Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 5ರಿಂದ ಪರಿಶಿಷ್ಟ ಜಾತಿ...

ಮೇ 5ರಿಂದ ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ24 April 2025 8:57 PM IST
share
ಮೇ 5ರಿಂದ ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ, ಎ.24: ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಉಡುಪಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಮೇ 5ರಿಂದ ಮೂರು ಹಂತಗಳಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ನಡೆದ ಬುಧವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸಮಿತಿಯು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿ ಮೇ 5ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ದತ್ತಾಂಶಗಳನ್ನು ಸಂಗ್ರಹಿಸಿ ಸಮೀಕ್ಷೆ ನಡೆಸುವ ಕಾರ್ಯ ಶಾಲಾ ಶಿಕ್ಷಕರಿಂದ ನಡೆಯಲಿದೆ. ದತ್ತಾಂಶ ಸಂಗ್ರಹಣೆಗಾಗಿ ಮೇ 5ರಿಂದ 17ರವರೆಗೆ ಮನೆ ಮನೆಗೆ ಆಗಮಿಸುವ ಗಣತಿದಾರ ಶಿಕ್ಷಕರೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.

ತಾಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ತಾಲೂಕಿನ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳು ಇದರ ಸದಸ್ಯರಾಗಿರುತ್ತಾರೆ ಎಂದರು.

ಸಮೀಕ್ಷೆಯ ಮೇಲ್ವಿಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರನ್ನು ನಿಯೋಜಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಕ್ರಮಕೈಗೊಳ್ಳುವಂತೆ ತಿಳಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ನೋಡಲ್ ಅಧಿಕಾರಿಗಳು ಸಮೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಕುಟುಂಬ ದತ್ತಾಂಶದ ಪ್ರಕಾರ ಗ್ರಾಮ ಹಾಗೂ ನಗರಗಳಲ್ಲಿ ಕುಟುಂಬವಾರು ಸಂಖ್ಯೆಗಳನ್ನು ವಿಭಜಿಸಿ, ತಾಲೂಕುಗಳಿಗೆ ಗ್ರಾಮ ಪಂಚಾಯತ್‌ವಾರು/ಗ್ರಾಮವಾರು/ವಾರ್ಡ್‌ವಾರು ಪಾಸ್‌ವರ್ಡ್ ಮೂಲಕ ಮಾಹಿತಿ ಒದಗಿಸಲಾಗುವುದು. ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಲು ತಿಳಿಸಲಾಯಿತು.

ಎಸ್‌ಸಿ ಜನಸಂಖ್ಯೆ 75,000: ಉಡುಪಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಸುಮಾರು 75,000ಕ್ಕೂ ಅಧಿಕ ಜನಸಂಖ್ಯೆ ಇದ್ದು, ಇವರ ಸಮೀಕ್ಷೆ ನಡೆಸಲು ಸುಮಾರು 1000ರಿಂದ 1100 ಗಣತಿದಾರರ ಅವಶ್ಯಕತೆ ಇದೆ.ಈ ಕಾರ್ಯಕ್ಕೆ ಶಿಕ್ಷಣ ಇಲಾಖೆ ಶಿಕ್ಷಕರನ್ನು ನೇಮಕಮಾಡಬೇಕು ಎಂದ ಅವರು, ಜಿಲ್ಲಾ ಮಾಸ್ಟರ್ ಟ್ರೈನರ್‌ಗಳಿಗೆ ಎಪ್ರಿಲ್ 28ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತರಬೇತಿ ನೀಡಲಾಗು ವುದು. ತರಬೇತಿಯಲ್ಲಿ ಎಲ್ಲಾ ಶಿಕ್ಷಕರು ತಪ್ಪದೇ ಭಾಗವಹಿಸಬೇಕು ಎಂದರು.

ಸರಕಾರದಿಂದ ಕಾಲಕಾಲಕ್ಕೆ ನೀಡುವ ಎಲ್ಲಾ ನಿರ್ದೇಶನ ಹಾಗೂ ಮಾರ್ಗಸೂಚಿಗಳಂತೆ ಎಲ್ಲಾ ಇಲಾಖೆ ಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿಗೊಳ್ಳುವಂತೆ ನೋಡಿಕೊಳ್ಳಬೇಕು ಎಂದೂ ಡಾ.ವಿದ್ಯಾಕುಮಾರಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಸಹಾಯಕ ಕಮಿಷನರ್ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್ ಉಪ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X