Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಟಿಸಂ ಸೊಸೈಟಿಯಿಂದ ಛಾಯಾ ಶಿಕ್ಷಕರಿಗೆ...

ಆಟಿಸಂ ಸೊಸೈಟಿಯಿಂದ ಛಾಯಾ ಶಿಕ್ಷಕರಿಗೆ ತರಬೇತಿ: ಜ.16ರಿಂದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ15 Jan 2025 9:56 PM IST
share
ಆಟಿಸಂ ಸೊಸೈಟಿಯಿಂದ ಛಾಯಾ ಶಿಕ್ಷಕರಿಗೆ ತರಬೇತಿ: ಜ.16ರಿಂದ ಕಾರ್ಯಾಗಾರ

ಉಡುಪಿ, ಜ.15: ಉಡುಪಿಯ ಆಟಿಸಂ ಸೊಸೈಟಿಯು ಜಿಲ್ಲೆಯಲ್ಲಿರುವ ಸ್ವಲೀನತೆ ಹೊಂದಿರುವ ಮಕ್ಕಳಿಗೆ ಹಾಗೂ ಅವರ ಆರೈಕೆದಾರರಿಗೆ ಬೆಂಬಲ ನೀಡಲು ಛಾಯಾ ಶಿಕ್ಷಕರ (ಶ್ಯಾಡೋ ಟೀಚರ್) ತರಬೇತಿ ಕಾರ್ಯಾಗಾರ ‘ಸಾಥಿ’ಯನ್ನು ಜ.16ರಿಂದ 18ರವರೆಗೆ ಅಜ್ಜರಕಾಡಿನಲ್ಲಿರುವ ಐಎಂಎ ಭವನದಲ್ಲಿ ಆಯೋಜಿಸಿದೆ ಎಂದು ಆಟಿಸಂ ಸೊಸೈಟಿಯ ಅಧ್ಯಕ್ಷೆ ಅಮಿತಾ ಪೈ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಈ ಕಾರ್ಯಾ ಗಾರವನ್ನು ಕಮಲಾ ಬಾಳಿಗಾ ಚಾರಿಟೇಬಲ್ ಟ್ರಸ್ಟ್, ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ಬೆಂಗಳೂರಿನ ಒನ್ ಗುಡ್‌ಸ್ಟೆಪ್ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದೆ ಎಂದರು.

ಇಂದಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿ ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ಎಎಸ್‌ಡಿ) ಹೆಚ್ಚಾಗಿ ಕಂಡುಬರುತಿದ್ದು, ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಲು ಇಂಥ ತರಬೇತಿಗಳು ಸಹಕಾರಿಯಾಗಲಿವೆ. ಇದರಲ್ಲಿ ಇಂಥ ಮಕ್ಕಳ ಪೋಷಕರು, ಆರೈಕೆ ದಾರರು, ಇಂಥ ಮಕ್ಕಳಿಗೆ ಛಾಯಾ ಶಿಕ್ಷಕರಾಗಲು ಆಸಕ್ತರಾಗಿರುವವರು ಹಾಗೂ ವಿಶೇಷ ಶಾಲೆಗಳ ಶಿಕ್ಷಕರು ಭಾಗವಹಿಸಬಹುದು ಎಂದರು.

ವಿಶೇಷ ಅಗತ್ಯತೆಗಳನ್ನು ಹೊಂದಿರುವ ಮಕ್ಕಳಿಗೆ, ಸಾಮಾನ್ಯ ಮಕ್ಕಳೊಂದಿಗೆ ಕಲಿಯಲು ಈ ತರಬೇತಿ ಸಹಕಾರಿ ಯಾಗಲಿದೆ.ಈ ಮಕ್ಕಳ ಶೈಕ್ಷಣಿಕ ಜೀವನದಲ್ಲಿ ಪರಿಣಾಮಕಾರಿಯಾಗಿ ಬೆಂಬಲಿಸಲು ಅಗತ್ಯವಿರುವ ಕೌಶಲ್ಯ ಹಾಗೂ ಪರಿಣಿತಿಯನ್ನು ತರಬೇತಿ ವೇಳೆ ಕಲಿಸಲಾಗುತ್ತದೆ ಎಂದು ಅಮಿತಾ ಪೈ ನುಡಿದರು.

ಆಟಿಸಂ ಮಕ್ಕಳ ಚಿಕಿತ್ಸೆ ಕುರಿತಂತೆ ಸಾಕಷ್ಟು ಕೆಲಸ ಮಾಡಿರುವ, ಮುಂಬಯಿಯ ಖ್ಯಾತ ಮಕ್ಕಳ ಫಿಸಿಯೋಥೆರಪಿಸ್ಟ್, ಆಟಿಸಂ ಸ್ವಭಾವದ ಶ್ರುಶ್ರೂಷಕಿಯಾದ ಡಾ.ನೀತಾ ಮೆಹ್ತಾ ಅವರು ಶಿಬಿರದಲ್ಲಿ ತರಬೇತಿ ನೀಡಲಿದ್ದಾರೆ.

ಈ ಕಾರ್ಯಾಗಾರ ಉಡುಪಿಯ ಶಾಲೆಗಳು ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ತರಬೇತಿ ಪಡೆದ ಛಾಯಾ ಶಿಕ್ಷಕರಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಗುರಿಯನ್ನು ಹೊಂದಿದೆ. ಇಂಥ ಶಾಲೆಗಳಿಗೆ ಸೇರ್ಪಡೆಗೊಳ್ಳುವ ಪ್ರತಿಯೊಬ್ಹ ವಿಶೇಷ ಅಗತ್ಯತೆಯುಳ್ಳ ಮಗುವಿಗೆ ಒಬ್ಬ ಛಾಯಾ ಶಿಕ್ಷಕರು ನಿಯೋಜಿಸಲ್ಪಡಲಿದ್ದಾರೆ. ಇವರು ಮಗುವಿನೊಂದಿಗೆ ಇದ್ದು, ಅವರ ಕಲಿಕೆಗೆ ಪೂರಕವಾಗಿ ಕೆಲಸ ಮಾಡಲಿದ್ದಾರೆ. ಅವರು ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಂಪೂರ್ಣ ಸಾಮರ್ಥ್ಯ ತಲುಪಲು ಬೇಕಾದ ಎಲ್ಲಾ ಸಹಾಯ ಮಾಡಲಿದ್ದಾರೆ ಎಂದರು.

ಈ ಮೂಲಕ ಸ್ವಲೀನತೆ, ಎಡಿಎಚ್‌ಡಿ ಹಾಗೂ ಕಲಿಕೆಯಲ್ಲಿ ಅಸಮರ್ಥತೆ ಹೊಂದಿರುವ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವ ಗುರಿಯನ್ನು ತಲುಪಲು ಈ ಛಾಯಾ ಶಿಕ್ಷಕರು ನೆರವಾಗಲಿದ್ದಾರೆ ಎಂದರು.

ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಾಳೆ ಬೆಳಗ್ಗೆ 10ಗಂಟೆಗೆ ನಡೆಯಲಿದ್ದು, ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ, ಐಎಂಎ ಉಡುಪಿ ಕರಾವಳಿಯ ಅಧ್ಯಕ್ಷ ಡಾ.ಸುರೇಶ್ ಶೆಣೈ, ಡಾ.ನೀತಾ ಮೆಹ್ತಾ ಅವರು ಉಪಸ್ಥಿತರಿರುವರು. ಸಮಾರೋಪ ಸಮಾರಂಭ ದಲ್ಲಿ ಮನೋರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ ಮುಖ್ಯ ಅತಿಥಿಯಾಗಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಸೀನಿಯರ್ ಆಪ್ತ ಸಮಾಲೋಚಕ ನಾಗರಾಜ್ ಮೂರ್ತಿ, ಆಟಿಸಂ ಸೊಸೈಟಿಯ ಕಾರ್ಯಕ್ರಮ ಸಂಯೋಜಕ ಕೀರ್ತಿಶ್ ಎಸ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X