ಮೇ 17-18ರಂದು ರಾಜ್ಯಮಟ್ಟದ ‘ಪ್ರಜ್ಞಾ ಫೆಸ್ಟ್’
ಉಡುಪಿ, ಮೇ 15: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜುಗಳ ನಡುವಿನ ಸ್ಪರ್ಧೆ ‘ಪ್ರಜ್ಞಾ ಫೆಸ್ಟ್- 2024ನ್ನು ಮೇ 17 ಮತ್ತು 18ರಂದು ಹಮ್ಮಿಕೊಳ್ಳಲಾಗಿದೆ.
ಮೇ 17ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಅಧ್ಯಕ್ಷ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿರು ವರು. ಮುಖ್ಯ ಅತಿಥಿಗಳಾಗಿ ಪೂರ್ಣಪ್ರಜ್ಞ ಕಾಲೇಜಿನ ಸಮೂಹ ಸಂಸ್ಥೆಯ ನಿರ್ದೇಶಕ ಡಾ.ಶ್ರೀರಮಣ ಐತಾಳ್ ಹಾಗೂ ಕಾಲೇಜಿನ ಮುಖ್ಯ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರ ಶೇಖರ್ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story