Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.29-30 ‘ಉಡುಪಿ ಅಟೋ ಎಕ್ಸ್‌ಪೋ-2023’

ಡಿ.29-30 ‘ಉಡುಪಿ ಅಟೋ ಎಕ್ಸ್‌ಪೋ-2023’

ವಾರ್ತಾಭಾರತಿವಾರ್ತಾಭಾರತಿ19 Dec 2023 9:59 PM IST
share
ಡಿ.29-30 ‘ಉಡುಪಿ ಅಟೋ ಎಕ್ಸ್‌ಪೋ-2023’

ಉಡುಪಿ: ಕರಾವಳಿ ಜಿಲ್ಲೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ದೇಶ-ವಿದೇಶಗಳ ವಿವಿಧ ಪ್ರಮುಖ ಕಂಪೆನಿಗಳ ದ್ವಿಚಕ್ರ ವಾಹನದಿಂದ ಘನ ವಾಹನಗಳ ಪ್ರದರ್ಶನ ಹಾಗೂ ಮಾರಾಟ, ಬಿಡಿಭಾಗಗಳ ಪ್ರದರ್ಶನ ಮೇಳ ‘ಉಡುಪಿ ಅಟೋ ಎಕ್ಸ್‌ಪೋ-2023’ ಡಿ.29 ಹಾಗೂ 30ರಂದು ಉಡುಪಿ ಎಂಜಿಎಂ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಅಟೋಮೊಬೈಲ್ ಡೀಲರ್ಸ್‌ ಅಸೋಸಿಯೇಷನ್‌ನ ಕಾರ್ಯದರ್ಶಿ ಕಾಶೀನಾಥ್ ನಾಯಕ್ ತಿಳಿಸಿದ್ದಾರೆ.

ಉಡುಪಿಯ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಉಡುಪಿ ಜಿಲ್ಲಾ ಅಟೋ ಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಹಾಗೂ ಉಡುಪಿ ಚೇಂಬರ್ ಆಫ್ ಕಾರ್ಮ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಎರಡು ದಿನಗಳ ಈ ಮೇಳ ನಡೆಯಲಿದೆ ಎಂದರು.

ಅಟೋ ಎಕ್ಸ್‌ಪೋದಲ್ಲಿ ವಿವಿಧ ಕಂಪೆನಿಗಳ ದ್ವಿಚಕ್ರ, ತಿಚಕ್ರ, ಕಾರು, ಜೀಪು, ಟೆಂಪೊ, ಬಸ್, ಲಾರಿ ಹಾಗೂ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳ ಪ್ರದರ್ಶನ ನಡೆಯಲಿದೆ. ಸ್ಥಳದಲ್ಲೇ ಬುಕ್ಕಿಂಗ್‌ಗೂ ಅವಕಾಶವಿದ್ದು, ಕಂಪೆನಿಗಳಿಂದ ವಿಶೇಷ ಆಫರ್‌ಗಳು ಸಿಗಲಿವೆ. ಅಗತ್ಯವಿದ್ದರೆ ಬ್ಯಾಂಕ್ ಸಾಲ ಸೌಲಭ್ಯವನ್ನೂ ಸ್ಥಳದಲ್ಲೇ ಒದಗಿಸಲಾಗು ವುದು ಎಂದು ಕಾಶೀನಾಥ್ ನಾಯಕ್ ತಿಳಿಸಿದರು.

ಬೆಂಝ್, ಬಿಎಂಡಬ್ಲ್ಯು, ಆಡಿ, ಸಿಟ್ರಾನ್, ಸ್ಕೋಡಾ, ಕಿಯಾ, ಎಂಜಿ, ಟೊಯೋಟಾ,ಮಹೀಂದ್ರ, ಹುಂಡೈ, ಮಾರುತಿ ಸುಜುಕಿ, ವೋಕ್ಸ್‌ವಾಗನ್, ಟಾಟಾ ಎಚ್‌ಸಿವಿ, ಲೈಲ್ಯಾಂಡ್, ಈಷರ್, ಭಾರತ್ ಬೆಂಝ್, ಹೋಂಡಾ ಕಂಪೆನಿಗಳ ವಾಹನಗಳ ಪ್ರದರ್ಶನವಿರುತ್ತದೆ.

ದ್ವಿಚಕ್ರ ವಾಹನ ವಿಭಾಗದಲ್ಲಿ ಟಿವಿಎಸ್. ಸುಝುಕಿ, ಹೀರೋ, ಹೋಂಡಾ, ಬಜಾಜ್, ಯಮಹಾ, ಎನ್‌ಫೀಲ್ಡ್, ಟಿವಿಎಸ್. ಬಜಾಜ್ ಮುಂತಾದ ಕಂಪೆನಿಗಳ ಮಾಹನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ.

ಅಲ್ಲದೇ ಬಿಎಸ್‌6 ವಾನಹಗಳ ಬಗ್ಗೆ ಕಂಪೆನಿ ತಜ್ಞರಿಂದ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಗ್ರಾಹಕರು ಹಾಗೂ ಗ್ಯಾರೇಜ್‌ಗಳ ಮೆಕ್ಯಾನಿಕ್‌ಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅಲ್ಲದೇ ಭಾಗವಹಿಸುವ ಎಲ್ಲರಿಗೂ ಆಯೋಜಕರ ವತಿಯಿಂದ ಅದೃಷ್ಟ ಕೂಪನ್‌ಗಳನ್ನು ನೀಡಲಾಗುತಿದ್ದು, ಡ್ರಾ ವಿಜೇತರಿಗೆ ಆಕರ್ಷಕ ಬಹುಮಾನ ಗಳಿರುತ್ತದೆ ಎಂದು ನಾಯಕ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲ ಅಟೋ ಕ್ಲಬ್‌ನ ಸ್ಥಾಪಕಅಧ್ಯಕ್ಷ ಡಾ. ನಿಶಾಂತ್ ಭಟ್, ಅಸೋಸಿಯೇಷನ್‌ನ ಮ್ಯಾಕ್ಸಿಮ್ ಡಿಸೋಜ, ವಲೇರಿಯನ್ ಫೆರ್ನಾಂಡೀಸ್, ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X