Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ...

ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಶೇ.55.49 ಗಣತಿ ನಮೂನೆ ವಿತರಣೆ

ವಾರ್ತಾಭಾರತಿವಾರ್ತಾಭಾರತಿ6 July 2026 9:08 PM IST
share
ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಶೇ.55.49 ಗಣತಿ ನಮೂನೆ ವಿತರಣೆ
ಸೆಕ್ಟರ್ ಆಫೀಸರ್ಸ್‌, ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಗಳಿಂದ ಸಭೆ

ಉಡುಪಿ : ಎರಡು ದಿನದೊಳಗೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್- 2026) ಪ್ರಕ್ರಿಯೆಯ ಗಣತಿ ನಮೂನೆ (ಎನ್ಯೂಮರೇಶನ್ ಫಾರ್ಮ್)ಗಳನ್ನು ಮತದಾರರಿಗೆ ವಿತರಿಸುವಂತೆ ಚುನಾವಣಾ ಆಯೋಗದಿಂದ ಆದೇಶ ಬಂದಿರುವ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ಧಾವಂತದಲ್ಲಿ ಮನೆ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಿ ಏದುಸಿರುವ ಬಿಡುತ್ತಿದ್ದಾರೆ.

ಜುಲೈ 6ರ ಸೋಮವಾರದವರೆಗೆ ಉಡುಪಿ ಜಿಲ್ಲೆಯಲ್ಲಿ ವಿತರಿಸಬೇಕಾದ ಒಟ್ಟು 10,63,876 ಎನ್ಯೂಮರೇಶನ್ ಫಾರ್ಮ್‌ಗಳಲ್ಲಿ 5,90,349 ಫಾರ್ಮ್‌ಗಳನ್ನು ಮತದಾರರಿಗೆ ವಿತರಿಸಿ, ಶೇ.55.49ರಷ್ಟು ಪ್ರಗತಿಯನ್ನು ದಾಖಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 33620 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಜಿಲ್ಲೆಯಲ್ಲಿ 195 ಮಂದಿ ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಗೊತ್ತಾಗಿದೆ. ಅದೇ ರೀತಿ 92 ಮಂದಿ ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಜಿಲ್ಲೆಯಲ್ಲಿ ಈಗಾಗಲೇ 34 ಮಂದಿ ಮತದಾರರು ತಮ್ಮ ದಾಖಲಾತಿಯನ್ನು ಮಾಡಿದ್ದಾರೆ. ಗಣತಿಗೆ ಸಿಗದವರು ಐವರು ಇದ್ದು, ವಲಸೆ ಮತದಾರರು ಐವರು ಕಂಡುಬಂದಿದ್ದಾರೆ ಎಂದು ಮಾಹಿತಿ ತಿಳಿಸಿದೆ.

ಜಿಲ್ಲೆಯಲ್ಲಿ ಜು.6ರವರೆಗೆ ನಡೆದ ಎಸ್‌ಐಆರ್ ಪ್ರಕ್ರಿಯೆ ಸಾಧನೆ ಹೀಗಿದೆ:

ವಿಧಾನಸಭಾಕ್ಷೇತ್ರ - ಒಟ್ಟು ಮತದಾರರು - ವಿತರಿಸಿದ ನಮೂನೆ

118.ಬೈಂದೂರು - 2,41,863 - 1,26,733

119.ಕುಂದಾಪುರ - 2,12,473 - 1,26,653

120.ಉಡುಪಿ - 2,21,680 - 1,11,477

121.ಕಾಪು - 1,94,718 - 1,08,949

122.ಕಾರ್ಕಳ - 1,93,142 - 1,16,537

ಒಟ್ಟು - 10,63,876 - 5,90,349

ಅಧಿಕಾರಿಗಳಿಗೆ ಸಭೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಇಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ(ಎಸ್‌ಐಆರ್-2026) ಕಾರ್ಯದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಹೊಸದಾಗಿ ನಿಯುಕ್ತಿಗೊಂಡಿರುವ ಸೆಕ್ಟರ್ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರು (ಬಿಎಲ್‌ಓ ಸುಪರ್‌ವೈಸರ್) ಭಾಗವಹಿಸಿದ್ದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲಿಲ ವಲಯ ಅಧಿಕಾರಿಗಳ ಜವಾಬ್ದಾರಿಗಳ ಕುರಿತು ಸಮಗ್ರ ತರಬೇತಿ ನೀಡಿದರು.

ಬಿಎಲ್‌ಒ ಸೂಪರ್‌ವೈಸರ್‌ಗಳೊಂದಿಗೆ ನೇರ ಸಂವಾದ ನಡೆಸಿ ಫೀಲ್ಡ್ ಮಟ್ಟದಲ್ಲಿ ಅವರು ಎದುರಿಸುತ್ತಿರುವ ತಾಂತ್ರಿಕ ತೊಂದರೆಗಳು, ಮನೆ ಭೇಟಿಯ ಸವಾಲುಗಳು ಹಾಗೂ ದತ್ತಾಂಶ ನಮೂದನೆಯಲ್ಲಿ ಉಂಟಾಗುವ ಅಡಚಣೆಗಳ ಕುರಿತಂತೆ ಚರ್ಚಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾಪು ವಿಧಾನಸಭಾ ಕ್ಷೇತ್ರದಲ್ಲೂ ಚುನಾವಣಾ ನೊಂದಣಿ ಅಧಿಕಾರಿ (ಇಆರ್‌ಒ) ಅಧ್ಯಕ್ಷತೆಯಲ್ಲಿ ಸೆಕ್ಟರ್ ಅಧಿಕಾರಿಗಳಿಗೆ ವಿಶೇಷ ತರಬೇತಿಯನ್ನು ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X