Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯ 25 ಶಿಕ್ಷಣ ಸಂಸ್ಥೆಗಳಲ್ಲಿ...

ಉಡುಪಿಯ 25 ಶಿಕ್ಷಣ ಸಂಸ್ಥೆಗಳಲ್ಲಿ ರಂಗಶಿಕ್ಷಣ ತರಬೇತಿ: ತಲ್ಲೂರು

ವಾರ್ತಾಭಾರತಿವಾರ್ತಾಭಾರತಿ1 Nov 2025 5:43 PM IST
share
ಉಡುಪಿಯ 25 ಶಿಕ್ಷಣ ಸಂಸ್ಥೆಗಳಲ್ಲಿ ರಂಗಶಿಕ್ಷಣ ತರಬೇತಿ: ತಲ್ಲೂರು

ಉಡುಪಿ, ನ.1: ಪ್ರಸ್ತುತ ಜಿಲ್ಲೆಯ 90ಕ್ಕೂ ಅಧಿಕ ಶಾಲೆಗಳಲ್ಲಿ ನಡೆಯುತ್ತಿರುವ ಯಕ್ಷಗಾನ ತರಬೇತಿ ಯಕ್ಷಶಿಕ್ಷಣ ವನ್ನು 3,000ಕ್ಕೂ ಅಧಿಕ ಮಕ್ಕಳು ಪಡೆಯುತ್ತಿದ್ದಾರೆ. ಆರಂಭದಲ್ಲಿ 12 ಶಿಕ್ಷಣ ಸಂಸ್ಥೆಗಳನ್ನು ಆರಿಸಿಕೊಂಡಿದ್ದು, ಈ ವರ್ಷ 25 ಶಿಕ್ಷಣ ಸಂಸ್ಥೆಗಳಲ್ಲಿ ರಂಗಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ರಂಗಭೂಮಿ ಉಡುಪಿ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಹೈಸ್ಕೂಲಿನಲ್ಲಿ ಆಯೋಜಿಸಲಾದ ಮಕ್ಕಳಿಗೆ ನಾಟಕ, ರಂಗ ತರಬೇತಿಯನ್ನು ಉಚಿತವಾಗಿ ನೀಡುವ ’ರಂಗ ಶಿಕ್ಷಣ’ ತರಬೇತಿ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಂಗ ಶಿಕ್ಷಣದಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ. ವ್ಯಕ್ತಿಯೊಳಗೆ ಅಡಿಗಿರುವ ಪ್ರತಿಭೆಯನ್ನು ಈ ರಂಗ ಶಿಕ್ಷಣದ ಮೂಲಕ ಹೊರ ಬರಲು ಸಾಧ್ಯವಿದೆ. ನಾಟಕ ಕೇವಲ ಮನೋರಜನೆ ಮಾತ್ರವಲ್ಲ ಅದು ವ್ಯಕ್ತಿತ್ವವನ್ನು ರೂಪಿಸುವ ವೇದಿಕೆ ಯಾಗಿದೆ. ವಿದ್ಯಾರ್ಥಿಗಳು ಈ ರಂಗ ಶಿಕ್ಷಣದ ಪ್ರಯೋಜನ ಪಡೆಯಲು ಮುಂದಾಗಬೇಕು ರಂಗ ಶಿಕ್ಷಣದಿಂದ ಮಕ್ಕಳಲ್ಲಿ ಸಭಾ ಕಂಪನ, ಮಾತುಗಾರಿಕೆ, ಅಭಿನಯ, ವಾಕ್ಚಾತುರ್ಯ ಸೇರಿದಂತೆ ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಎಲ್ಲಾ ಶಿಕ್ಷಣವೂ ಇಲ್ಲಿ ದೊರೆಯುತ್ತದೆ ಎಂದರು.

ಯಕ್ಷಗಾನ ಕಲಿಕೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲದೆ ಅವರ ವ್ಯಕ್ತಿತ್ವ ವಿಕಸನಕ್ಕೂ ಕಾರಣವಾಗಿರುವುದನ್ನು ಮನಗಂಡಿದ್ದೇವೆ. ಅಲ್ಲದೆ ಭವಿಷ್ಯದಲ್ಲಿ ಯಕ್ಷ ಶಿಕ್ಷಣ ಪಡೆದ ಮಕ್ಕಳು ಉತ್ತಮ ಕಲಾವಿದರಾಗಿ ಮೂಡಿ ಬರಬಹುದು ಅಥವಾ ಒಬ್ಬ ಉತ್ತಮ ಪ್ರೇಕ್ಷಕರಾಗ ಬಲ್ಲರು. ಇದರಿಂದ ಯಕ್ಷಗಾನಕ್ಕೆ ಭವಿಷ್ಯದಲ್ಲಿ ಉತ್ತಮ ಕಲಾವಿದರು, ಪ್ರೇಕ್ಷಕರು ಇಲ್ಲ ಎಂಬ ಕೊರಗು ನಿವಾರಣೆಯಾಗಬಹುದು ಎಂದು ಅವರು ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಅನಿತಾ ಡಿಸೋಜ, ಹಿರಿಯ ರಂಗಕರ್ಮಿ ಹಾಗೂ ನಾಟಕ ನಿರ್ದೇಶಕ ಬಾಸುಮ ಕೊಡಗು, ರಂಗಭೂಮಿ ಉಪಾಧ್ಯಕ್ಷ ರಾಜಗೋಪಾಲ ಬಲ್ಲಾಳ್, ರಂಗಶಿಕ್ಷಣ ಸಹಸಂಚಾಲಕರಾದ ರವಿರಾಜ್ ನಾಯಕ್ ಮತ್ತು ಅಮಿತಾಂಜಲಿ ಕಿರಣ್, ಸಂಯೋಜಕ ಸೂರ್ಯಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯ ಸುಬ್ರಹ್ಮಣ್ಯ ಶೇರಿಗಾರ್, ಸದಸ್ಯರಾದ ಮಲ್ಲಿಕಾ ಭಟ್, ಪಲ್ಲವಿ ಕೊಡಗು, ಯೋಗೀಶ್, ಅಭಿಷೇಕ್, ವೀಣಾ ಮೊದಲಾದವರು ಉಪಸ್ಥಿತರಿದ್ದರು.

ರಂಗಭೂಮಿ ಉಡುಪಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ರಂಗಶಿಕ್ಷಣದ ಸಹ ಸಂಚಾಲಕ ರವಿರಾಜ್ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

‘ಶಿಕ್ಷಣದೊಂದಿಗೆ ಇಂತಹ ಶಿಕ್ಷಣೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಹೆತ್ತವರು, ಶಿಕ್ಷಕರು ಪ್ರೋತಾಹಿಸಬೇಕು. ಈ ಬಾರಿ ಸುಮಾರು 3,000 ಮಕ್ಕಳಿಗೆ ರಂಗ ಶಿಕ್ಷಣ ಕೊಡುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಪ್ರಬುದ್ಧ ರಂಗಕಲಾವಿದ ರನ್ನು ರಂಗಶಿಕ್ಷಣ ನೀಡಲು ಗುರುಗಳಾಗಿ ಆಯ್ಕೆ ಮಾಡಲಾಗಿದೆ. ಇವೆಲ್ಲಾ ವೆಚ್ಚವನ್ನು ರಂಗಭೂಮಿ ಉಡುಪಿ ಭರಿಸಲಿದೆ. ಈ ಮೂಲಕ ಉತ್ತಮ ಸುಸಂಸ್ಕೃತ ಸಮಾಜದ ನಿರ್ಮಾಣಕ್ಕೆ ರಂಗಶಿಕ್ಷಣದ ಮೂಲಕ ಬುನಾದಿ ಹಾಕುವತ್ತ ರಂಗಭೂಮಿ ಹೆಜ್ಜೆ ಇಟ್ಟಿದೆ’

-ತಲ್ಲೂರು ಶಿವರಾಮ ಶೆಟ್ಟಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X