Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅ.4ರಿಂದ ಮಾನಸಿಕ...

ಉಡುಪಿ: ಅ.4ರಿಂದ ಮಾನಸಿಕ ಆರೋಗ್ಯ-ಯೋಗಕ್ಷೇಮ ಸಪ್ತಾಹ

ವಾರ್ತಾಭಾರತಿವಾರ್ತಾಭಾರತಿ2 Oct 2025 6:12 PM IST
share
ಉಡುಪಿ: ಅ.4ರಿಂದ ಮಾನಸಿಕ ಆರೋಗ್ಯ-ಯೋಗಕ್ಷೇಮ ಸಪ್ತಾಹ

ಉಡುಪಿ, ಅ.2: ಮಾನಸಿಕ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಮಾನಸಿಕ ಯೋಗ ಕ್ಷೇಮದ ಕುರಿತು ಜನತೆಯಲ್ಲಿ ಅರಿವು ಮೂಡಿಸಲು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಹಿನ್ನೆಲೆ ಯಲ್ಲಿ ಅ.4ರಿಂದ 12ರವರೆಗೆ ಉಡುಪಿಯಲ್ಲಿ ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮ ಸಪ್ತಾಹವನ್ನು ಆಚರಿಸಲಾ ಗುತ್ತಿದೆ ಎಂದು ನಾಡಿನ ಖ್ಯಾತನಾಮ ಮನೋರೋಗ ತಜ್ಞ ಹಾಗೂ ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಡಾ.ಭಂಡಾರಿ ಲಯನ್ಸ್ ಜಿಲ್ಲೆ 317ಸಿ, ಲಯನ್ಸ್ ಕ್ಲಬ್ ಮಣಿಪಾಲ, ಐಎಂಎ ಉಡುಪಿ ಕರಾವಳಿ ಘಟಕ ಹಾಗೂ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಒಂದು ವಾರದ ಈ ಸಪ್ತಾಹ ನಡೆಯಲಿದೆ ಎಂದರು.

ಇತ್ತೀಚಿನ ವೈಜ್ಞಾನಿಕ ವರದಿಯಂತೆ ಪ್ರಸ್ತುತ ಒತ್ತಡದ ಜಗತ್ತಿನಲ್ಲಿ ವಿಶ್ವದ ಶೇ.25ರಷ್ಟು ಮಂದಿ ಖಿನ್ನತೆ ಹಾಗೂ ಆಂತಕದ ತೊಂದರೆಗಳಿಂದ ಬಳಲು ತಿದ್ದಾರೆ. 10-19 ವಯೋವರ್ಗದ ಯುವಜನತೆಯಲ್ಲಿ ಪ್ರತಿ 7 ಮಂದಿಯಲ್ಲಿ ಒಬ್ಬರು ಮಾನಸಿಕ ಆರೋಗ್ಯದ ಸಮಸ್ಯೆಯನ್ನು ಹೊಂದಿದ್ದಾರೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರದಲ್ಲಿ ಶೇ.14 ಮಂದಿ ಮಾನಸಿಕ ಆರೋಗ್ಯ ಅಸ್ವಸ್ಥತೆಯೊಂದಿಗೆ ಬದುಕುತಿದ್ದಾರೆ ಎಂದರು.

ಭಾರತದಲ್ಲೂ ವಯಸ್ಕ ಜನಸಂಖ್ಯೆಯ ಶೇ.10ಕ್ಕಿಂತ ಅಧಿಕ ಮಂದಿ ಯಾವುದಾದರೂ ಒಂದು ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದಾರೆ. ದೇಶದಲ್ಲಿ ಖಿನ್ನತೆ ಹಾಗೂ ಆತ್ಮಹತ್ಯೆ ದರಗಳು ಕಳವಳಕರ ರೀತಿಯಲ್ಲಿ ಹೆಚ್ಚಿದೆ. ಅಲ್ಲದೇ ದೇಶದಲ್ಲಿ ಮಾನಸಿಕ ಆರೋಗ್ಯ ಕಾರ್ಯಪಡೆಯ ಸಂಖ್ಯೆಯೂ ತೀರಾ ಕಡಿಮೆ ಇದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಓ) ಪ್ರತಿ ಒಂದು ಲಕ್ಷ ಮಂದಿಗೆ ಮೂವರು ಮನೋವೈದ್ಯರಿರಬೇಕು ಎಂದು ಹೇಳಿದರೆ, ಭಾರತದಲ್ಲಿ ಈ ಸಂಖ್ಯೆ 0.7 ಮಾತ್ರ ಇದೆ ಎಂದು ವಿವರಿಸಿದರು.

ಈ ಹಿನ್ನೆಲೆಯಲ್ಲಿ ಜನತೆಗೆ ಅದರಲ್ಲೂ ಮುಖ್ಯವಾಗಿ ಯುವಜನತೆಗೆ ಮಾನಸಿಕ ಆರೋಗ್ಯದ ಕುರಿತು ಅರಿವು, ಜಾಗೃತಿ ಮೂಡಿಸಲು, ಭಾವನಾತ್ಮಕ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಯೋಗಕ್ಷೇಮದ ಕುರಿತು ಮಾಹಿತಿ ನೀಡಲು ಈ ಸಪ್ತಾಹವನ್ನು ವಿವಿದೆಡೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಸಪ್ತಾಹದ ಉದ್ಘಾಟನೆ ಅ.4ರ ಶನಿವಾರ ಬೆಳಗ್ಗೆ 10:30ಕ್ಕೆ ಹಾರಾಡಿಯ ಡಾ.ಎ.ವಿ.ಬಾಳಿಗಾ ಸಮುದಾಯ ಭವನ ದಲ್ಲಿ ನಡೆಯಲಿದೆ. ಬಳಿಕ ಅಲ್ಲಿನ ಅಭಯ ಹಾಗೂ ಬಂಧು ಡೇಕೇರ್ ಸೆಂಟರ್‌ನ ನಿವಾಸಿಗಳೊಂದಿಗೆ ಸಮಾಲೋಚನೆ ಹಾಗೂ ಸಂವಹನ ಆಟಗಳು ನಡೆಯಲಿವೆ. ಅ.5ರಂದು ರೋಟರಿ ಕ್ಲಬ್ ಶಂಕರಪುರದಲ್ಲಿ, ಅ.6ರಂದು ಮಣಿಪಾಲದ ಮಾಧವಕೃಪಾ ಶಾಲೆಯಲ್ಲಿ, ಅ.7ರಂದು ಮಣಿಪಾಲ್ ಟೆಕ್ನಾಲಜೀಸ್ (ಎಂಜಿಪಿಎಸ್) ನಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಅ.8ರಂದು ಮಣಿಪಾಲ ಮಾಧವಕೃಪ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ಮಣಿಪಾಲ ಕೆಎಂಸಿಯ ಸಂವಹನ ಸಭಾಂಗಣದಲ್ಲಿ ಮಹಿಳೆಯರಲ್ಲಿ ಮಾನಸಿಕ ಆರೋಗ್ಯ ಬಗ್ಗೆ ಮನೋವೈದ್ಯ ಡಾ.ಮಾನಸರಿಂದ ಮಾಹಿತಿ, ಅ.9ರಂದು ಮಣಿಪಾಲದ ಗ್ರೀನ್ ವ್ಯಾಲಿ ಪ್ಯಾರಡೈಸ್‌ನಲ್ಲಿ ಮರೆಗುಳಿತನ ಮತ್ತು ಜೀವನಶೈಲಿ ಮಾರ್ಪಾಡು ಉಪನ್ಯಾಸ, ಅ.10ರಂದು ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹಾಗೂ ಕಾರ್ಯಾಗಾರ ನಡೆಯಲಿದೆ ಎಂದರು.

ಅ.11ರಂದು ಬೆಳಗ್ಗೆ 7 ಗಂಟೆಗೆ ಉಡುಪಿ ಕ್ಲಾಕ್ ಟವರ್‌ನಿಂದ ಅಜ್ಜರಕಾಡು ಭುಜಂಗ ಪಾರ್ಕ್‌ವರೆಗೆ ವಾಕಥಾನ್ ನಡೆಯಲಿದೆ. ಅ.12 ರಂದು ಮಣಿಪಾಲ ಸರಳೇಬೆಟ್ಟಿನ ಶಿವಪಾಡಿ ದೇವಸ್ಥಾನದಲ್ಲಿ ಬೆಳಗ್ಗೆ 9:30ಕ್ಕೆ ಕೊಳೆಗೇರಿ ಮಕ್ಕಳಿಗಾಗಿ ಆಪ್ತ ಸಲಹಾ ಕೇಂದ್ರ ಮತ್ತು ಮಾಸಿಕ ಮಾನಸಿಕ ಆರೋಗ್ಯ ಸಹಾಯವಾಣಿಯ ಉದ್ಘಾಟನೆ ನಡೆಯಲಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಸ್ವಪ್ನಾ ಸುರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಐಎಂಎ ಉಡುಪಿ-ಕರಾವಳಿ ಅಧ್ಯಕ್ಷ ಡಾ.ಸುರೇಶ್ ಶೆಣೈ, ಲಯನ್ಸ್ ಕ್ಲಬ್ ಮಣಿಪಾಲದ ಅಧ್ಯಕ್ಷ ಗಣೇಶ್ ಪೈ ಉಪಸ್ಥಿತರಿದ್ದರು.

ಕೋವಿಡ್ ಬಳಿಕ ಮಾನಸಿಕ ಅಸ್ವಸ್ಥತೆ ಪ್ರಮಾಣ ಹೆಚ್ಚಳ

ಕೋವಿಡ್ ಬಳಿಕ ಮಾನಸಿಕ ಅಸ್ವಸ್ಥತೆಯಿಂದ ಬಳಲುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ಸಮಾಜದ ಎಲ್ಲಾ ವಯೋವರ್ಗದ ಜನರಲ್ಲಿ ಹಾಗೂ ಮಹಿಳೆಯರಲ್ಲೂ ಇದು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ ಎಂದು ಡಾ.ಪಿ.ವಿ.ಭಂಡಾರಿ ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಶಾಲಾ-ಕಾಲೇಜುಗಳು ಮುಚ್ಚಿದ್ದರಿಂದ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠವನ್ನು ಮೊಬೈಲ್ ಮೂಲಕ ನೀಡಲು ತೊಡಗಿದ್ದರಿಂದ ಮೊಬೈಲ್ ಗೀಳು ಮಕ್ಕಳಲ್ಲಿ ಮಾನಸಿಕ ಅಸ್ವಸ್ಥತೆ ಹೆಚ್ಚಲು ಕಾರಣವಾಗಿದೆ. ಅದರ ಪರಿಣಾಮ ಮೂರು ವರ್ಷಗಳ ಬಳಿಕವೂ ಕಂಡುಬರುತ್ತಿದೆ ಎಂದು ಡಾ.ಭಂಡಾರಿ ತಿಳಿಸಿದರು.

ಇದೇ ಕಾರಣದಿಂದ ಮಹಿಳೆಯರು ಹಾಗೂ ಹಿರಿಯ ನಾಗರಿಕರಲ್ಲೂ ಮಾನಸಿಕ ರೋಗದ ಲಕ್ಷಣಗಳು ಕಂಡು ಬರುತ್ತಿದೆ. ಇದಕ್ಕೆ ಅನ್ಯ ಕಾರಣಗಳಿದ್ದರೂ, ಕೋವಿಡ್ ಅವಧಿಯಲ್ಲಿ ಮೊಬೈಲ್ ಬಳಕೆ ಎಲ್ಲರಲ್ಲೂ ಹೆಚ್ಚಿರುವುದು ಪ್ರಮುಖ ಕಾರಣ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X