Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯ ಸಹಕಾರಿ ಸಂಸ್ಥೆಗಳಿಂದ...

ಉಡುಪಿಯ ಸಹಕಾರಿ ಸಂಸ್ಥೆಗಳಿಂದ ಶೇ.100ರಷ್ಟು ಶಿಕ್ಷಣ ನಿಧಿ ಪಾವತಿ: ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ22 Aug 2025 8:13 PM IST
share
ಉಡುಪಿಯ ಸಹಕಾರಿ ಸಂಸ್ಥೆಗಳಿಂದ ಶೇ.100ರಷ್ಟು ಶಿಕ್ಷಣ ನಿಧಿ ಪಾವತಿ: ಜಯಕರ ಶೆಟ್ಟಿ ಇಂದ್ರಾಳಿ
ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಉಡುಪಿ, ಆ.22: ಪ್ರಸಕ್ತ ವರ್ಷದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಇಡೀ ರಾಜ್ಯದಲ್ಲಿ ಶೇ.100ಕ್ಕೆ ನೂರರಷ್ಟು ಶಿಕ್ಷಣ ನಿಧಿ ಪಾವತಿಸಿದ ಹೆಗ್ಗಳಿಕೆ ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳಿಗೆ ಸಲ್ಲುತ್ತದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಕಡಿಯಾಳಿಯ ದಿ ಓಷ್ಯನ್ ಪರ್ಲ್ ಸಭಾಂಗಣ ದಲ್ಲಿ ಶುಕ್ರವಾರ ಆಯೋಜಿಸಲಾದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸಹಕಾರ ಮಹಾಮಂಡಳದ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಶಿಕ್ಷಣ ತರಬೇತಿ ಈ ಕುರಿತು ನಿರಂತರ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಸಹಕಾರಿ ಕ್ಷೇತ್ರ ಎಂಬುವುದು ವಿಶ್ವಾಸ, ನಂಬಿಕೆಯೊಂದಿಗೆ ಕೆಲಸ ಮಾಡುವ ಸಂಸ್ಥೆ. ಜನರು ತಮ್ಮ ಆರ್ಥಿಕ ವ್ಯವಹಾರಗಳಿಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಉಳಿತಾಯ ಠೇವಣಿ ಮಾಡುವುದರ ಮೂಲಕ ಸಹಕಾರ ನೀಡುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಸಹಕಾರಿ ಸಂಸ್ಥೆಗಳು ಜನರಿಗೆ ಸಾಲ ನೀಡುತ್ತಿವೆ. ಮುಂದಿನ ದಿನಗಳಲ್ಲಿ ಸಹಕಾರಿ ಕಾಯ್ದೆಗಳಲ್ಲಿ ಆಗುವ ತಿದ್ದುಪಡಿಗಳ ಬಗ್ಗೆ ಗಮನ ಹರಿಸಬೇಕು ಎಂದರು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಗಂಗಾಧರ್ ಶೆಟ್ಟಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಸಹಕಾರಿ ಯೂನಿಯನ್ ನಿರ್ದೇಶಕರಾದ ಶ್ರೀಧರ ಪಿಎಸ್., ಸುಧೀರ್ ವೈ, ಅನಿಲ್ ಎಸ್. ಪೂಜಾರಿ, ಪ್ರಸಾದ್ ಎಸ್.ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಪ್ರದೀಪ್ ಯಡಿಯಾಳ, ಅರುಣ್ ಕುಮಾರ್ ಹೆಗ್ಡೆ, ಕರುಣಾಕರ ಶೆಟ್ಟಿ, ಸುರೇಶ್ ರಾವ್, ಗೋಪಿಕೃಷ್ಣ ರಾವ್, ಬಿಂದು ಬಿ.ನಾಯರಿ ಉಪಸ್ಥಿತರಿದ್ದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಸಿಇಓ ವಿಶ್ವನಾಥ್ ನಾಯರಿ ‘ದುಡಿಯ ಲಾಗದ ಆಸ್ತಿ/ಅನುತ್ಪಾದಕ ಆಸ್ತಿ ನಗದು ಮೀಸಲು ಅನುಪಾತ ಹಾಗೂ ಶಾಸನಿಕ ದ್ರವ್ಯತ್ವ ಅನುಪಾತ’, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕ ಎನ್.ಜೆ. ಗೋಪಾಲ್ ‘ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಅಂಶಗಳು ಹಾಗೂ ಇತ್ತೀಚಿನ ತಿದ್ದುಪಡಿಗಳು’ ಕುರಿತು ಉಪನ್ಯಾಸ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X