Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಿಮರೋಡಿಗೆ ನ್ಯಾಯಾಂಗ ಬಂಧನ; ಆ.23ಕ್ಕೆ...

ತಿಮರೋಡಿಗೆ ನ್ಯಾಯಾಂಗ ಬಂಧನ; ಆ.23ಕ್ಕೆ ಜಾಮೀನು ಅರ್ಜಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ21 Aug 2025 8:36 PM IST
share
ತಿಮರೋಡಿಗೆ ನ್ಯಾಯಾಂಗ ಬಂಧನ; ಆ.23ಕ್ಕೆ ಜಾಮೀನು ಅರ್ಜಿ ವಿಚಾರಣೆ

ಉಡುಪಿ, ಆ.21: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬ್ರಹ್ಮಾವರ ಪೊಲೀಸರಿಂದ ಬಂಧಿತರಾದ ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಸಂಚಾರಿ ಪೀಠದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಧೀಶರಾದ ನಾಗೇಶ್ ಎನ್.ಎ ತಿರಸ್ಕರಿಸಿದ್ದಾರೆ.

ಆರೋಪಿ ತಿಮರೋಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ನ್ಯಾಯಾಧೀಶರು ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ಆ.23ರ ಶನಿವಾರಕ್ಕೆ ನಿಗದಿ ಪಡಿಸಿದ್ದಾರೆ. ಪೊಲೀಸರು ತಿಮರೋಡಿ ಅವರನ್ನು ಹಿರಿಯಡಕ ಜೈಲಿಗೆ ಕರೆದೊಯ್ದಿದ್ದಾರೆ.

ಇಂದು ಸಂಜೆ ಬ್ರಹ್ಮಾವರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಆರೋಪಿ ಪರ ವಕೀಲ ವಿಜಯ್ ವಾಸು ಪೂಜಾರಿ, ತನ್ನ ಕಕ್ಷಿದಾರ ಕಾನೂನಿಗೆ ಗೌರವ ನೀಡಿ ಬೆಳ್ತಂಗಡಿಯಿಂದ ವಿಚಾರಣೆಗೆಂದು ಬ್ರಹ್ಮಾವರ ಪೋಲಿಸ್ ಠಾಣೆಗೆ, ಅವರದ್ದೇ ಖಾಸಗಿ ವಾಹನದಲ್ಲಿ ಆಗಮಿಸಿ ಹಾಜರಾಗಿದ್ದಾರೆ. ಈ ವೇಳೆ ಅವರನ್ನು ಬಂಧಿಸಲಾಗಿದೆಎಂದು ವಿವರಿಸಿದರು.

ಪೊಲೀಸರು ಅವರ ವಿರುದ್ಧ ಹಾಕಿರುವ ಮೂರು ಪ್ರಕರಣಗಳ (196 (1), 352, 353(2) ಸೆಕ್ಷನ್‌ಗಳಲ್ಲಿ ಗರಿಷ್ಠ ಮೂರು ವರ್ಷ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಈ ಪ್ರಕರಣದಲ್ಲಿ ನನ್ನ ಕಕ್ಷಿದಾರರನ್ನು ಬಂಧಿಸುವಂತ ಯಾವುದೇ ಘೋರ ಅಪರಾಧ ಮಾಡಿಲ್ಲ. ಬಂಧನವು ಆರ್ಟಿಕಲ್ 19ನ್ನು ಕಸಿದುಕೊಂಡಂತೆ ಎಂದರು.

ನನ್ನ ಕಕ್ಷಿದಾರರಿಗೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ 190/130 ಬಿಪಿ ಇದ್ದು, ಇಸಿಜಿಯನ್ನು ಮಾಡಲಾಗಿದೆ. ಅಲ್ಲದೇ ನನ್ನ ಕಕ್ಷಿದಾರರಿಂದ ಯಾವುದೇ ರೀತಿಯ ಸಾರ್ವಜನಿಕ ಶಾಂತಿಭಂಗ ಉಂಟಾಗಿಲ್ಲ ಎಂದು ವಿಜಯ ವಾಸು ಪೂಜಾರಿ ವಾದಿಸಿದರು.

ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅಪರ ಸರಕಾರಿ ಅಭಿಯೋಜಕಿ ಮೋಹಿನಿ ವಾದಿಸಿ, ಆರೋಪಿಗೆ ಈಗಾಗಲೇ ನೋಟಿಸ್‌ಗಳನ್ನು ನೀಡಲಾಗಿದೆ. ಆರೋಪಿಯ ಮೇಲೆ 24 ಕೇಸ್‌ಗಳಿವೆ ಎಂದರು.

ಕಕ್ಷಿದಾರ ಹಾಗು ಸರಕಾರದ ವಾದವನ್ನು ಆಲಿಸಿದ ನ್ಯಾಯಾಧೀಶರು ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ನ್ಯಾಯಾಂಗ ಬಂಧನ ವಿಧಿಸಿದರು. ಮುಂದಿನ ವಿಚಾರಣೆಯನ್ನು ಆ.23 ಕ್ಕೆ ನಿಗದಿಪಡಿಸಲಾಗಿದೆ.

ಆಕ್ಷೇಪಣೆಗೆ ಚರ್ಚೆ

ಆರೋಪಿಯ ಜಾಮೀನು ಅರ್ಜಿ ವಿಚಾರಣೆಗೆ ಅಪರ ಸರಕಾರಿ ಅಭಿಯೋಜಕಿ ಅವರು ಆ.22ರಂದೇ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಬೇಕು ಎಂದು ಕಕ್ಷಿದಾರರ ಪರ ವಕೀಲ ವಿಜಯ ವಾಸು ಪೂಜಾರಿ ವಿನಂತಿಸಿ ದರು. ಇದಕ್ಕೆ ಎಪಿಪಿ ಸಮಯವಕಾಶ ಕೇಳಿದಾಗ, ಅಭಿಯೋಜಕರು ಹಾಗು ಕಕ್ಷಿದಾರರ ವಕೀಲರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ನ್ಯಾಯಾಧೀಶರು ಆ.23ಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X