Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲೆಕುಡಿಯರ ಅಭಿವೃದ್ಧಿಗೆ 100 ಕೋಟಿ ರೂ....

ಮಲೆಕುಡಿಯರ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಅನುದಾನ: ಶ್ರೀಧರ್ ಗೌಡ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Nov 2024 8:32 PM IST
share

ಉಡುಪಿ, ನ.29: ಮಲೆಕುಡಿಯರು ಶತಮಾನಗಳಿಂದ ಪಶ್ಚಿಮಘಟ್ಟಗಳಲ್ಲಿ ಸಂಕಷ್ಟದ ಬದುಕು ನಡೆಸುತ್ತಿದ್ದಾರೆ. ಅವರಿಗೆ ಸೂಕ್ತವಾದ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಸರಕಾರಗಳು ವಿಫಲವಾಗಿವೆ. ಆದುದರಿಂದ ಮಲೆಕುಡಿಯ ಸಮುದಾ ಯದ ಅಭಿವೃದ್ಧಿಗಾಗಿ ಸರಕಾರ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಉದ್ಯಾನವನ ಅಭಯಾರಣ್ಯದಿಂದ ಸ್ವಇಚ್ಛೆಯಿಂದ ಹೊರ ಬರುವ ಕುಟುಂಬಗಳಿಗೆ ಗುಣಮಟ್ಟದ ಬದುಕು ಕಟ್ಟಿಕೊಳ್ಳಲು ವಸತಿ ಸಹಿತ, ಕೃಷಿ ಭೂಮಿ, ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಬೇಕು. ಅದಕ್ಕಾಗಿ 400 ಎಕರೆ ಜಾಗವನ್ನು ಮೀಸಲಿಡಬೇಕು ಎಂದರು.

ಅದೇ ರೀತಿ ಪರಿಶಿಷ್ಟ ಪಂಗಡದಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕು ಮತ್ತು ಸರಕಾರಿ ಉದ್ಯೋಗ ನೇಮಕಾತಿಯಲ್ಲಿ ಅರಣ್ಯ ಇಲಾಖೆಯಲ್ಲಿರುವ ಸ್ಥಳೀಯ ಅರಣ್ಯ ಬುಡಕಟ್ಟಲು ಮೀಸಲಾತಿಯನ್ನು ಎಲ್ಲ ಇಲಾಖೆಗಳಿಗೆ ವಿಸ್ತರಣೆ ಮಾಡಬೇಕು. ಆದಿವಾಸಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು. ಕಸ್ತೂರಿ ರಂಗನ್ ವರದಿ ಜಾರಿಯನ್ನು ತಿರಸ್ಕರಿಸಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ಎಲ್ಲ ಕುಟುಂಬಗಳಿಗೆ ರಸ್ತೆ, ವಿದ್ಯುತ್, ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಸಮುದಾಯದಲ್ಲಿ ವೃತ್ತಿ ಶಿಕ್ಷಣ ಪಡೆದವರಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ನೌಕರಿ ನೀಡಬೇಕು. ಅರಣ್ಯ ಹಕ್ಕು ಕಾಯಿದೆ ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಅರಣ್ಯ ಹಕ್ಕುಪತ್ರ, ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಬೇಕು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ, ಮಾಜಿ ಅಧ್ಯಕ್ಷ ಸುಧಾಕರ ಗೌಡ ನಾಡ್ಪಾಲು, ಉಪಾಧ್ಯಕ್ಷೆ ಶೋಭಾ, ಪ್ರಧಾನ ಕಾರ್ಯದರ್ಶಿ ಅಶೋಕ ಕೆರ್ವಾಶೆ, ವಕ್ತಾರ ದಿನೇಶ್ ಗೌಡ ಉಪಸ್ಥಿತರಿದ್ದರು.

‘ಮಲೆಕುಡಿಯರು ವ್ಯವಸ್ಥೆಗೆ ವಿರುದ್ಧವಾಗಿ ಹೋದವರಲ್ಲ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಯೋಜನೆ, ಹುಲಿ ಯೋಜನೆ ಆತಂಕ, ಅರಣ್ಯ ಇಲಾಖೆಯ ಕಿರುಕಳಗಳಿಂದ ಕೆಲವರು ತಪ್ಪು ದಾರಿಗೆ ಹೋಗಿರಬಹುದು. ಆದರೆ ಅದನ್ನು ನಾವು ಯಾರು ಕೂಡ ಬೆಂಬಲಿಸುವುದಿಲ್ಲ. ಸರಕಾರಗಳ ನಕ್ಸಲ್ ಬದಲು ಅಭಿವೃದ್ಧಿ ಕಡೆ ಗಮನ ಹರಿಸಿದ್ದಲ್ಲಿ ಆ ಸಮಸ್ಯೆ ಯಾವತ್ತೋ ನಿವಾರಣೆ ಆಗುತ್ತಿತ್ತು. ಹೆಬ್ರಿ ತಾಲೂಕಿನ ನಾಡ್ಪಾಲು, ಕಾರ್ಕಳ ತಾಲೂಕಿನ ಈದು ಕನ್ಯಾನ, ಅಂಡಾರು ಗ್ರಾಮಗಳಲ್ಲಿ ಈಗಲೂ ಸರಿಯಾದ ರಸ್ತೆ ಇಲ್ಲ. ವಿದ್ಯುತ್ ಸಂಪರ್ಕ ಇಲ್ಲ, ಉತ್ತಮ ಮನೆಗಳಿಲ್ಲ. ಈ ಕುರಿತು ಹಲವು ಬಾರಿ ಸರಕಾರದ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಇಲ್ಲ’

-ಶ್ರೀಧರ ಗೌಡ ಈದು, ಅಧ್ಯಕ್ಷರು, ರಾಜ್ಯ ಮಲೆಕುಡಿಯ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X