Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮುಂದುವರಿದ ಸಾಮಾನ್ಯ ಮಳೆ; 3...

ಉಡುಪಿ: ಮುಂದುವರಿದ ಸಾಮಾನ್ಯ ಮಳೆ; 3 ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ9 Jun 2026 8:55 PM IST
share
ಉಡುಪಿ: ಮುಂದುವರಿದ ಸಾಮಾನ್ಯ ಮಳೆ; 3 ಮನೆಗಳಿಗೆ ಹಾನಿ

ಉಡುಪಿ, ಜೂ.9: ಹವಾಮಾನ ಇಲಾಖೆ ನೀಡಿದ ರೆಡ್ ಅಲರ್ಟ್‌ಗೆ ವ್ಯತಿರಿಕ್ತವಾಗಿ ಇಂದೂ ಸಹ ಉಡುಪಿ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಮುಂದುವರಿದಿದೆ. ಒಂದೆರಡು ಬಾರಿ ಜೋರಾಗಿ ಮಳೆ ಬಂದಿದ್ದು ಬಿಟ್ಟರೆ ಜಿಲ್ಲೆಯಾದ್ಯಂತ ಹೆಚ್ಚಾಗಿ ಹನಿಮಳೆಯೇ ಸುರಿದಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಸಂಜೆಯ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಿತ್ತು.

ಉಡುಪಿ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಕಾಪು ಸೇರಿದಂತೆ ಹೆಚ್ಚಿನ ಕಡೆಗಳಲ್ಲೂ ಸಾಮಾನ್ಯವಾಗಿ ಮುಂಗಾರು ಆರಂಭಿಕ ದಿನಗಳಲ್ಲಿ ಸುರಿಯುವ ಜಡಿ ಮಳೆ ಇನ್ನೂ ಪ್ರಾರಂಭವಾಗಿಲ್ಲ. ಹೀಗಾಗಿ ಮೇ ತಿಂಗಳ ಮುಂಗಾರು ಪೂರ್ವ ಮಳೆಯ ಸಂದರ್ಭವಾಗಲಿ, ಈಗಿನ ಮುಂಗಾರು ಪ್ರಾರಂಭಗೊಂಡ ಬಳಿಕವಾಗಲೀ ಉಡುಪಿ ಜಿಲ್ಲೆ ಇನ್ನೂ ನೆರೆ, ಪ್ರವಾಹವನ್ನೇ ಕಂಡಿಲ್ಲ.

ಮಳೆಯ ಸಂದರ್ಭದಲ್ಲಿ ಆಗಾಗ ಬೀಸುವ ಗಾಳಿಯಿಂದ ಜಿಲ್ಲೆಯಲ್ಲಿ ಮೂರು ಮನೆಗಳಿಗೆ ಹಾನಿಯಾದ ವರದಿ ಬಂದಿದೆ. ಕುಂದಾಪುರ ತಾಲೂಕು ಹಳನಾಡು ಗ್ರಾಮದ ಸೀತಾ ಎಂಬವರ ಮನೆಗೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿ 30ಸಾವಿರ ರೂ.ನಷ್ಟವಾದರೆ, ಹೊಸಾಡು ಗ್ರಾಮದ ಲಕ್ಷ್ಮೀ ಖಾರ್ವಿ ಎಂಬವರ ಮನೆಗೆ 60ಸಾವಿರ ರೂ.ನಷ್ಟು ನಷ್ಟ ಸಂಭವಿಸಿದೆ.

ಬೈಂದೂರು ತಾಲೂಕು ಶಿರೂರು ಗ್ರಾಮದ ಬಿದೀನಾ ಎಂಬವರ ಮನೆಯೂ ಗಾಳಿ-ಮಳೆಯಿಂದ ಭಾಗಶ: ಹಾನಿಗೊಂಡಿದ್ದು 60,000ರೂ. ನಷ್ಟದ ಅಂದಾಜು ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ಮುಂಜಾನೆ 8:30ರವರೆಗೆ ಹಿಂದಿನ 24 ಗಂಟೆಗಳಲ್ಲಿ ಸರಾಸರಿ 35.7ಮಿ.ಮೀ. ಮಳೆಯಾಗಿದೆ. ಹೆಬ್ರಿಯಲ್ಲಿ ಅತ್ಯಧಿಕ 49.2ಮಿ.ಮೀ. ಮಳೆಯಾದರೆ ಕುಂದಾಪುರದಲ್ಲಿ 42.2, ಬ್ರಹ್ಮಾವರದಲ್ಲಿ 37.7, ಬೈಂದೂರಿನಲ್ಲಿ 37.5, ಉಡುಪಿಯಲ್ಲಿ 25.7, ಕಾರ್ಕಳದಲ್ಲಿ 25.6 ಹಾಗೂ ಕಾಪುನಲ್ಲಿ 20.2ಮಿ.ಮೀ. ಮಳೆ ಬಿದ್ದಿದೆ.

ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಿಗೆ ವೇಗದ ಗಾಳಿ ಸಹಿತ ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದೆ.ಅರಬಿಸಮುದ್ರದ ಕಡೆಯಿಂದ ಗಂಟೆಗೆ 60ಕಿ.ಮೀ. ವೇಗದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X