1-19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆ ವಿತರಣೆ: ಡಿಹೆಚ್ಓ ಡಾ.ಐ.ಪಿ.ಗಡಾದ್

ಸಾಂದರ್ಭಿಕ ಚಿತ್ರ
ಉಡುಪಿ, ಫೆ.22: ಜಂತುಹುಳುಗಳಿಂದ ಮಕ್ಕಳ ದೇಹದಲ್ಲಿ ರಕ್ತಹೀನತೆ ಹಾಗೂ ಅಪೌಷ್ಠಿಕತೆ ಉಂಟಾಗಿ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ. ಇದರ ನಿವಾರಣೆಗೆ 1ರಿಂದ 19ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್ ತಿಳಿಸಿದ್ದಾರೆ.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕುರಿತು ವರ್ಚುವಲ್ ಮೂಲಕ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಸಾಮಾನ್ಯವಾಗಿ ಜಂತುಹುಳುವು 1-19ವರ್ಷ ವಯೋಮಾನದ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಹೊಟ್ಟೆ ನೋವು, ಬೇಧಿ, ಹಸಿವಿಲ್ಲದಿ ರುವುದು ಹಾಗೂ ಸುಸ್ತು ಮುಂತಾದ ಲಕ್ಷಣಗಳು ಕಂಡುಬರುತ್ತವೆ. ಅಲ್ಲದೇ ಜೊತೆಗೆ ರಕ್ತಹೀನತೆ, ಪೌಷ್ಟಿಕ ಆಹಾರದ ಕೊರತೆ ಉಂಟಾಗಿ ದೈಹಿಕ ಹಾಗೂ ಭೌತಿಕ ಬೆಳವಣಿಗೆಯಲ್ಲಿ ತೊಂದರೆ ಕಾಣಿಸಿಕೊ ಳ್ಳುತ್ತದೆ. ಜಂತುಹುಳು ನಿವಾರಣೆಗೆ ಅಲ್ಬೆಂಡಜೋಲ್ ಮಾತ್ರೆಗಳನ್ನು ವಿತರಿಸಲಾಗುತ್ತದೆ ಎಂದರು.
ಜಂತುಹುಳುಗಳು ನೈರ್ಮಲ್ಯ ಹಾಗೂ ವೈಯಕ್ತಿಕ ಶುಚಿತ್ವದ ಕೊರತೆ ಯಿಂದ,ಜಂತುಹುಳು ಸೋಂಕಿನ ಮಣ್ಣನ್ನು ಸ್ಪರ್ಶಿಸು ವುದರಿಂದ ಜಂತುಹುಳು ಬಾಧೆ ಹರಡುತ್ತದೆ. ಇದರಿಂದ ದೂರವಿರಲು ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿ, ಸ್ವಚ್ಛವಾಗಿ ಡುವುದು, ತಿಂಡಿ-ತಿನಿಸುಗಳನ್ನು ತಿನ್ನುವ ಮೊದಲು, ಶೌಚಾಲಯಗಳನ್ನು ಬಳಸಿದ ನಂತರ ಸಾಬೂನಿನಿಂದ ಕೈಗಳನ್ನು ತೊಳೆಯುವುದು, ಶುದ್ಧೀಕರಿಸಿದ ನೀರನ್ನು ಸೇವಿಸುವುದು, ಹಣ್ಣು-ಹಂಪಲು ತರಕಾರಿಗಳನ್ನುಚೆನ್ನಾಗಿ ತೊಳೆದು ಬಳಸು ವುದು ಹಾಗೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಂಡಲ್ಲಿ ಜಂತುಹುಳಗಳಿಂದ ದೂರವಿರಲು ಸಾಧ್ಯ ಎಂದರು.
ಜಿಲ್ಲೆಯ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ಉಚಿತವಾಗಿ ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳು, ಅಂಗನವಾಡಿ, ವಸತಿ ಶಾಲೆ ಗಳು, ಐಟಿಐ, ನರ್ಸಿಂಗ್, ಪದವಿ ಹಾಗೂ ವೃತ್ತಿಶಿಕ್ಷಣ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿಯೇ ನೀಡಲಾಗುತ್ತದೆ. ಅಂಗನವಾಡಿ ಮಕ್ಕಳಿಗೆ ಹಾಗೂ ಶಾಲೆಯಿಂದ ಹೊರಗುಳಿದ 19 ವರ್ಷ ದೊಳಗಿನ ಮಕ್ಕಳಿಗೆ ಅಂಗನವಾಡಿಯಲ್ಲಿ ಮಾತ್ರೆಯನ್ನು ವಿತರಿಸಲಾಗುವುದು ಎಂದರು.
ಪ್ರತಿಶತಃ ನೂರರಷ್ಟು ಮಕ್ಕಳಿಗೆ ಮಾತ್ರೆ ವಿತರಣೆಗೆ ಶಿಕ್ಷಣ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಜೋಶ್ನಾ ಬಿ.ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವಿವಿಧ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.







