರೆಯು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ ವಿಶಾಲವಾದ ಮತ್ತು ಆಧುನಿಕ ಕ್ಯಾಂಪಸ್‌ಗೆ ಸ್ಥಳಾಂತರಗೊಳ್ಳುತ್ತಿದೆ. 1.4 ಎಕರೆ ಪ್ರದೇಶದಲ್ಲಿ ಹರಡಿರುವ ಈ ಹೊಸ ಸೌಲಭ್ಯವನ್ನು ಸುಧಾರಿತ ಮೂಲಸೌಕರ್ಯ, ಆಧುನಿಕ ವೈದ್ಯಕೀಯ ತಂತ್ರ ಜ್ಞಾನ ಮತ್ತು ರೋಗಿ ಸ್ನೇಹಿಸೌಲಭ್ಯಗಳೊಂದಿಗೆ ವಿನ್ಯಾಸ ಗೊಳಿಸಲಾಗಿದೆ ಎಂದವರು ಹೇಳಿದರು.

152 ಹಾಸಿಗೆಗಳ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಕಿವಿ ಗಂಟಲು ಮೂಗು, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ನೇತ್ರಶಾಸ್ತ್ರ, ಮನೋವೈದ್ಯಶಾಸ್ತ್ರ, ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಹೆಪಾಟಾಲಜಿ, ಗ್ಯಾಸ್ಟ್ರೋ ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಅರಿವಳಿಕೆ ಶಾಸ್ತ್ರ, ಚರ್ಮಶಾಸ್ತ್ರ, ಔದ್ಯೋಗಿಕ ಚಿಕಿತ್ಸೆ, ರೆಸ್ಪಿರೇಟರಿ ಚಿಕಿತ್ಸೆ, ದಂತ ವೈದ್ಯಶಾಸ್ತ್ರ, ಫಿಸಿಯೋಥೆರಪಿ, ವಾಕ್ ಮತ್ತು ಶ್ರವಣ ವಿಭಾಗಗಳಿವೆ ಎಂದು ಡಾ.ಶಶಿಕಿರಣ್ ವಿವರಿಸಿದರು.

ಅಲ್ಲದೇ ಹೃದ್ರೋಗ, ನರವಿಜ್ಞಾನ, ಮೂತ್ರಪಿಂಡಶಾಸ್ತ್ರ, ಸರ್ಜಿಕಲ್ ಆಂಕೊಲಾಜಿ, ವೈದ್ಯಕೀಯ ಆಂಕೊಲಾಜಿ, ನರಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ ಸಾಂಕ್ರಾಮಿಕ ರೋಗಗಳು, ಮಕ್ಕಳ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ರೆಸ್ಪಿರೇಟರಿ ಮೆಡಿಸಿನ್ ಮತ್ತು ಇತರ ಸೂಪರ್-ಸ್ಪೆಷಾಲಿಟಿಗಳಲ್ಲಿ ತಜ್ಞರ ಸಮಾಲೋಚನೆ ಗಳು ಸಹ ಇಲ್ಲಿ ಲಭ್ಯವಿರುತ್ತವೆ ಎಂದರು.

ಹೊಸ ಆಸ್ಪತ್ರೆಯ ಪ್ರಮುಖ ಆಕರ್ಷಣೆ ಎಂದರೆ ದಿನದ 24 ಗಂಟೆ ಕಾರ್ಯಾಚರಿಸುವ ತುರ್ತು ಚಿಕಿತ್ಸಾ ವಿಭಾಗ ಮತ್ತು ಅಪಘಾತ ಆರೈಕೆ ಕೇಂದ್ರ. ಆಸ್ಪತ್ರೆಯಲ್ಲಿ ಸುಧಾರಿತ ಲ್ಯಾಪರೊಸ್ಕೋಪಿಕ್ ವ್ಯವಸ್ಥೆಗಳೊಂದಿಗೆ ನಾಲ್ಕು ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳು, ವಿಸ್ತೃತ 25 ಹಾಸಿಗೆಗಳ ಐಸಿಯು ಸೌಲಭ್ಯಗಳು, ಸುಧಾರಿತ ಡಯಾಲಿ ಸಿಸ್ ಕೇಂದ್ರ, ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್, ಎಕ್ಸ್-ರೇ, ಪ್ರಯೋಗಾಲಯ ಮತ್ತು ಔಷಧಾಲಯ ಸೇವೆಗಳು, ವಿಶೇಷವಾಗಿ ವಿನ್ಯಾಸಗೊಳಿಸಿದ ಆರೋಗ್ಯ ತಪಾಸಣೆ ಸೌಲಭ್ಯಗಳು, ಡೇ ಕೇರ್ ಸೇವೆಗಳು ಎಂದರು.

ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯ ಆಡಳಿತ ಮುಖ್ಯಸ್ಥ ಮತ್ತು ಗ್ರೂಪ್ ಮ್ಯಾನೇಜರ್ ದೀಪಕ್ ಪ್ರಭು ಮಾತ ನಾಡಿ, ರೋಗಿಗಳ ಸುರಕ್ಷತೆ, ಗುಣಮಟ್ಟದ ಆರೈಕೆ, ಅವಶ್ಯ ಸೌಕರ್ಯ, ವೈದ್ಯರಿಗೆ ದಕ್ಷ ನಿರ್ವಹಣಾ ವ್ಯವಸ್ಥೆಗಳಿಗೆ ಒತ್ತು ನೀಡುವ ಮೂಲಕ ಹೊಸ ಆಸ್ಪತ್ರೆಯನ್ನು ಎಚ್ಚರಿಕೆಯಿಂದ ವಿನ್ಯಾಸಗೊಳಿಸಲಾಗಿದೆ. ನಿರ್ಣಾಯಕ ಆರೈಕೆ ಸೇವೆಗಳು, ಶಸ್ತ್ರಚಿಕಿತ್ಸಾ ಕೊಠಡಿಗಳು, ರೋಗಿಗಳ ಕಾಯುವ ಪ್ರದೇಶಗಳು, ಪಾರ್ಕಿಂಗ್ ಸೌಲಭ್ಯಗಳು ಮತ್ತು ತಡೆಗಟ್ಟುವ ಆರೋಗ್ಯ ಸೇವೆಗಳಿಗೆ ವಿಶೇಷ ಗಮನ ನೀಡಲಾಗಿದೆ. ಇಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.

ಆಸ್ಪತ್ರೆಯು ಸುಧಾರಿತ ಮೂಲಸೌಕರ್ಯ, ಆಧುನಿಕ ಶಸ್ತ್ರಚಿಕಿತ್ಸಾ ಕೊಠಡಿಗಳು, ಅತ್ಯಾಧುನಿಕ ರೋಗನಿರ್ಣಯ ಸೌಲಭ್ಯಗಳು ಮತ್ತು ಹೆಚ್ಚು ನುರಿತ ವೈದ್ಯರ ಮೂಲಕ ಸಮಗ್ರ, ಪ್ರವೇಶಿಸಬಹುದಾದ, ನೈತಿಕ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.

ಸಮುದಾಯಕ್ಕೆ ಸುಲಭವಾಗಿ ಸಿಗುವ ಮತ್ತು ಕೈಗೆಟುಕುವ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿ ಸುವುದು ಆಸ್ಪತ್ರೆಯ ಪ್ರಾಥಮಿಕ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ರಾಜಾರಾಮ್ ಪೈ ಹೇಳಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X