Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 50-60 ಕೋಟಿ ರೂ....

ಉಡುಪಿ ಜಿಲ್ಲೆಯಲ್ಲಿ 50-60 ಕೋಟಿ ರೂ. ಅನ್‌ಕ್ಲೈಮ್ಡ್ ಠೇವಣಿ: ಉಡುಪಿ ಲೀಡ್ ಬ್ಯಾಂಕ್ ಮುಖ್ಯಪ್ರಬಂಧಕ ಹರೀಶ್

ವಾರ್ತಾಭಾರತಿವಾರ್ತಾಭಾರತಿ4 Aug 2026 7:34 PM IST
share
ಉಡುಪಿ ಜಿಲ್ಲೆಯಲ್ಲಿ 50-60 ಕೋಟಿ ರೂ. ಅನ್‌ಕ್ಲೈಮ್ಡ್ ಠೇವಣಿ: ಉಡುಪಿ ಲೀಡ್ ಬ್ಯಾಂಕ್ ಮುಖ್ಯಪ್ರಬಂಧಕ ಹರೀಶ್

ಉಡುಪಿ, ಆ.4: ಎರಡು ವರ್ಷಗಳಿಂದ ಸಕ್ರಿಯವಾಗಿರದ ಬ್ಯಾಂಕ್ ಖಾತೆಗಳು ನಿಷ್ಕ್ರೀಯಗೊಂಡು, ಡೆಬಿಟ್ ಬ್ಲಾಕ್ ಆಗುತ್ತದೆ. ಹಾಗೆ 10ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಆ ಖಾತೆಯಿಂದ ಯಾವುದೇ ವ್ಯವಹಾರ ಮಾಡದಿದ್ದರೆ ಅದರಲ್ಲಿನ ಹಣ ಭಾರತೀಯ ರಿಸರ್ವ್ ಬ್ಯಾಂಕಿನ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿ(ಡಿಇಎ)ಗೆ ವರ್ಗಾವಣೆ ಗೊಳ್ಳುತ್ತದೆ. ಈ ರೀತಿ ಉಡುಪಿ ಜಿಲ್ಲೆಯಲ್ಲಿ ಕ್ಲೈಮ್ ಆಗದೆ ಇರುವ 50-60ಕೋಟಿ ರೂ. ಠೇವಣಿ ಹಣ ಡಿಇಎ ನಿಧಿಯಲ್ಲಿದೆ ಎಂದು ಉಡುಪಿ ಕೆನರಾ ಲೀಡ್ ಬ್ಯಾಂಕಿನ ಮುಖ್ಯ ಪ್ರಬಂಧಕ ಹರೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ಪ್ರತಿಕಾ ಭವನದಲ್ಲಿ ಮಂಗಳವಾರ ಆಯೋಜಿಸಲಾದ ಸನ್ಮತಿ ಪತ್ರಿಕೆಯ ಜುಲೈ ತಿಂಗಳ ಸಂಚಿಕೆ ಬಿಡುಗಡೆ ಹಾಗೂ ಪತ್ರಕರ್ತರಿಗೆ ಪಿಎಂಎಸ್‌ಬಿವೈ (ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನಾ) ನೋಂದಣಿಗೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಅನ್‌ಕ್ಲೇಮ್ಡ್ ಹಣವನ್ನು ಖಾತೆದಾರರ ವಾರೀಸುದಾರರು ಅಥವಾ ಕುಟುಂಬದವರು ಅಗತ್ಯ ದಾಖಲೆ ನೀಡಿ, ಹಣವನ್ನು ವಾಪಾಸ್ಸು ಪಡೆದು ಕೊಳ್ಳಬಹುದಾಗಿದೆ. ಈ ರೀತಿಯ ಖಾತೆಗಳ ಮಾಹಿತಿಯನ್ನು ಎಲ್ಲ ಬ್ಯಾಂಕಿನ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಯನ್ನು ನೀಡಿ ಅವರ ವಾರೀಸುದಾರರು ಆ ಹಣವನ್ನು ವಾಪಾಸ್ಸು ಪಡೆಯ ಬಹುದಾಗಿದೆ ಎಂದರು.

ಆಹಾರ ಸಂಸ್ಕರಣೆ ಉದ್ಯಮಕ್ಕಾಗಿ ಯೋಜನೆ ಇದ್ದು, ಇದರಲ್ಲಿ ಶೇ.50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ 500-600 ಘಟಕಗಳು ಈ ಯೋಜನೆಯ ಲಾಭ ಪಡೆದುಕೊಂಡಿವೆ. ಮುದ್ರಾ ಯೋಜನೆಯಲ್ಲಿ 10ಲಕ್ಷ ರೂ. ಒಳಗೆ ಸಾಲ ಪಡೆದುಕೊಂಡರೆ ಮತ್ತು ಮಕ್ಕಳ ಉನ್ನತ ಶಿಕ್ಷಣಕ್ಕಾಗಿ 7.5ಲಕ್ಷ ರೂ.ವರೆಗಿನ ವಿದ್ಯಾಭ್ಯಾಸ ಸಾಲದಲ್ಲಿಯೂ ಯಾವುದೇ ಅಡಮಾನ ಇರಿಸುವ ಅಗತ್ಯ ಇಲ್ಲ ಎಂದರು.

ಎಟಿಎಂ ಕಾರ್ಡ್ ಹೊಂದಿದವರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲು ಅವಕಾಶ ಇದೆ. ಮುದ್ರಾ ಸೇರಿದಂತೆ ವಿವಿಧ ಉದ್ಯಮಶೀಲತೆ ಯೋಜನೆಯಲ್ಲಿ ಪ್ರತಿ ವರ್ಷ ಉಡುಪಿ ಜಿಲ್ಲೆಯಿಂದ 3000ಕೋಟಿ ರೂ. ಸಾಲದ ಗುರಿಯನ್ನು ಎಲ್ಲ ಬ್ಯಾಂಕ್‌ಗಳಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಸಾಲ ಮರು ವಸೂಲಾತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಅಧಿಕಾರಿಗಳು ಪ್ರತಿ ದಿನ 2ಗಂಟೆ ಮೀಸಲಿರಿಸಬೇಕು. ಹೀಗೆ ಜಿಲ್ಲೆಯಲ್ಲಿ ಶೇ.25ರಷ್ಟು ಸಾಲ ಮರು ವಸೂಲಾತಿ ಆಗುತ್ತಿದೆ. ಶಿಕ್ಷಣ ಸಾಲ ಮತ್ತು 2ಲಕ್ಷ ರೂ.ಗಿಂತ ಕಡಿಮೆ ಸಾಲಕ್ಕೆ ಬ್ಯಾಂಕುಗಳು ಸಿಬಿಲ್ ನೋಡುವುದಿಲ್ಲ ಎಂದು ಅವರು ಹೇಳಿದರು.

ಅಲ್ಲದೆ ಇವರು ಬ್ಯಾಂಕುಗಳಲ್ಲಿ ಸಿಗುವ ಕೃಷಿ ಸಾಲ, ಶಿಕ್ಷಣ ಸಾಲ ಸಹಿತ ವಿವಿಧ ಸಾಲಗಳು, ಠೇವಣಿ ಯೋಜನೆ ಗಳು ಹಾಗೂ ಜೀವ- ಆರೋಗ್ಯ-ಅಪಘಾತ ವಿಮೆ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಮೀರಾ ಹಾಜರಿದ್ದರು.

ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಭಾಕರ ಆಚಾರ್ಯ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

ಸಾಲ ನೀಡುವುದರಲ್ಲಿ ಉಡುಪಿ ಜಿಲ್ಲೆ 8 ಸ್ಥಾನ

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಅನಿವಾಸಿ ಭಾರತೀಯ ಠೇವಣಿ ಹೆಚ್ಚಿರುವುದರಿಂದ ನಮ್ಮ ಜಿಲ್ಲೆಗಳಲ್ಲಿ ಕ್ರೇಡಿಟ್-ಠೇವಣಿ(ಸಿಡಿ) ಅನುಪಾತ ಶೇ.50ಕ್ಕಿಂತ ಕಡಿಮೆ ಅಂದರೆ ಶೇ.40ರಷ್ಟಿದೆ. ಒಟ್ಟು ಸಾಲ ನೀಡಿರುವುದರಲ್ಲಿ ಉಡುಪಿ ಜಿಲ್ಲೆಯಲ್ಲಿ ಇಡೀ ರಾಜ್ಯದಲ್ಲಿ 8ನೇ ಸ್ಥಾನದಲ್ಲಿದೆ. ಸುಮಾರು 20ಸಾವಿರ ಕೋಟಿಯಷ್ಟು ಸಾಲವನ್ನು ನಾವು ವಿತರಣೆ ಮಾಡಿದ್ದೇವೆ ಎಂದು ಮುಖ್ಯ ಪ್ರಬಂಧಕ ಹರೀಶ್ ಮಾಹಿತಿ ನೀಡಿದರು.

ಈ ಹಿಂದೆ ಬ್ಯಾಂಕ್‌ಗಳಲ್ಲಿ ಪ್ರಾದೇಶಿಕವಾಗಿ ನೇಮಕಾತಿ ಮಾಡಲಾಗು ತ್ತಿತ್ತು. ಈಗ ರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವುದರಿಂದ ಹೊರ ರಾಜ್ಯದ ಅಧಿಕಾರಿಗಳೇ ಹೆಚ್ಚು ನೇಮಕಾತಿಯಾಗುತ್ತಿದ್ದಾರೆ. ಕರ್ನಾಟಕದಿಂದ ಬ್ಯಾಂಕಿಂಗ್ ಕ್ಷೇತ್ರಕ್ಕೆ ಬರುವವರ ಸಂಖ್ಯೆ ತುಂಬಾ ಕಡಿಮೆ ಆಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನತೆಗೆ ಬ್ಯಾಂಕಿನಲ್ಲಿ ವ್ಯವಹರಿಸಲು ಭಾಷಾ ಸಮಸ್ಯೆ ಆಗುತ್ತಿದೆ. ಆದುದರಿಂದ ಮತ್ತೆ ಪ್ರಾದೇಶಿಕವಾಗಿ ನೇಮಕಾತಿ ಮಾಡಲು ಎಲ್ಲ ಬ್ಯಾಂಕ್‌ಗಳಿಗೆ ನಿರ್ದೇಶನವನ್ನು ನೀಡಲಾಗುತ್ತಿದೆ. ಅದರಂತೆ ಹಲವು ಬ್ಯಾಂಕ್‌ಗಳು ಮಾಡುತ್ತಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X