Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 10 ವರ್ಷಗಳಲ್ಲಿ ಹೆಚ್ಚಳವಾದ ಜನರ...

10 ವರ್ಷಗಳಲ್ಲಿ ಹೆಚ್ಚಳವಾದ ಜನರ ಸೇರ್ಪಡೆಗೆ ಮರು ಜಾತಿಗಣತಿ: ಗೃಹ ಸಚಿವರಿಂದ ಸಮಜಾಯಿಷಿ

ವಾರ್ತಾಭಾರತಿವಾರ್ತಾಭಾರತಿ14 Jun 2025 8:13 PM IST
share
10 ವರ್ಷಗಳಲ್ಲಿ ಹೆಚ್ಚಳವಾದ ಜನರ ಸೇರ್ಪಡೆಗೆ ಮರು ಜಾತಿಗಣತಿ: ಗೃಹ ಸಚಿವರಿಂದ ಸಮಜಾಯಿಷಿ

ಉಡುಪಿ: ಮುಖ್ಯಮಂತ್ರಿಗಳು ಹಾಗೂ ಸಂಪುಟದ ತೀರ್ಮಾನ ದಂತೆ ರಾಜ್ಯದಲ್ಲಿ ಜನಗಣತಿ ಹಾಗೂ ಜಾತಿಗಣತಿಯ ಸರ್ವೆಯನ್ನು ಮತ್ತೆ ನಡೆಸಲು ನಿರ್ಧರಿಸಿದ್ದೇವೆ. ಅದಕ್ಕೆ ಸೂಕ್ತ ಕಾರಣಗಳನ್ನು ಸಹ ಮುಖ್ಯಮಂತ್ರಿಗಳು ಈಗಾಗಲೇ ತಿಳಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಗೊಳಗಾಗಿದ್ದ ಎಚ್.ಕಾಂತರಾಜು ಹಾಗೂ ಕೆ.ಜಯಪ್ರಕಾಶ್ ಹೆಗ್ಡೆ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ’ (ಜಾತಿಗಣತಿ) ವರದಿಯ ಮರು ಸರ್ವೇ ನಡೆಸಲು ಕೈಗೊಂಡ ನಿರ್ಧಾರಕ್ಕೆ ಸಂಬಂದಿಸಿದಂತೆ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸುತಿದ್ದರು.

ಮೊದಲನೇಯದು ಅನೇಕ ಜನಸಮುದಾಯ, ಸಂಘ ಸಂಸ್ಥೆಗಳು ಜಾತಿ ಜನಗಣತಿಯಲ್ಲಿ ತಮ್ಮ ಸಮು ದಾಯದ ಅಂಕಿ ಅಂಶ ಸರಿಯಿಲ್ಲ. ನಮ್ಮ ಸಮುದಾಯದ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಅಂಶವೆಂದರೆ ಜಾತಿ, ಜನಗಣತಿಯನ್ನು ಹತ್ತು ವರ್ಷಗಳ ಹಿಂದೆ (2015-16ರಲ್ಲಿ) ಮಾಡ ಲಾಗಿದೆ. ಇದರಲ್ಲಿ ಹಳೆಯ ಡೇಟಾ ಇದೆ. ಹತ್ತು ವರ್ಷಗಳ ಹಿಂದಿನ ಅಂಕಿಅಂಶಗಳನ್ನು ಸಂಗ್ರಹಿಸಲಾಗಿದೆ ಎಂದು ಬಹಳಷ್ಟು ಮಂದಿ ಆಕ್ಷೇಪ ಎತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಒಂದೂವರೆ ಕೋಟಿ ಜನಸಂಖ್ಯೆ ಸೇರ್ಪಡೆ ಆಗಿರೋದನ್ನು ಗಣನೆಗೆ ತೆಗೆದುಕೊಳ್ಳಲು ಸಲಹೆ ಬಂದಿತ್ತು. ಜನರ ಅಭಿಪ್ರಾಯವನ್ನು ಪರಿಗ ಣಿಸಿ ಮರು ಜಾತಿ ಜನ ಗಣತಿಗೆ ಸರ್ಕಾರ ತೀರ್ಮಾನ ಮಾಡಿದೆ ಎಂದು ಡಾ.ಪರಮೇಶ್ವರ್ ಮರು ಸಮೀಕ್ಷೆಯನ್ನು ಸಮರ್ಥಿಸಿಕೊಂಡರು.

ಜನರ ಸಲಹೆಯಂತೆಯೊ ಅಥವಾ ಹೈಕಮಾಂಡನ್‌ನ ಸಲಹೆಯಂತೆ ಮರು ಸರ್ವೆ ನಡೆಯುತ್ತಿದೆಯೇ ಎಂದು ಮರು ಪ್ರಶ್ನಿಸಿದಾಗ, ಅದೂ ಇದೆ. ಆದರೆ ಜನರ ಭಾವನೆ ಅರಿತೇ ಹೈಕಮಾಂಡ್ ಮರು ಜಾತಿ ಜನಗಣತಿಗೆ ಸೂಚನೆ ನೀಡಿದೆ ಎಂದರು.

ಇದರಿಂದ ಕಾಂತರಾಜು ಹಾಗೂ ಜಯಪ್ರಕಾಶ್ ಹೆಗ್ಡೆಯವರು ವೈಜ್ಞಾನಿಕ ವಾಗಿ ಮಾಡಿರುವ ಜಾತಿ ಜನಗಣತಿ ಮೂಲೆಗುಂಪು ಆಗುವುದಿಲ್ಲವೇ ಎಂದು ಪ್ರಶ್ನಿಸಿದಾಗ, ಇಲ್ಲ ಅದು ಮೂಲೆಗುಂಪಾಗುವುದಿಲ್ಲ ಎಂದ ಸಚಿವರು, ಅದನ್ನೇ ನಾವು ಮುಂದುವರಿಸುತ್ತೇವೆ. 10 ವರ್ಷಗಳಲ್ಲಿ ಒಂದೂವರೆ ಕೋಟಿ ಜನ ಸೇರ್ಪಡೆಗೊಂಡಿದ್ದಾರಲ್ಲ. ಅವರನ್ನು ಸೇರಿಸಿ ಸರ್ವೆ ಮಾಡುತ್ತೇವೆ ಎಂದರು.

ಹಿಂದಿನ ವರದಿ ಅತ್ಯಂತ ವೈಜ್ಞಾನಿಕವಾಗಿಯೇ ನಡೆದಿದೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆ ಅಡಿಪಾ ಯದ ಮೇಲೆ ಮರು ಜಾತಿ ಜನಗಣತಿ ನಡೆಯಲಿದೆ. ಅದಕ್ಕೆ ಒಂದೂವರೆ ಕೋಟಿ ಜನರ ಸೇರ್ಪಡೆಯಾ ಗಲಿದೆ ಎಂದವರು ವಿವರಿಸಿದರು.

ನೋಡಿ ನಾವು ಮಾಡಿರುವುದು ಕೇವಲ ಜಾತಿಗಣತಿಯಲ್ಲ. ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳನ್ನು ಸಮೀಕ್ಷೆ ಮಾಡಿದ್ದೇವೆ. ವರದಿಯಲ್ಲಿ ಇವುಗಳನ್ನೆಲ್ಲಾ ಪ್ರಸ್ತಾಪ ಮಾಡಲಾಗಿದೆ. ಕೆಲವರು ಭಾರತ ಸರಕಾರ ದೇಶದ ಜನಗಣತಿ ಮಾಡುತ್ತಿರುವುದರಿಂದ ಮತ್ತೆ ಜಾತಿ ಜನಗಣತಿ ಯಾಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಆದರೆ ಕೇಂದ್ರ ಸರ್ಕಾರ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದವರ ಸಮೀಕ್ಷೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಕೇವಲ ಜನಗಣತಿ ಮಾತ್ರ ಮಾಡುತ್ತಿದೆ. ರಾಜ್ಯ ಸರಕಾರ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯನ್ನೂ ಮಾಡುತ್ತೆ. ಸಾಮಾಜಿಕ, ಶೈಕ್ಷಣಿಕವಾಗಿ ಸ್ಥಿತಿಗತಿ ಅಧ್ಯ ಯನ ಹಾಗೂ ಜೊತೆ ಹೊಸ ಅಂಕಿಅಂಶಗಳನ್ನು ಸೇರಿಸಿ ವರದಿ ನೀಡಲು ಈಗಾಗಲೇ ಸೂಚಿಸಲಾಗಿದೆ ಎಂದು ಡಾ.ಪರಮೇಶ್ವರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X