Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜು. 9ರಂದು ಕಾರ್ಕಳದಲ್ಲಿ ವಿಕಾಸ ಸೇವಾ...

ಜು. 9ರಂದು ಕಾರ್ಕಳದಲ್ಲಿ ವಿಕಾಸ ಸೇವಾ ಸಂಸ್ಥೆಯಿಂದ ಬೃಹತ್ ಉದ್ಯೋಗ ಸಂದರ್ಶನ

ವಾರ್ತಾಭಾರತಿವಾರ್ತಾಭಾರತಿ30 Jun 2026 1:46 PM IST
share
ಜು. 9ರಂದು ಕಾರ್ಕಳದಲ್ಲಿ ವಿಕಾಸ ಸೇವಾ ಸಂಸ್ಥೆಯಿಂದ ಬೃಹತ್ ಉದ್ಯೋಗ ಸಂದರ್ಶನ

ಕಾರ್ಕಳ: ಕಾರ್ಕಳ-ಹೆಬ್ರಿ ತಾಲೂಕು ಸೇರಿದಂತೆ ಜಿಲ್ಲೆಯ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಜು. 9ರ ಗುರುವಾರ ಶಾಸಕರ ಜನಸೇವಾ ಕಚೇರಿ ವಿಕಾಸ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಸಂದರ್ಶನ ನಡೆಯಲಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದರು.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು, ಉಡುಪಿ ಮತ್ತು ಬೆಂಗಳೂರಿನ ಆಯ್ದ 20 ಕಂಪನಿಗಳು ಭಾಗಿಯಾಗಲಿವೆ. ಮೊದಲು ಬಂದ 1000 ಅರ್ಜಿಗಳಿಗೆ ಆದ್ಯತೆ ನೀಡಲಾಗುವುದು. ಸುಮಾರು 300ರಿಂದ 400 ಮಂದಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ. ವಿಶೇಷವಾಗಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಐಟಿಐ ಮತ್ತು ಪಾಲಿಟೆಕ್ನಿಕ್ ಮುಗಿಸಿದ ಉದ್ಯೋಗಾಂಕ್ಷಿಗಳು ಇದರಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿಕೊಂಡರು.

ವಿಕಾಸ ಸಂಸ್ಥೆಯು ಕಳೆದ 6 ವರ್ಷಗಳಿಂದ ಉದ್ಯೋಗ ಮೇಳ ಸೇರಿದಂತೆ ಹಲವಾರು ಸಾಮಾಜಿಕ ಸೇವೆ ಮಾಡಿಕೊಂಡು ಬಂದಿದೆ. ಇದೀಗ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಸಂದರ್ಶನ ಆಯೋಜಿಸಿದ್ದು, ಹೆಚ್ಚಿನ ಯುವಕ-ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಆನ್‌ಲೈನ್ ಅರ್ಜಿ

ಆಕಾಂಕ್ಷಿಗಳು ಆನ್‌ಲೈನ್ ಮೂಲಕ (ಲಿಂಕ್ - https://docs.google.com/forms/d/e/1FAIpQLScv3gxgsEdwRAnRAC4Ka2hTbGJE5jaHh0hfl6RgP57fP2czw/viewform?usp=publish-editor) ಅರ್ಜಿ ಸಲ್ಲಿಸಬಹುದು. ಬಳಿಕ ಜು. 9ರಂದು ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗಿಯಾಗಬೇಕು ಎಂದರು.

ವಸತಿ ವ್ಯವಸ್ಥೆ

ಉದ್ಯೋಗ ಸೇತುವಿನಲ್ಲಿ ಬೆಂಗಳೂರಿನ ಎಂಎನ್‌ಸಿ ಕಂಪನಿಗಳಿಗೆ ಆಯ್ಕೆಯಾದ ಯುವತಿಯರಿಗೆ ಉಚಿತವಾಗಿ ವಸತಿ ಸೌಲಭ್ಯ ದೊರೆಯಲಿದೆ. ಈ ಬಗ್ಗೆ ಈಗಾಗಲೇ ಕಂಪನಿಯೊಂದಿಗೆ ಮಾತನಾಡಿದ್ದೇವೆ ಎಂದು ಶಾಸಕರು ಹೇಳಿದರು. ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಳೆದ ಐದು ವರ್ಷಗಳ ಹಿಂದೆಯೂ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಸುಮಾರು 3000 ಅರ್ಜಿಗಳು ಬಂದಿದ್ದು, 100ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು. 500ಕ್ಕೂ ಅಧಿಕ ಮಂದಿಗೆ ಅಂದು ಉದ್ಯೋಗ ದೊರಕಿತ್ತು. ಇದಲ್ಲದೆ, ಆ ಬಳಿಕವೂ ಯಾರೇ ನಮ್ಮ ಕಚೇರಿಗೆ ಉದ್ಯೋಗ ಅರಸಿ ಬಂದರೂ ವಿವಿಧ ಕಂಪನಿಗಳೊಂದಿಗೆ ಮಾತನಾಡಿ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡುತ್ತಿದ್ದೇವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕಾರ್ಕಳದಲ್ಲಿ ಕೆಜೆಟಿಟಿ, ಪಾಲಿಟೆಕ್ನಿಕ್, ಐಟಿಐ, ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಥೆಗಳಲ್ಲಿ ಉದ್ಯೋಗ ದೊರೆತಿದೆ ಎಂದು ಮಾಹಿತಿ ನೀಡಿದರು.

ಜು. 5ರಿಂದ ವಿಕಾಸ ಪರೀಕ್ಷಾ ಸೇತು

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕಟಗೊಂಡಿದ್ದು, ಇದರಲ್ಲಿ ನಮ್ಮ ಭಾಗದ ಹೆಚ್ಚಿನ ಯುವಕರು ಆಯ್ಕೆಯಾಗಬೇಕೆಂಬ ನಿಟ್ಟಿನಲ್ಲಿ ವಿಕಾಸ ಕಚೇರಿಯ ಮೂಲಕ ಬೆಂಗಳೂರಿನ ಅರ್ಚೀವರ್ಸ್ ಟ್ರಸ್ಟ್ ಸಹಯೋಗದೊಂದಿಗೆ 'ವಿಕಾಸ ಪರೀಕ್ಷಾ ಸೇತು' ಎಂಬ ಹೆಸರಿನಲ್ಲಿ ಜು. 5ರಿಂದ 30ರವರೆಗೆ 25 ದಿನಗಳ ಕಾಲ ಉಚಿತವಾಗಿ ಆನ್‌ಲೈನ್‌ನಲ್ಲಿ ತರಬೇತಿ ನೀಡಲಾಗುವುದು. ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ 2 ಗಂಟೆಯಂತೆ ಕೋಚಿಂಗ್ ನಡೆಯಲಿದೆ. ಇದಲ್ಲದೆ ಮುಂದೆಯೂ ಸರ್ಕಾರಿ ಉದ್ಯೋಗಕ್ಕೆ ಸಂಬಂಧಿಸಿದಂತೆ ವಿಕಾಸ ಪರೀಕ್ಷಾ ಸೇತು ಮೂಲಕ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುಬ್ರಮಣ್ಯ ಭಟ್ ರೆಂಜಾಳ, ಸುಶಾಂತ್ ಬಜಗೋಳಿ, ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ನಿತಿನ್ ಸಾಲ್ಯಾನ್, ನಗರ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ಯ, ನಂದಳಿಕೆ ಗ್ರಾಮ ಯುವಮೋರ್ಚಾ ಅಧ್ಯಕ್ಷ ಧೀರಜ್ ಎಸ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X