Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.18ರಂದು ಯಕ್ಷಗಾನ ಸಿನೆಮಾ...

ಎ.18ರಂದು ಯಕ್ಷಗಾನ ಸಿನೆಮಾ ‘ವೀರಚಂದ್ರಹಾಸ’ ಬಿಡುಗಡೆ: ರವಿ ಬಸ್ರೂರು

ವಾರ್ತಾಭಾರತಿವಾರ್ತಾಭಾರತಿ6 April 2025 8:57 PM IST
share
ಎ.18ರಂದು ಯಕ್ಷಗಾನ ಸಿನೆಮಾ ‘ವೀರಚಂದ್ರಹಾಸ’ ಬಿಡುಗಡೆ: ರವಿ ಬಸ್ರೂರು

ಕುಂದಾಪುರ, ಎ.6: ಯಕ್ಷಗಾನವನ್ನು ವಿಸ್ತಾರಗೊಳಿಸುವ ಉದ್ದೇಶದೊಂದಿಗೆ ಪರಿಶ್ರಮ ತಂಡದ ನೇತ್ರತ್ವದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ‘ವೀರ ಚಂದ್ರಹಾಸ’ ಸಿನಿಮಾವನ್ನು ಎ.18ರಂದು ಏಕ ಕಾಲದಲ್ಲಿ ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಿನಿಮಾದ ನಿರ್ದೇಶಕ, ಸಂಗೀತ ನಿರ್ದೇಶಕ ರವಿ ಬಸ್ರೂರು ತಿಳಿಸಿದ್ದಾರೆ.

ಕುಂಭಾಶಿಯ ಆನೆಗುಡ್ಡೆ ವಿನಾಯಕ ದೇವಸ್ಥಾನದ ವಠಾರದಲ್ಲಿ ರವಿವಾರ ‘ವೀರಚಂದ್ರಹಾಸ’ ಚಲನಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿ ಅವರು ಮಾತನಾಡುತಿದ್ದರು.

ಈ ಚಿತ್ರದಲ್ಲಿ ಬಹುತೇಕ ಪಾತ್ರಗಳನ್ನು ವೃತ್ತಿಪರ ಯಕ್ಷಗಾನ ಕಲಾವಿದರೇ ನಿರ್ವಹಿಸಿದ್ದಾರೆ. ಸುಮಾರು 400ರಿಂದ 500 ಪಾತ್ರಧಾರಿಗಳು ಸಿನಿಮಾದ ದೃಶ್ಯಾವಳಿಗಳಲ್ಲಿ ಅಭಿನಯಿಸಿದ್ದಾರೆ. ಪ್ರಸಿದ್ಧ ಭಾಗವತ ರಾದ ಪಟ್ಲ, ಜನ್ಸಾಲೆ, ಮೊಗೆಬೆಟ್ಟು, ಚಿನ್ಮಯಿ, ಬಿಲ್ಲಾಡಿ ಮುಂತಾದವರು ಹಿನ್ನೆಲೆ ಗಾಯನದಲ್ಲಿ ರಸದೌತಣ ನೀಡಿದ್ದಾರೆ. ವೇಷ ಕಟ್ಟುವವರು ಹಾಗೂ ಬಣ್ಣ ಹಚ್ಚುವವರು ಸೇರಿ ನೂರಾರು ಮಂದಿ ಕಲಾವಿದರು ಹಾಗೂ ತಂತ್ರಜ್ಞರನ್ನು ಬಳಸಿಕೊಳ್ಳಲಾಗಿದೆ ಎಂದರು.

ಯಕ್ಷಗಾನದ ಪಂಜು ಹಾಗೂ ದೊಂದಿಗಳನ್ನೆ ಬಳಸಿ ಪರಂಪರೆಯನ್ನು ಉಳಿಸಿಕೊಳ್ಳಲಾಗಿದೆ. 1600ರಿಂದ 1700ರಷ್ಟು ಟ್ರ್ಯಾಕ್ ಕೇವಲ ಚಂಡೆ- ಮದ್ದಳೆಗಳ ವಾದನದಲ್ಲಿಯೇ ಅದ್ಭುತವಾಗಿ ಕೇಳಿ ಬಂದಿದೆ. ಹಿರಿಯ ನಟ ಡಾ.ಶಿವರಾಜ್ ಕುಮಾರ್, ‘ಶಿವಪುಟ್ಠಸ್ವಾಮಿ’ ಎಂಬ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಕಲಾವಿದರಾದ ಚಂದನ್ ಶೆಟ್ಟಿ, ಗರುಡ ರಾಮ್, ಪುನೀತ್ ರುದ್ರನಾಗ್ ಹಾಗೂ ಪ್ರಣವ್ ಸೂರ್ಯ ಯಕ್ಷಗಾನ ವೇಷಭೂಷಣಗಳೊಂದಿಗೆ ಪಾತ್ರಧಾರಿಗಳಾಗಿ ಅಭಿನಯಿಸಿದ್ದಾರೆ ಎಂದು ಅವರು ಹೇಳಿದರು.

ಅಂದಾಜು 8-9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಕ್ಕೆ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. 2.35 ನಿಮಿಷಗಳ ಅವಧಿಯನ್ನು ಹೊಂದಿರುವ ಈ ಚಿತ್ರ, ರಾಜ್ಯದ 60 ಥಿಯೇಟರ್‌ಗಳಲ್ಲಿ ಬಿಡುಗಡೆ ಕುರಿತು ಮಾತುಕತೆ ನಡೆದಿದೆ. ಹೊಂಬಾಳೆ ಫಿಲ್ಮ್ ಸಂಸ್ಥೆಯವರು ಚಿತ್ರದ ಒಟ್ಟಾರೆ ನಿರ್ಮಾಣದಲ್ಲಿ ಸಹಕಾರ ನೀಡಿದ್ದಾರೆ. ಈಗಾಗಲೇ ಸಿನಿಮಾದ ತೆಲುಗು ಅವತರಣಿಕೆಯ ಬಗ್ಗೆ ಬೇಡಿಕೆ ಬಂದಿದ್ದು, ಬೇರೆ ಬೇರೆ ಭಾಷೆಗಳಲ್ಲಿಯೂ ಬೇಡಿಕೆ ಬರುವ ಕುರಿತು ನಿರೀಕ್ಷೆ ಇದೆ ಎಂದರು.

ಈ ಸಂದರ್ಭದಲ್ಲಿ ನಾಯಕ ನಟ ಶಿಥಿಲ್ ಕುಮಾರ ಶೆಟ್ಟಿ, ಅಯೋಜಕರಾದ ನಾಗರಾಜ್ ಶೆಟ್ಟಿ ನೈಕಂಬಳ್ಳಿ, ಕಲಾವಿದರಾದ ನವೀನ್ ಶೆಟ್ಟಿ ಐರ್ಬೈಲ್, ಪ್ರಸನ್ನ ಶೆಟ್ಟಿಗಾರ್, ಭಾಗವತ ಪ್ರಸಾದ್ ಕುಮಾರ ಮೊಗೆಬೆಟ್ಟು ಉಪಸ್ಥಿತರಿದ್ದರು.

‘ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೊಡುವಂತೆ ಕೇಳಲಾಗಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಈ ಸಿನಿಮಾ ನೋಡುವ ಅವಕಾಶ ಮಾಡಿಕೊಡುವಂತೆ ವಿನಂತಿಸಲಾಗಿದೆ. ಯಕ್ಷಗಾನ ತರಬೇತಿ ಕೇಂದ್ರ, ಅಧ್ಯಯನ ಕೇಂದ್ರ, ಪಠ್ಯ ಸೇರಿದಂತೆ ಯಕ್ಷಗಾನ ಕ್ಷೇತ್ರದ ಕಲಾವಿದರು ಹಾಗೂ ಕ್ಷೇತ್ರದ ಬೆಳೆವಣಿಗೆಗೆ ಪೂರಕವಾಗಿ ಬೇಡಿಕೆಯ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’

-ರವಿ ಬಸ್ರೂರು, ನಿರ್ದೇಶಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X