Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.24ರಂದು ಎಸ್‌ಡಿಎಂ ಆಯುರ್ವೇದ...

ಫೆ.24ರಂದು ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ21 Feb 2024 9:23 PM IST
share

ಉಡುಪಿ: ಆಯುರ್ವೇದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರತಿಷ್ಠಿತ ಸ್ಥಾನ ಹೊಂದಿರುವ ಕುತ್ಪಾಡಿಯ ಧರ್ಮಸ್ಥಳ ಮಂಜುನಾ ಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಶರೀರ ಕ್ರಿಯಾ ವಿಭಾಗದ ವತಿಯಿಂದ ಫೆ.24ರಂದು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ‘ಅಗ್ನಿ ಮಂಥನ-2024’ ನಡೆಯಲಿದೆ ಎಂದು ಶರೀರ ಕ್ರಿಯಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ರವಿ ಭಟ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.24ರ ಬೆಳಗ್ಗೆ 9:30ಕ್ಕೆ ಸಮ್ಮೇಳನ ಕಾಲೇಜಿನ ಶ್ರೀಧರ್ಮಸ್ಥಳ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮಾರಕ ಭವನ ‘ಭಾವಪ್ರಕಾಶ’ದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದರು.

ಸಮ್ಮೇಳನವನ್ನು ಬೆಂಗಳೂರಿನ ಕರ್ನಾಟಕ ಸರಕಾರದ ಆಯುಷ್ ಆಯುಕ್ತರಾದ ಡಾ.ಶ್ರೀನಿವಾಸಲು ಕೆ. ಉದ್ಘಾಟಿಸಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಆಯುಷ್ ವಿಭಾಗದ ನಾಮ್ ಯೋಜನಾ ಮುಖ್ಯಸ್ಥ ಡಾ. ಅನಂತ ದೇಸಾಯಿ ಹಾಗೂ ಉಡುಪಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಉಪಸ್ಥಿತರಿರುವರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ವಹಿಸಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಆಯುರ್ವೇದ ಗುರು ಗೋವಾದ ಉಪೇಂದ್ರ ದೀಕ್ಷಿತ್, ಕಣ್ಣೂರು ಸರಕಾರಿ ಆಯುರ್ವೇದ ಕಾಲೇಜಿನ ಶರೀರ ಕ್ರಿಯಾ ವಿಭಾಗದ ಪ್ರಾಧ್ಯಾಪಕಿ ಡಾ.ಅನಂತಲಕ್ಷ್ಮೀ ಹಾಗೂ ಕುತ್ಪಾಡಿ ಉಡುಪಿ ಎಸ್‌ಡಿಎಂ ಕಾಲೇಜಿನ ರೋಗನಿಧಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಪ್ರಸನ್ನ ಎನ್.ಮೊಗಸಾಲೆ ಭಾಗವಹಿಸಲಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಆಗಮಿಸುವ 500ಕ್ಕೂ ಅಧಿಕ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದು, 250ಕ್ಕೂ ಅಧಿಕ ಪ್ರಬಂಧಗಳ ಮಂಡನೆಯಾಗಲಿದೆ ಎಂದು ಡಾ.ರವಿ ಭಟ್ ತಿಳಿಸಿದರು. ದೈಹಿಕ ಜಾಠರಾಗ್ನಿಯಿಂದ ಸೇವಿಸಿದ ಆಹಾರದ ಪಚನಕ್ರಿಯೆ ಹಾಗೂ ತನ್ಮೂಲಕ ಶರೀರ ಪೋಷಣೆಯ ಕುರಿತು ಸಮ್ಮೇಳನದಲ್ಲಿ ಚಿಂತನ-ಮಂಥನ ನಡೆಯಲಿದೆ.

ಸಮ್ಮೇಳನದ ಸಮಾರೋಪ ಸಮಾರಂಭ ಅಂದೇ ಸಂಜೆ 4:30ಕ್ಕೆ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಶರೀರ ಕ್ರಿಯಾ ವಿಭಾಗದ ಮುಖ್ಯಸ್ಥ ಡಾ.ಸುಧೀಂದ್ರ ಆರ್.ಮೊಹರೆ, ಕಾಲೇಜಿನ ಡೀನ್ (ಪಿಜಿ) ಡಾ.ಅಶೋಕ್ ಕುಮಾರ್, ಡೀನ್ (ಆಡಳಿತ) ಡಾ.ವೀರಕುಮಾರ್, ಶರೀರ ಕ್ರಿಯಾ ವಿಭಾಗದ ಸಹ ಸಹ ಪ್ರಾಧ್ಯಾಪಕಿ ಡಾ.ಅಪರ್ಣ ಕೆ., ಪಿಆರ್‌ಓ ವಿಭಾಗದ ಡಾ.ಶ್ರೀನಿಧ ಬಲ್ಲಾಳ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X