Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಗಾಳಿ ಮಳೆಯಿಂದ 22 ಮನೆಗಳಿಗೆ...

ಉಡುಪಿ| ಗಾಳಿ ಮಳೆಯಿಂದ 22 ಮನೆಗಳಿಗೆ ಹಾನಿ: 13 ಲಕ್ಷ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ28 July 2024 7:37 PM IST
share
ಉಡುಪಿ| ಗಾಳಿ ಮಳೆಯಿಂದ 22 ಮನೆಗಳಿಗೆ ಹಾನಿ: 13 ಲಕ್ಷ ರೂ. ನಷ್ಟ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಸಂಜೆಯಿಂದ ಮಳೆ ಪ್ರಮಾಣ ಇಳಿಕೆಯಾಗಿದ್ದು, ರವಿವಾರ ಪೂರ್ತಿ ದಿನ ಬಿಸಿಲಿನ ವಾತಾ ವರಣ ಕಂಡುಬಂದಿದೆ. ಆದರೂ ಕೆಲವು ಕಡೆ ಬೀಸಿದ ಗಾಳಿಮಳೆಗೆ ಒಟ್ಟು 22 ಮನೆಗಳಿಗೆ ಹಾನಿಯಾಗಿ ಸುಮಾರು 13.16 ಲಕ್ಷ ರೂ. ನಷ್ಟವಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 7.8 ಮಿ.ಮೀ. ಮಳೆಯಾಗಿದ್ದು, ಕಾರ್ಕಳ- 5.2ಮಿ.ಮೀ., ಕುಂದಾಪುರ-11.9ಮಿ.ಮೀ., ಉಡುಪಿ- 3.6ಮಿ.ಮೀ., ಬೈಂದೂರು- 10.6ಮಿ.ಮೀ., ಬ್ರಹ್ಮಾವರ- 1.5 ಮಿ.ಮೀ., ಕಾಪು- 1.3ಮಿ.ಮೀ., ಹೆಬ್ರಿ - 11.7 ಮಿ.ಮೀ. ಮಳೆಯಾಗಿದೆ.

ಗಾಳಿ ಮಳೆಯಿಂದ ಉಡುಪಿ ತಾಲೂಕಿನ ಅಲೆವೂರು ಗ್ರಾಮದ ಅಲಿತಾ ಆಚಾರ್ಯ, ಗಂಗಾವತಿ, ಶೇಖರ ಪೂಜಾರಿ, ರವಿ ಆಚಾರ್ಯ, ಶಕುಂತಲ ಸೇರಿಗಾರ್ತಿ ಕೊಡವೂರು ಗ್ರಾಮದ ಕಸ್ತೂರಿ, ಮರ್ಣೆ ಗ್ರಾಮದ ರಾಧ, ಪುತ್ತೂರು ಗ್ರಾಮದ ಕೆ.ರತ್ನಾಕರ ಆಚಾರ್ಯ, ಕಡೆಕಾರು ಗ್ರಾಮದ ನೇತ್ರಾವತಿ, ಕೊರಂಗ್ರಪಾಡಿ ಗ್ರಾಮದ ಹರಿಜ ಶೆಟ್ಟಿ, ಅಂಜಾರು ಗ್ರಾಮದ ಯಾದವ ಎಂಬವರ ಮನೆಗಳ ಮೇಲೆ ಮರ ಬಿದ್ದು ಅಪಾರ ಹಾನಿ ಸಂಭವಿಸಿದ್ದು, ಒಟ್ಟು 7.75 ಲಕ್ಷ ರೂ. ನಷ್ಟ ಉಂಟಾಗಿದೆ.

ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಬಾಬಿ, ಕಂದಾವರ ಗ್ರಾಮದ ಗೋವಿಂದ ಪೂಜಾರಿ, ಸಿದ್ದಾಪುರ ಗ್ರಾಮದ ಪಾರ್ವತಿ ಶೆಡ್ತಿ, ಸೀತಾ, ಬಸ್ರೂರು ಗ್ರಾಮದ ಕಮಲ ಪೂಜಾರ್ತಿ, ಆಲೂರು ಗ್ರಾಮದ ನಾರಾಯಣ ಪೂಜಾರಿ ಎಂಬವರ ಮನೆಗಳಿಗೆ ಹಾನಿಯಾಗಿದ್ದು, ಇದರಿಂದ ಒಟ್ಟು 1.56 ಲಕ್ಷ ರೂ. ನಷ್ಟ ಉಂಟಾಗಿದೆ.

ಕಾಪು ತಾಲೂಕಿನ ಕುತ್ಯಾರು ಗ್ರಾಮದ ಜಗನ್ನಾಥ ಮುಖಾರಿ, ಬೆಳ್ಳೆ ಗ್ರಾಮದ ಗೀತಾ ವಿಠಲ, ನಂದಿಕೂರು ಗ್ರಾಮದ ವಸಂತಿ, ತೆಂಕ ಗ್ರಾಮದ ಇಂದಿರಾ ಪೂಜಾರ್ತಿ , ಶಿರ್ವ ಗ್ರಾಮದ ಪದ್ಮ ಮೂಲ್ಯಾಡಿ ಎಂಬವರ ಮನೆಗಳ ಮೇಲೆ ಭಾರೀ ಗಾಳಿಮಳೆಯಿಂದ ಮರ ಬಿದ್ದು ಹಾನಿಯಾಗಿ ಒಟ್ಟು ೩.೮೫ಲಕ್ಷ ರೂ. ನಷ್ಟವಾಗಿದೆ.

ಕುಂದಾಪುರ ತಾಲೂಕಿನ ಸಿದ್ಧಾಪುರ ಗ್ರಾಮದ ತೇಜಪ್ಪ ಶೆಟ್ಟಿ, ಯಡಮೊಗೆ ಗ್ರಾಮದ ಶ್ರೀನಿವಾಸ ಹೆಬ್ಬಾರ್ ಎಂಬವರ ತೋಟಗಾರಿಕೆ ಬೆಳೆ ಹಾನಿಯಾಗಿ ಒಟ್ಟು ೮೦ಸಾವಿರ ರೂ. ಹಾಗೂ ಕೊರ್ಗಿ ಗ್ರಾಮದ ಬುಡ್ಡಿ ಕುಲಾಲ್ತಿ ಎಂಬವರ ಜಾನು ವಾರು ಕೊಟ್ಟಿಗೆ ಭಾಗಶಃ ಹಾನಿಯಾಗಿ ಸುಮಾರು ೫,೦೦೦ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಕಡೆಕಾರಿಗೆ ಶಾಸಕರ ಭೇಟಿ: ಕಡೆಕಾರ್ ಗ್ರಾಪಂ ವ್ಯಾಪ್ತಿಯ ಕನ್ನರ್ಪಾಡಿ ಲೇಬರ್ ಕಾಲನಿಯ ನೇತ್ರಾವತಿ ಎಂಬವರ ಮನೆಯ ಮೇಲೆ ಭಾರೀ ಗಾಳಿ ಮಳೆಗೆ ಮರ ಬಿದ್ದು ಹಾನಿಗೀಡಾದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿಯೇ ಗ್ರಾಮ ಲೆಕ್ಕಾಧಿಕಾರಿಗೆ ಹಾನಿಯ ಬಗ್ಗೆ ಕಂದಾಯ ಇಲಾಖೆಗೆ ವರದಿ ನೀಡುವಂತೆ ಸೂಚನೆ ನೀಡಿ, ಸರಕಾರದಿಂದ ಗರಿಷ್ಠ ಪರಿಹಾರ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ದಿನಕರ ಬಾಬು, ಗ್ರಾಪಂ ಸದಸ್ಯ ಪ್ರಶಾಂತ್ ಸಾಲ್ಯಾನ್, ಪ್ರಮುಖರಾದ ಜಯಕರ ಸನಿಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X