Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 9 ಮನೆ, 4 ಕೊಟ್ಟಿಗೆ, ತೋಟಗಾರಿಕಾ...

ಉಡುಪಿ: 9 ಮನೆ, 4 ಕೊಟ್ಟಿಗೆ, ತೋಟಗಾರಿಕಾ ಬೆಳೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ29 July 2025 8:02 PM IST
share
ಉಡುಪಿ: 9 ಮನೆ, 4 ಕೊಟ್ಟಿಗೆ, ತೋಟಗಾರಿಕಾ ಬೆಳೆಗಳಿಗೆ ಹಾನಿ

ಉಡುಪಿ, ಜು.29: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿ ರುವ ಮಳೆಯ ಬಿರುಸು ಇನ್ನಷ್ಟು ತಗ್ಗಿದೆ. ಆದರೆ ಜಿಲ್ಲೆಯಲ್ಲಿ ಇಂದೂ 9 ಮನೆಗಳಿಗೆ ಹಾನಿ, ತೋಟಗಾರಿಕಾ ಬೆಳೆ ಹಾನಿಯ ನಾಲ್ಕು ಪ್ರಕರಣ ಹಾಗೂ ಜಾನುವಾರು ಕೊಟ್ಟಿಗೆ ಹಾನಿಯ ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಯಾಗಿ ಐದು ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮದ ಶೋಭಾ ಶೆಟ್ಟಿ ಎಂಬವರ ಮನೆಯ ದನ, ಗಾಳಿ-ಮಳೆಯಿಂದ ಮೃತಪಟ್ಟಿರುವುದಾಗಿ ಬೈಂದೂರು ತಹಶೀಲ್ದಾರರ ಕಚೇರಿಯ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

ರವಿವಾರ ಹಾಗೂ ಸೋಮವಾರ ಬೀಸಿದ ಗಾಳಿ-ಮಳೆಗೆ ಕುಂದಾಪುರ ತಾಲೂಕಿನಿಂದ ಅತ್ಯಧಿಕ ಹಾನಿಯ ಪ್ರಕರಣ ವರದಿಯಾಗಿದೆ. ಬಸ್ರೂರು ಗ್ರಾಮದ ವರ್ಷ ಶೆಟ್ಟಿ ಹಾಗೂ ಶರ್ಮಿಳಾ ಶೆಟ್ಟಿ ಇವರ ಮನೆಯ ತೋಟದ ಅಡಿಕೆ ಹಾಗೂ ಇತರ ಮರಗಳು ಉರುಳಿದ್ದು 50ಸಾವಿರಕ್ಕೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಅದೇ ರೀತಿ ಹೊಸಂಗಡಿ ಗ್ರಾಮದ ರಾಮ ಗೊಲ್ಲ ಹಾಗೂ ಆಲೂರು ಗ್ರಾಮದ ಸುಚಿತ್ರ ಆರ್. ದೇವಾಡಿಗ ಇವರ ತೋಟದ ಮರಗಳೂ ನೆಲಕ್ಕುರುಳಿವೆ. ಇದರಿಂದ ಅಪಾರ ಹಾನಿ ಸಂಭವಿಸಿದ್ದು, 50ಸಾವಿರಕ್ಕೂ ಅಧಿಕ ನಷ್ಟವಾಗಿರುವುದಾಗಿ ಸಂಬಂಧಿತ ವಿಎ ವರದಿ ನೀಡಿದ್ದಾರೆ.

ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಗ್ರಾಮದ ಪರಶುರಾಮ, ಕುಳಂಜೆ ಗ್ರಾಮದ ಕೃಷ್ಣ ನಾಯ್ಕ, ಬೈಂದೂರು ತಾಲೂಕು ಮರವಂತೆಯ ಪದ್ದು ಹಾಗೂ ಪಡುವರಿ ಗ್ರಾಮದ ಸರ್ವೇಶ್ರಿ ಪೂಜಾರಿ ಇವರ ಮನೆಯ ದನದ ಕೊಟ್ಟಿಗೆಗೆ ಹಾನಿಯಾಗಿದ್ದು,40 ಸಾವಿರದಷ್ಟು ನಷ್ಟವಾಗಿರುವುದಾಗಿ ಗೊತ್ತಾಗಿದೆ.

ದಿನದಲ್ಲಿ ವರದಿಯಾದ 9 ಮನೆ ಹಾನಿ ಪ್ರಕರಣಗಳಲ್ಲಿ ಐದು ಕುಂದಾಪುರ ತಾಲೂಕಿನ ವಿವಿದೆಡೆಗಳಿಂದ ಬಂದಿದ್ದರೆ, ಬೈಂದೂರು ಮತ್ತು ಕಾಪು ತಾಲೂಕಿನಿಂದ ತಲಾ ಎರಡು ಪ್ರಕರಣಗಳು ವರದಿಯಾಗಿವೆ.

ಕುಂದಾಪುರ ತಾಲೂಕು ಸಿದ್ಧಾಪುರದ ರವೀಂದ್ರನಾಥ ಉಡುಪರ ಮನೆಗೆ 60ಸಾವಿರ, ಹಟ್ಟಿಯಂಗಡಿ ಗ್ರಾಮದ ಚಂದ್ರಯ್ಯ ಆಚಾರಿ ಮನೆಗೆ 20ಸಾವಿರ, ವಡೇರಹೋಬಳಿಯ ಮ್ಯಾಕ್ಸಿಮ್ ಡಿಸೋಜರ ಮನೆಗೆ 70 ಸಾವಿರ ಹಾಗೂ ಕೊಡ್ಲಾಡಿಯ ಬಸವ ಹರಿಜನ ಮನೆಗೆ 20ಸಾವಿರ ರೂ. ನಷ್ಟವಾಗಿದೆ.

ಕಾಪು ತಾಲೂಕು ಹೆಜಮಾಡಿ ಗ್ರಾಮದ ರಮ್ಯಾ ಮನೆಗೆ 15 ಸಾವಿರ, ಕೋಟೆ ಗ್ರಾಮದ ಜಯಂತಿ ಪೂಜಾರ್ತಿ ಎಂಬವರ ಮನೆಗೆ 20ಸಾವಿರ, ಬೈಂದೂರು ತಾಲೂಕು ಮರವಂತೆ ಗ್ರಾಮದ ಗುಂಡು ಮನೆಗೆ ಒಂದು ಲಕ್ಷ ರೂ. ಹಾಗೂ ನಾವುಂದ ಗ್ರಾಮದ ಸಂಜೀವ ಗಾಣಿಗರ ಮನೆಗೆ 45ಸಾವಿರ ನಷ್ಟ ಸಂಭವಿಸಿದೆ.

ಹವಾಮಾನ ಮುನ್ಸೂಚನೆಯಂತೆ ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆಗಾಗ ಗಾಳಿ ಬೀಸುವ ಸಾಧ್ಯತೆಯೂ ಇರುತ್ತದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X