ಉಡುಪಿ: ಜು.15ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಜು.14: ಹಿರಿಯಡ್ಕದ ಕೆಇಬಿ ಸಬ್ಸ್ಟೇಶನ್ನಲ್ಲಿ ಮೆಸ್ಕಾಂ ಇಲಾಖೆಯಿಂದ ಜುಲೈ 15ರಂದು ಬೆಳಗ್ಗೆ 10 ಗಂಟೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಹೀಗಾಗಿ ನಾಳೆ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಸರಬರಾಜು ಹಾಗೂ ವಿತರಣೆ ಯಲ್ಲಿ ಸಹ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





