Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಾರಾಡಿ: ಯಕ್ಷಗಾನ ಕಲಾರಂಗದ 99ನೆಯ ಮನೆ...

ಹಾರಾಡಿ: ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ25 Jun 2026 7:17 PM IST
share
ಹಾರಾಡಿ: ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ

ಉಡುಪಿ, ಜೂ.25: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರ್ಷಿತ್ ಈತನ ಬಡ ಕುಟುಂಬಕ್ಕೆ ಬ್ರಹ್ಮಾವರ ತಾಲೂಕಿನ ಹಾರಾಡಿಯ ಮೂಡು ಕುಕ್ಕುಡೆಯಲ್ಲಿ, ಮನೆಯ ಪ್ರಾಯೋಜಕ ರಾದ ಬಿ. ನರಹರಿ ಹಾಗೂ ಸಹೋದರರು ತಮ್ಮ ತಾಯಿಯ ಶತಾಬ್ದಿ ಸಂದರ್ಭದಲ್ಲಿ 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಯಶೋದಾಕೃಷ್ಣ’ವನ್ನು ಮಂಗಳವಾರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಬೈಕಾಡಿಯ ಸುಂದರ ಪೂಜಾರಿ ಮತ್ತು ದೇವಕಿ ಇವರ ಪುತ್ರ ಹರ್ಷಿತ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಈತನ ಕುಟುಂಬಕ್ಕೆ ದಾನಿಗಳಾದ ಬಿ.ನರಹರಿ ಮತ್ತು ಸಹೋದರರು ತಮ್ಮ ತಂದೆ- ತಾಯಿ ಯರಾದ ಬೈಕಾಡಿ ಕೃಷ್ಣಯ್ಯ ಹಾಗೂ ಯಶೋದಾ ದೇವಿ ಇವರ ನೆನಪಿನಲ್ಲಿ ಈ ಮನೆಯನ್ನು ನಿರ್ಮಿಸಿಕೊಟ್ಟಿದ್ದರು.

ಮನೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಮಣಿಪಾಲ ಟೆಕ್ನಾಲಜೀಸ್ ಲಿ.ನ ಕಾರ್ಯ ನಿರ್ವಾಹಕ ಅಧ್ಯಕ್ಷ ಗೌತಮ್ ಪೈ ಮಾತನಾಡಿ, ಯಕ್ಷಗಾನ ಕಲಾರಂಗ ಮಾಡುತ್ತಿರುವ ಯಕ್ಷಗಾನ ಕಲೆ-ಕಲಾವಿದರ ಕ್ಷೇಮ ಚಿಂತನೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸಮಾಜಪರ ಕಾಳಜಿಯ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಹರ್ಷಿತನಿಗೆ ಚೆನ್ನಾಗಿ ಕಲಿತು ಬೇರೆಯವರಿಗೆ ಉದ್ಯೋಗ ನೀಡುವಷ್ಟು ಎತ್ತರಕ್ಕೆ ಬೆಳೆಯಬೇಕೆಂದು ಶುಭ ಹಾರೈಸಿದರು.

ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ಹರಿನಾರಾಯಣದಾಸ ಆಸ್ರಣ್ಣರು ಮಾತನಾಡಿ ಮನುಷ್ಯನಿಗೆ ಮನೆ ಕೇವಲ ಆಶ್ರಯ ತಾಣವಷ್ಟೇ ಅಲ್ಲ, ಅವನ ಎಲ್ಲಾ ಇಷ್ಟಾರ್ಥಗಳ ಈಡೇರಿಕೆಗೆ ಅದು ಅತ್ಯಂತ ಮುಖ್ಯ ಎಂಬುದನ್ನು ವಿವರಿಸಿ, ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ಕಲಾರಂಗದ ಕೊಡುಗೆ ಅನನ್ಯ ಎಂದು ಹೇಳಿದರು.

ಮಣಿಪಾಲ ಟೆಕ್ನಾಲಜೀಸ್‌ನ ಸೀನಿಯರ್ ಜನರಲ್ ಮ್ಯಾನೇಜರ್ ಆಗಿರುವ ಮನೆಯ ಪ್ರಾಯೋಜಕ ಬಿ.ನರಹರಿ ಅವರು ಯಕ್ಷಗಾನ ಕಲಾರಂಗ ಬಡ ವಿದ್ಯಾರ್ಥಿಗೆ ತಮ್ಮ ಮಾತಾಪಿತರ ನೆನಪಿನಲ್ಲಿ ಮನೆ ನಿರ್ಮಿಸಿ ಕೊಡುವ ಅವಕಾಶ ಕಲ್ಪಿಸಿಕೊಟ್ಟಿರುವುದಕ್ಕೆ ಧನ್ಯವಾದ ತಿಳಿಸಿದರು.

ಮಣಿಪಾಲ ಮೀಡಿಯ ಲಿ.ನ ನಿವೃತ್ತ ಅಧಿಕಾರಿ ನಾರಾಯಣ ಬಿ.ಕೆ., ಮಣಿಪಾಲ್ ಟೆಕ್ನಾಲಾಜಿಸ್‌ನ ಸಿಇಓ ಅಭಯ್ ಗುಪ್ತೆ, ಗ್ರೂಪ್ ಸಿಎಚ್‌ಆರ್‌ಒ ಪ್ರಮೋದ್ ಫೆರ್ನಾಂಡಿಸ್, ಜ್ಯೋತಿ ನರಹರಿ, ಲೋಲಾಕ್ಷಿ ರತ್ನಾಕರ, ಭಾರತಿ ನಾರಾಯಣ, ಉಪೇಂದ್ರ ಸೋಮಯಾಜಿ, ಮನೋಜ ಬೈಕಾಡಿ, ಡಾ. ಅನನ್ಯಾ ಬೈಕಾಡಿ, ಶ್ರೀಪತಿ ಆಚಾರ್ಯ, ಡಾ.ವಿರೂಪಾಕ್ಷ ದೇವರಮನೆ, ಪ್ರಸನ್ನ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಎಸ್.ವಿ.ಭಟ್, ಕೋಶಾಧಿಕಾರಿ ಕೆ. ಸದಾಶಿವ ರಾವ್, ಜತೆ ಕಾರ್ಯದರ್ಶಿ ವಿದ್ಯಾಪ್ರಸಾದ್, ಸದಸ್ಯರಾದ ಯು.ವಿಶ್ವನಾಥ ಶೆಣೈ, ಯು.ಎಸ್.ರಾಜಗೋಪಾಲ ಆಚಾರ್ಯ, ಭುವನಪ್ರಸಾದ ಹೆಗ್ಡೆ, ಯು.ಅನಂತ ರಾಜ ಉಪಾಧ್ಯ, ಹಿರಿಯಣ್ಣ ಕಿದಿಯೂರ್, ಡಾ.ರಾಜೇಶ ನಾವುಡ, ಎಚ್.ಎನ್.ವೆಂಕಟೇಶ್, ನಟರಾಜ ಉಪಾಧ್ಯ, ಕಿಶೋರ್ ಸಿ. ಉದ್ಯಾವರ, ಗಣೇಶ ಬ್ರಹ್ಮಾವರ, ಸುಜಯೀಂದ್ರ ಹಂದೆ, ಅಜಿತ್ ಕುರ್ಮಾ, ಪ್ರಭಾಕರಭಂಡಿ, ನಾಗರಾಜ ಹೆಗಡೆ,ಜಯರಾಮ ಪಡಿಯಾರ್, ರಘುರಾಮ್ ಬೈಕಾಡಿ ಭಾಗವಹಿಸಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X