Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ...

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ವಿಲ್ಸನ್ ಎಎಸ್‌ಎಗೆ 3ನೇ ಹಡಗು ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ6 Sept 2025 8:35 PM IST
share
ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ವಿಲ್ಸನ್ ಎಎಸ್‌ಎಗೆ 3ನೇ ಹಡಗು ಲೋಕಾರ್ಪಣೆ

ಉಡುಪಿ, ಸೆ.6: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(ಸಿಎಸ್‌ಎಲ್)ನ ಮಾಲಕತ್ವದ ಅಂಗಸಂಸ್ಥೆಯಾದ ಮಲ್ಪೆ ಬಂದರಿನಲ್ಲಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ನಾರ್ವೆಯ ವಿಲ್ಸನ್ ಎಎಸ್‌ಎ ಕಂಪೆನಿಗೆ ನಿರ್ಮಿಸುತ್ತಿರುವ 3,800 ಟಿಡಿಡಬ್ಲ್ಯೂ ಸಾಮಾನ್ಯ ಸರಕು ಸಾಗಣೆ ಹಡಗುಗಳ ಸರಣಿಯ ಮೂರನೇ ಹಡಗನ್ನು ಶನಿವಾರ ಲೋಕಾರ್ಪಣೆ ಮಾಡಲಾಯಿತು.

ಉಡುಪಿ ಶಿಪ್‌ಯಾರ್ಡ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಹಡಗನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕೃತವಾಗಿ ಜಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಾರ್ವೆಯ ಡ್ರೈ ಡಾಕ್ಸ್ ಆ್ಯಂಡ್ ಪ್ರೊಜೆಕ್ಟ್‌ನ ಫ್ಲೀಟ್ ಮೆನೇಜರ್ ಗೇರ್ ಓವೆಲಮ್ ಹಾಜರಿದ್ದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಮುಖ್ಯಕಾರ್ಯನಿರ್ವಹಣಾಧಿ ಕಾರಿ ಹರಿಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ಎಜಿಎಂ ಗೋಕುಲ್ ಪಿ.ಎನ್. ಶಿಪ್‌ನ ಕುರಿತು ಮಾಹಿತಿ ನೀಡಿದರು. ಮುಖ್ಯ ಆರ್ಥಿಕ ಅಧಿಕಾರಿ ಶಂಕರ್ ನಟರಾಜ್ ವಂದಿಸಿದರು. ಸವಿತಾ ಕಾರ್ಯಕ್ರಮ ನಿರೂಪಿಸಿದರು.

ಪರಿಸರ ಸ್ನೇಹಿ ತಂತ್ರಜ್ಞಾನ: ಈ ಹೊಸ ಶಿಪ್ 89.43 ಮೀಟರ್ ಉದ್ದ, 13.2 ಮೀಟರ್ ಅಗಲ ಹಾಗೂ 4.2 ಮೀಟರ್ ಆಳ ಹೊಂದಿದೆ. ನೆದರ್ಲ್ಯಾಂಡ್‌ನ ಕೋನೋಶಿಪ್ ಇಂಟರ್ನ್ಯಾಷನಲ್ ವಿನ್ಯಾಸಗೊಳಿಸಿದ ಈ ಶಿಪ್ ಯುರೋಪಿನ ಕರಾವಳಿ ನೀರಿನಲ್ಲಿ ಕಾರ್ಯನಿರ್ವಹಿಸಲು ತಕ್ಕಂತೆ, ಪರಿಸರ ಸ್ನೇಹಿ ಡೀಸೆಲ್-ಎಲೆಕ್ಟ್ರಿಕ್ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡಿದೆ.

ಈ ಸರಣಿಯ ಮೊದಲ ಹಡಗು ‘ವಿಲ್ಸನ್ ಇಕೋ-1’ ಕಳೆದ ಎಪ್ರಿಲ್ 23ರಂದು ಹಸ್ತಾಂತರಗೊಂಡು ಯುರೋಪಿನಲ್ಲಿ ಕಾರ್ಯಚರಿಸುತ್ತಿದೆ. ಎರಡನೇ ಹಡಗು ‘ವಿಲ್ಸನ್ ಇಕೋ-2’ ಅಂತಿಮ ಹಂತದಲ್ಲಿದ್ದು, ಸೆ.11 ರಂದು ಹಸ್ತಾಂತರಕ್ಕೆ ಸಿದ್ಧವಾಗಲಿದೆ.

ನಾರ್ವೆಯ ಬರ್ಗೆನ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ವಿಲ್ಸನ್ ಎಎಸ್‌ಎ, ಯುರೋಪಿನ ಪ್ರಮುಖ ಶಾರ್ಟ್-ಸೀ ಫ್ಲೀಟ್ ಆಪರೇಟರ್ ಆಗಿದ್ದು, ವರ್ಷಕ್ಕೆ ಸುಮಾರು 15 ಮಿಲಿಯನ್ ಟನ್ ಒಣಸರಕುಗಳನ್ನು ಸಾಗಿಸುತ್ತದೆ. ಕಂಪನಿ 1,500 ಡಿಡಬ್ಲ್ಯೂಟಿಯಿಂದ 8,500 ಡಿಡಬ್ಲ್ಯೂಟಿ ವರೆಗಿನ ಸುಮಾರು 130 ಹಡಗುಗಳ ನೌಕಾಪಡೆಯನ್ನು ನಿರ್ವಹಿಸುತ್ತಿದೆ.

ವಿಲ್ಸನ್ ಎಎಸ್‌ಎ, ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಜೊತೆ 6,300 ಟಿಡಿಡಬ್ಲ್ಯೂ ಸಾಮಾನ್ಯ ಸರಕು ಸಾಗಣೆಯ ಎಂಟು ಹಡಗುಗಳ ಫಾಲೋ-ಆನ್ ಆರ್ಡರ್ ಕೂಡ ಮಾಡಿಕೊಂಡಿದೆ. ಇದರಿಂದ ಉಡುಪಿ ಶಿಪ್‌ಯಾರ್ಡ್‌ನ ಅಂತಾರಾಷ್ಟ್ರೀಯ ಹೆಜ್ಜೆಗುರುತು ಇನ್ನಷ್ಟು ಬಲಗೊಂಡಿದೆ.

ಕೊಚ್ಚಿನ್ ಶಿಪ್‌ಯಾರ್ಡ್, ಉಡುಪಿ ಯಾರ್ಡ್‌ನ್ನು ಅಧೀನಕ್ಕೆ ಪಡೆದು ಕೊಂಡ ನಂತರ, ಉಡುಪಿ-ಸಿಎಸ್‌ಎಲ್ ಹಲವು ಪ್ರಮುಖ ಯೋಜನೆ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಭಾರತದ ಪ್ರಮುಖ ಟಗ್ ಆಪರೇಟರ್ ಗಳಿಗೆ 62 ಟನ್ ಮತ್ತು 70 ಟನ್ ಬೊಲ್ಲಾರ್ಡ್ ಪುಲ್ ಟಗ್‌ಗಳನ್ನು ನಿರ್ಮಿಸಿಕೊಟ್ಟಿದೆ. ಪ್ರಸ್ತುತ 70 ಟನ್ ಬೊಲ್ಲಾರ್ಡ್ ಪುಲ್ ಟಗ್‌ಗಳ 12 ಹಡಗುಗಳ ನಿರ್ಮಾಣ ಕಾರ್ಯವೂ ವಿವಿಧ ಹಂತಗಳಲ್ಲಿ ನಡೆಯುತ್ತಿದೆ ಎಂದು ಸಿಇಓ ಹರಿಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X