Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ಸೆ.14, 15ರಂದು ಕೃಷ್ಣ...

ಉಡುಪಿಯಲ್ಲಿ ಸೆ.14, 15ರಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ13 Sept 2025 9:55 PM IST
share
ಉಡುಪಿಯಲ್ಲಿ ಸೆ.14, 15ರಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ

ಉಡುಪಿ, ಸೆ.13: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸೆ.14 ಮತ್ತು 15ರಂದು ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಸಂಭ್ರಮ ನಡೆಯಲಿದೆ. ರವಿವಾರ ಮಧ್ಯರಾತ್ರಿ 12:11ಕ್ಕೆ ಶ್ರೀಕೃಷ್ಣ ಜಯಂತಿ ಪ್ರಯುಕ್ತ ಅರ್ಘ್ಯ ಪ್ರದಾನ ನಡೆಯಲಿದೆ.

ಇಂದು ಶ್ರೀಕೃಷ್ಣ ಮಠದಲ್ಲಿ ಹಾಗೂ ಉಡುಪಿ ನಗರದಲ್ಲಿ ಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ಧತೆಗಳು ನಡೆದವು. ಮಠದಲ್ಲಿ ಪಾಕಶಾಲೆಯಲ್ಲಿ ಹತ್ತಾರು ಮಂದಿ ಪಾಕತಜ್ಞರು ಲಕ್ಷಾಂತರ ಸಂಖ್ಯೆಯಲ್ಲಿ ಬಗೆಬಗೆಯ ಉಂಡೆ ಹಾಗೂ ಚಕ್ಕುಲಿಗಳನ್ನು ಕಳೆದ ಎರಡು ಮೂರು ದಿನಗಳಿಂದ ತಯಾರಿಸುತಿದ್ದಾರೆ.

ಈ ಬಾರಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಾರೀ ಸಂಖ್ಯೆಯಲ್ಲಿ ವೇಷಗಳು ಕಾಣಿಸಿಕೊಳ್ಳುವ ನಿರೀಕ್ಷೆ ಇದೆ. ನಾಳೆ ಬೆಳಗ್ಗೆಯಿಂದ ಹುಲಿವೇಷ ಸೇರಿದಂತೆ ಬಗೆಬಗೆಯ, ವರ್ಣವೈವಿಧ್ಯದ ವೇಷಗಳು ನಗರದಲ್ಲಿ ಸಂಚರಿಸಲಿವೆ. ಒಂದರ್ಥದಲ್ಲಿ ಉಡುಪಿ ನಗರ ಮುಂದಿನೆರಡು ದಿನಗಳ ಕಾಲ ವೇಷಗಳಿಂದಲೇ ತುಂಬಿರುವ ಸಾಧ್ಯತೆ ಇದೆ.

ನಾಳಿನ ಜನ್ಮಾಷ್ಟಮಿ ಹಾಗೂ ಸೋಮವಾರ ವಿಟ್ಲಪಿಂಡಿಗೆ ಈಗಾಗಲೇ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಮೊಸರು ಕುಡಿಕೆಗಾಗಿ ರಥಬೀದಿಯ ಸುತ್ತಲೂ ಅಲ್ಲಲ್ಲಿ 13 ಮರದ ಗುರ್ಜಿಗಳನ್ನು (ತ್ರಿಕೋನಾಕಾರದ) ಈಗಾಗಲೇ ನಿಲ್ಲಿಸಲಾಗಿದೆ. ಇದಕ್ಕೆ ಕಟ್ಟಿದ ಮಡಿಕೆಯಲ್ಲಿರಿಸಿದ ಮೊಸರು ಹಾಗೂ ಇತರ ವಸ್ತುಗಳನ್ನು ಗೊಲ್ಲ ವೇಷಧಾರಿಗಳು ಕೋಲಿನಿಂದ ಒಡೆಯುವುದೇ ಇಡೀ ಉತ್ಸವದ ಪ್ರದಾನ ಅಂಶ.

ನಾಳೆ ಉಡುಪಿಯಲ್ಲಿ ಬಾಲ ಕೃಷ್ಣರೇ ತುಂಬಿ ತುಳುಕಲಿದ್ದಾರೆ. ಮಠದ ವಿವಿಧ ಕಡೆಗಳಲ್ಲಿ ನಾಳೆ ಮಕ್ಕಳ ಕೃಷ್ಣ ವೇಷದ ಸ್ಪರ್ಧೆ ನಡೆಯಲಿದ್ದು, ಇದರಲ್ಲಿ ನೂರಾರು ಸಂಖ್ಯೆಯಲ್ಲಿ ಕೃಷ್ಣ -ರಾಧೆ ವೇಷಧಾರಿ ಮಕ್ಕಳು ಭಾಗವಹಿಸಲಿದ್ದಾರೆ.

ಕಳೆದ ತಿಂಗಳು ಚಾಂದ್ರಮಾನ ಯುಗಾದಿಯ ಕೃಷ್ಣಾಷ್ಟಮಿ ನಡೆದಿದ್ದರೆ, ನಾಳೆ ಮಠದಲ್ಲಿ ಸೌರಮಾನದ ಅಷ್ಟಮಿ ನಡೆಯಲಿದೆ. ಪರ್ಯಾಯ ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ಕಳೆದ 48 ದಿನಗಳಿಂದ ಮಂಡಲೋತ್ಸವದ ಮಾದರಿ ಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಇವುಗಳಿಗೆ ಶ್ರೀಕೃಷ್ಣ ಲೀಲೋತ್ಸವ ದೊಂದಿಗೆ ತೆರೆ ಬೀಳಲಿದೆ. ಸೋಮವಾರದ ಲೀಲೋತ್ಸವ ಅಪರಾಹ್ನ 3 ಗಂಟೆಗೆ ಪ್ರಾರಂಭಗೊಳ್ಳಲಿದೆ.


























share
ವಾರ್ತಾಭಾರತಿ
ವಾರ್ತಾಭಾರತಿ
Next Story
X