Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಕಣ್ಣುಮುಚ್ಚಾಲೆ...

ಉಡುಪಿ ಜಿಲ್ಲೆಯಲ್ಲಿ ಕಣ್ಣುಮುಚ್ಚಾಲೆ ಆಡುತ್ತಿರುವ ಮಳೆ; 10 ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ15 Jun 2026 7:50 PM IST
share
ಉಡುಪಿ ಜಿಲ್ಲೆಯಲ್ಲಿ ಕಣ್ಣುಮುಚ್ಚಾಲೆ ಆಡುತ್ತಿರುವ ಮಳೆ; 10 ಮನೆಗಳಿಗೆ ಹಾನಿ
ಜೂನ್ 15ರವರೆಗೆ ಶೇ.36ರಷ್ಟು ಮಳೆ ಕೊರತೆ

ಉಡುಪಿ, ಜೂ.15: ಜಿಲ್ಲೆಯಲ್ಲಿ ಮುಂಗಾರು ಮಳೆ ಕಣ್ಣುಮುಚ್ಚಾಲೆಯಾ ಡುತ್ತಿದೆ. ಶನಿವಾರ ರಾತ್ರಿ ಹಾಗೂ ರವಿವಾರ ಬಿರುಸು ಪಡೆದ ಮಳೆ, ಸೋಮವಾರ ಸಂಪೂರ್ಣ ಕ್ಷೀಣಿಸಿದೆ. ಇಡೀ ದಿನ ಒಳ್ಳೆಯ ಬಿಸಿಲು ಕಾಣಿಸಿಕೊಂಡಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.

ವಿಜ್ಞಾನಿಗಳು ಈ ಬಾರಿ ಭಾರತದಲ್ಲಿ ಎಲ್ ನಿನೋ ಪ್ರಭಾವದಿಂದ ಭಾರತದಲ್ಲಿ ಮುಂಗಾರು ಮಳೆಯಲ್ಲಿ ಕೊರತೆ ಕಂಡುಬರಲಿದೆ ಎಂದು ಭವಿಷ್ಯ ನುಡಿದಿರುವುದು ನಿಜವಾಗುತ್ತಿರುವ ಲಕ್ಷಣವಿದ್ದು, ಜೂನ್ 1ರಿಂದ 15ರವರೆಗೆ ಬರಬೇಕಾಗಿದ್ದ ಮಳೆಯಲ್ಲಿ ಈಗಾಗಲೇ ಶೇ.36ರಷ್ಟು ಕೊರತೆ ಕಂಡುಬಂದಿದೆ.

ಮುಂಗಾರು ಆರಂಭದ ಜೂನ್ 1ರಿಂದ 15ರವರೆಗೆ ಜಿಲ್ಲೆಯಲ್ಲಿ ಬೀಳಬೇಕಿದ್ದ ವಾಡಿಕೆ ಮಳೆ 432ಮೀ.ಮೀ. ಆಗಿದೆ. ಆದರೆ ಈ ವರ್ಷ ಇಂದಿನವರೆಗೆ (ಜೂ.15) ಬಿದ್ದಿರುವ ಮಳೆ 276ಮಿ.ಮೀ. ಮಾತ್ರ. ಅಂದರೆ ಈವರೆಗಿನ ವಾಡಿಕೆ ಮಳೆಯಲ್ಲಿ ಶೇ.36ರಷ್ಟು ಕೊರತೆ ಕಾಣಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ 2025ರಲ್ಲಿ ಒಟ್ಟು 468ಮಿ.ಮೀ. ಮಳೆಯಾಗಿತ್ತು. ಅಂದರೆ ಕಳೆ ಬಾರಿ ವಾಡಿಕೆಯ ಮಳೆಗಿಂತ ಶೇ.8ರಷ್ಟು ಅಧಿಕ ಮಳೆ ಸುರಿದಿತ್ತು.

ನಿಗದಿತ ಸಮಯಕ್ಕೆ ಸರಿಯಾಗಿ ಜೂನ್ ಮೊದಲ ವಾರ ಜಿಲ್ಲೆಯನ್ನು ಪ್ರವೇಶಿಸಿದ ಮುಂಗಾರು ಮಳೆ, ನಂತರ ಮಾತ್ರ ಜನರು, ರೈತರೊಂದಿಗೆ ಕಣ್ಣುಮುಚ್ಚಾಲೆ ಆಟವಾಡುತ್ತಿದೆ. ನಿರಂತರವಾಗಿ ಧಾರಾಕಾರವಾಗಿ ಸುರಿಯ ಬೇಕಾಗಿದ್ದ ಮಳೆ, ದಿನದ ಕೆಲವೇ ಹೊತ್ತಿನಲ್ಲಿ ಸಾಮಾನ್ಯ ರೀತಿಯಲ್ಲಿ ಬರುತ್ತಿದೆ. ಹಿಂದೆಲ್ಲಾ ಜೂನ್ ಇಡೀ ತಿಂಗಳು ಆಕಾಶದಲ್ಲಿ ಸಾಮಾನ್ಯವಾಗಿ ಕಾಣಿಸದ ಸೂರ್ಯ ಈ ಬಾರಿ ಪ್ರತಿದಿನವೆಂಬಂತೆ ತನ್ನ ಸಂಪೂರ್ಣ ‘ಪ್ರಕಾಶಮಾನ’ದೊಂದಿಗೆ ಗೋಚರಿಸುತ್ತಿದೆ.

ಶನಿವಾರ ಹಾಗೂ ರವಿವಾರ ಅಬ್ಬರದ ಗಾಳಿಯೊಂದಿಗೆ ಸುರಿದ ಮಳೆಗೆ ಜಿಲ್ಲೆಯಲ್ಲಿ 10 ಮನೆಗಳಿಗೆ ಹಾನಿಯಾದ ವರದಿ ಬಂದಿದೆ. ಇವುಗಳಲ್ಲಿ ಹೆಚ್ಚಿನ ಮನೆಗಳು ಗಾಳಿಗೆ ಮರ ಬಿದ್ದು ಉಂಟಾದ ಹಾನಿಯಾಗಿದೆ. ಇದರಿಂದ ನಾಲ್ಕು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾದ ಬಗ್ಗೆ ಪ್ರಾಥಮಿಕ ಅಂದಾಜು ತಿಳಿಸಿವೆ.

ಬಿರುಗಾಳಿಯಿಂದ ಬಸ್ರೂರು, ಕೋಣಿ ಹಾಗೂ ಮಣೂರು ಭಾಗದಲ್ಲಿ ಹೆಚ್ಚಿನ ಹಾನಿ ಕಂಡುಬಂದಿದೆ. ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಅಕ್ಕಯ್ಯ ಅವರ ನೆಗೆ 10,000, ಶಂಕರ ಎಂಬವರ ಮನೆಗೆ 25,000 ಹಾಗೂ ವೆಂಕಟೇಶ್ ಎಂಬವರ ಮನೆಗೆ 50,000ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರ ತಾಲೂಕು ಕೋಣಿ ಗ್ರಾಮದ ಸುಮನ ಇವರ ಮನೆ ಮೇಲೆ ಮರ ಬಿದ್ದು 30ಸಾವಿರ ರೂ., ಬಸ್ರೂರು ಗ್ರಾಮದ ರಾಘವೇಂದ್ರ ಎಂಬವರ ಮನೆಗೆ ಮೇಲೆ ಮರ ಬಿದ್ದು 80,000ರೂ., ಅಬ್ದುಲ್ ಸಮದ್‌ರ ಮನೆಗೆ 40,000ರೂ., ಸೀತು ಮನೆಗೆ 30,000ರೂ., ಜಯಲಕ್ಷ್ಮೀ ಅವರ ಮನೆಗೆ 80,000ರೂ, ಬಸ್ರೂರು ಮಂಡಿಕೇರಿಯ ಸುಂದರ ಖಾರ್ವಿಯವರ ಮನೆಗೆ 25,000ರೂ. ಹಾಗೂ ಸುರೇಂದ್ರ ಕಿಣಿ ಅವರ ಮನೆಗೆ 25,000ರೂ. ನಷ್ಟದ ಅಂದಾಜು ಮಾಡಲಾಗಿದೆ.

ಇಂದು ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಬಿದ್ದಿರುವುದು 24.7 ಮಿ.ಮೀ. ಮಳೆ ಮಾತ್ರ. ಜಿಲ್ಲೆಯಲ್ಲಿ ಬೈಂದೂರಿನಲ್ಲಿ ಮಾತ್ರ ಭಾರೀ ಮಳೆ ಬಿದ್ದಿದೆ. ಅಲ್ಲಿ ಬಿದ್ದಿರುವ ಮಳೆ 81.5 ಮಿ.ಮೀ. ಉಳಿದಂತೆ ಕುಂದಾಪುರದಲ್ಲಿ 22.1, ಕಾಪುವಿನಲ್ಲಿ 16.2, ಬ್ರಹ್ಮಾವರದಲ್ಲಿ 14.6, ಉಡುಪಿಯಲ್ಲಿ 14.4, ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಬೇಕಿದ್ದ ಕಾರ್ಕಳದಲ್ಲಿ 7.2 ಮತ್ತು ಹೆಬ್ರಿಯಲ್ಲಿ 5.1ಮಿ.ಮೀ ಮಾತ್ರ ಮಳೆ ಬಿದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X