Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.26-28: ಕಾಪು ಬೀಚ್‌ನಲ್ಲಿ ಕಡಲ ಪರ್ಬ

ಡಿ.26-28: ಕಾಪು ಬೀಚ್‌ನಲ್ಲಿ ಕಡಲ ಪರ್ಬ

ವಾರ್ತಾಭಾರತಿವಾರ್ತಾಭಾರತಿ23 Dec 2025 9:41 PM IST
share
ಡಿ.26-28: ಕಾಪು ಬೀಚ್‌ನಲ್ಲಿ ಕಡಲ ಪರ್ಬ

ಕಾಪು, ಡಿ.23: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ 26ರಿಂದ ಮೂರು ದಿನಗಳ ಕಾಲ ಕಾಪು ಲೈಟ್‌ಹೌಸ್ ಬೀಚ್‌ನಲ್ಲಿ ಕಾಪು ಕಡಲ ಪರ್ಬವನ್ನು ಆಯೋಜಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಕಾಪುವಿನಲ್ಲಿ ಮಂಗಳವಾರ ಕಡಲಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ಸವದಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವಗಳು ನಡೆಯಲಿವೆ. ಕಡಲ ಪರ್ಬವನ್ನು ಡಿ.26ರಂದು ಸಂಜೆ 7ಗಂಟೆಗೆ ವಿಧಾನಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಉದ್ಘಾಟಿಸಲಿದ್ದಾರೆ ಎಂದವರು ತಿಳಿಸಿದರು.

ಡಿ.26ರ ಶುಕ್ರವಾರ ಸಂಜೆ 3 ಗಂಟೆಗೆ ಕಾಪು ಬೀಚ್ ಬಳಿಯ ಕೋಟ್ಯಾನ್‌ಕಾರ್ ಮೂಲಸ್ಥಾನದಲ್ಲಿ ‘ನಾ ಕಂಡಂತೆ ಅಟಲ್’ ವಿಷಯದಲ್ಲಿ ಪ್ರಬಂಧ ಸ್ಪರ್ಧೆ, 4 ಗಂಟೆಗೆ ಆತ್ಮ ನಿರ್ಭರ ಭಾರತ ವಿಷಯದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ, 6 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯರಿಂದ ಸಂಗೀತ ಸಂಜೆ ನಡೆಯಲಿದೆ ಬಳಿಕ ಆಹಾರ ಮೇಳ ಉದ್ಘಾಟನೆಗೊಳ್ಳಲಿದೆ ಎಂದರು.

7 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಲಾಲಾಜಿ ಅರ್ ಮೆಂಡನ್ ವಹಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಕರಾವಳಿಯ ಶಾಸಕರೆಲ್ಲರೂ ಉಪಸ್ಥಿತರಿ ರುವರು ಎಂದರು.

27ರಂದು ಬೆಳಗ್ಗೆ 9:30ರಿಂದ ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ ಹಾಗೂ ದಂತ ಚಿಕಿತ್ಸಾ ಶಿಬಿರ, ಅಪರಾಹ್ನ 2:30ಕ್ಕೆ ಪುರುಷರು ಹಾಗೂ ಮಹಿಳೆಯರಿಗೆ ಬೀಚ್ ಹಗ್ಗಜಗ್ಗಾಟ, ಬೀಚ್‌ನಲ್ಲಿ ಮರಳು ಶಿಲ್ಪ ರಚನೆ ಸ್ಪರ್ಧೆ ನಡೆಯಲಿವೆ. ಸಂಜೆ 7 ಗಂಟೆಗೆ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಪ್ರಮುಖರು ಭಾಗವಹಿಸುವರು. ರಾತ್ರಿ 8 ಗಂಟೆಗೆ ರಘು ದೀಕ್ಷಿತ್‌ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

28ರಂದು ಬೆಳಗ್ಗೆ 9:30ರಿಂದ ಬೃಹತ್ ಆರೋಗ್ಯ ಶಿಬಿರ, 11:30ಕ್ಕೆ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾಟ ಜರಗಲಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಸಹಿತ ಪ್ರಮುಖರು ಭಾಗವಹಿಸುವರು. ರಾತ್ರಿ 8 ಗಂಟೆಗೆ ಕುನಾಲ್ ಗಾಂಜಾವಾಲಾ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಗುರ್ಮೆ ಸುರೇಶ್ ಶೆಟ್ಟಿ ವಿವರಿಸಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಡಾ. ವಿದ್ಯಾದರ್, ಡಾ. ದೇವದಾಸ್ ಕಾಮತ್ ಹಿರಿಯಡ್ಕ ಸಹಿತ ಐದು ಮಂದಿ ಸಾಧಕರಿಗೆ ಅಟಲ್ ಸಾಧನಾ ಪ್ರಶಸ್ತಿ, ವಿವಿಧ ಕ್ಷೇತ್ರದ ಸಾಧಕರಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣ್‌ಕುಮಾರ್ ಮಟ್ಟು ಮತ್ತು ಗೋಪಾಲಕೃಷ್ಣ ರಾವ್, ಕೃಷ್ಣ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X