Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜು.13: ಶೀರೂರು ಪರ್ಯಾಯದ ಕಟ್ಟಿಗೆ...

ಜು.13: ಶೀರೂರು ಪರ್ಯಾಯದ ಕಟ್ಟಿಗೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ11 July 2025 9:39 PM IST
share
ಜು.13: ಶೀರೂರು ಪರ್ಯಾಯದ ಕಟ್ಟಿಗೆ ಮುಹೂರ್ತ

ಉಡುಪಿ, ಜು.11: 2026ರ ಜ.18ರ ಮುಂಜಾನೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯಕ್ಕಾಗಿ ಪರ್ಯಾಯ ಪೀಠಾರೋಹಣ ಮಾಡಲಿರುವ ಶ್ರೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಮೂರನೇಯದಾದ ಕಟ್ಟಿಗೆ ಮುಹೂರ್ತ ಜು.13ರ ರವಿವಾರ ಮುಂಜಾನೆ 9:15ಕ್ಕೆ ನಡೆಯಲಿದೆ ಎಂದು ಮಠದ ದಿವಾಣರಾದ ಡಾ.ಉದಯ ಸರಳತ್ತಾಯ ತಿಳಿಸಿದ್ದಾರೆ.

ಶಾಸಕ ಯಶಪಾಲ್ ಸುವರ್ಣರ ಉಪಸ್ಥಿತಿಯಲ್ಲಿ ರಥಬೀದಿಯ ಶೀರೂರು ಮಠದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಪರ್ಯಾಯದ ಎರಡು ವರ್ಷಗಳ ಅವಧಿಯಲ್ಲಿ (2026-28) ಅನ್ನದಾನಕ್ಕಾಗಿ ಕಟ್ಟಿಗೆ ಸಂಗ್ರಹಿಸುವ ದಿಸೆಯಲ್ಲಿ ಕಟ್ಟಿಗೆ ಮುಹೂರ್ತ ನಡೆಯುವುದು ಸಂಪ್ರದಾಯವಾಗಿದೆ ಎಂದರು.

ಇದಕ್ಕಾಗಿ ಸುಮಾರು 25 ಲಾರಿಯಷ್ಟು ಕರಿಮರದ (ಕರ್ಮಾರು) ಕಟ್ಟಿಗೆಯನ್ನು ಸಂಗ್ರಹಿಸಿ ಅದನ್ನು ಮಧ್ವ ಸರೋವರದ ಈಶಾನ್ಯ ಮೂಲೆಯಲ್ಲಿ ಸುಮಾರು 50 ಅಡಿ ಎತ್ತರ ಹಾಗೂ 25 ಅಡಿ ಅಗಲದ ಕಲಾತ್ಮಕ ವಾದ ರಥದ ಮಾದರಿಯಲ್ಲಿ ಪೇರಿಸಿ ಇಡಲಾಗುತ್ತದೆ. ಡಿಸೆಂಬರ್ ವೇಳೆಗೆ ಇದನ್ನು ಸಿದ್ಧಪಡಿಸಿ ತುದಿ ಯಲ್ಲಿ ಶಿಖರ, ಪತಾಕೆಯನ್ನಿರಿಸಲಾಗುತ್ತದೆ ಎಂದು ಅವರು ವಿವರಿಸಿದರು.

ಕಟ್ಟಿಗೆ ಮುಹೂರ್ತದ ವಿಧಿವಿಧಾನಗಳು ಜು.13ರಂದು ರವಿವಾರ ಮುಂಜಾನೆ 7:30ಕ್ಕೆ ಪ್ರಾರಂಭ ಗೊಳ್ಳಲಿದ್ದು ಮಠದ ಪರಿಚಾರಕರು, ಭಕ್ತರು ಕಲ್ಸಂಕ ಸಮೀಪದ ಲಕ್ಷ್ಮೀತೋಟಕ್ಕೆ ತೆರಳಿ ಅಲ್ಲಿಂದ ಕಟ್ಟಿಗೆಯನ್ನು ಹೊತ್ತು ಮೆರವಣಿಗೆಯಲ್ಲಿ ತರಲಾಗುತ್ತದೆ. ಶ್ರೀಕೃಷ್ಣ, ಮುಖ್ಯಪ್ರಾಣ ಸೇರಿದಂತೆ ವಿವಿಧ ದೇವರಿಗೆ ನಮಿಸಿ, ವಾದಿರಾಜರು ಹಾಕಿಕೊಟ್ಟ ಸಂಪ್ರದಾಯದಂತೆ ಕಟ್ಟಿಗೆ ರಥದ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುತ್ತದೆ. ಇದಕೆಕ ಸುಮಾರು 20 ಲಕ್ಷ ರೂ. ವೆಚ್ಚವಾಗುತ್ತದೆ ಎಂದು ಡಾ.ಸರಳತ್ತಾಯ ಹೇಳಿದರು.

ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಈ ಬಾರಿಯ ಶೀರೂರು ಪರ್ಯಾಯವನ್ನು ಭಕ್ತರ ಪರ್ಯಾಯ ವಾಗಿಸಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದೇ ಮೊದಲ ಬಾರಿಗೆ ಉಡುಪಿ ನಗರಸಭೆ ಪರ್ಯಾಯ ಸಂದರ್ಭದಲ್ಲಿ 2026ರ ಜ.14ರಿಂದ 24ರವರೆಗೆ 10ದಿನಗಳ ಕಾಲ ಸುಮಾರು 50 ಲಕ್ಷ ರೂ.ವೆಚ್ಚದಲ್ಲಿ ಉಡುಪಿ ನಗರವನ್ನು ದೀಪಾಂಲಕಾರದಿಂದ ಸಜ್ಜುಗೊಳಿಸಲಿದೆ ಎಂದರು.

ಈ ಬಾರಿಯ ಪರ್ಯಾಯಕ್ಕಾಗಿ ಉಡುಪಿ ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದೆ. ಪರ್ಯಾಯ ಸ್ವಾಗತ ಸಮಿತಿ ಕಚೇರಿ ಜು.13ರಂದು ಉದ್ಘಾಟನೆಗೊಳ್ಳಲಿದೆ. ಈ ಬಾರಿಯ ಪುರಮೆರವಣಿಗೆ ಜ.9ರಂದು ಕಡಿಯಾಳಿಯಿಂದ ಪ್ರಾರಂಭಗೊಳ್ಳಲಿದೆ ಎಂದು ಯಶಪಾಲ್ ಸುವರ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶೀರೂರು ಮಠದ ಮೋಹನ್ ಭಟ್, ನಂದನ್ ಜೈನ್ ಹಾಗೂ ವಾಸುದೇವ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X