Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 3ಕಿ.ಮೀ. ಸರ್ವಿಸ್ ರಸ್ತೆ, ಪ್ಲೈಓವರ್...

3ಕಿ.ಮೀ. ಸರ್ವಿಸ್ ರಸ್ತೆ, ಪ್ಲೈಓವರ್ ಬೇಡಿಕೆಗೆ ಆಗಸ್ಟ್‌ವರೆಗೆ ಅವಕಾಶ; ತಪ್ಪಿದಲ್ಲಿ ಸೆ.4ಕ್ಕೆ ಬ್ರಹ್ಮಾವರ ಬಂದ್: ರಾ.ಹೆದ್ದಾರಿ ಉಳಿಸಿ ಸಮಿತಿ

ವಾರ್ತಾಭಾರತಿವಾರ್ತಾಭಾರತಿ26 July 2025 8:59 PM IST
share
3ಕಿ.ಮೀ. ಸರ್ವಿಸ್ ರಸ್ತೆ, ಪ್ಲೈಓವರ್ ಬೇಡಿಕೆಗೆ ಆಗಸ್ಟ್‌ವರೆಗೆ ಅವಕಾಶ; ತಪ್ಪಿದಲ್ಲಿ ಸೆ.4ಕ್ಕೆ ಬ್ರಹ್ಮಾವರ ಬಂದ್: ರಾ.ಹೆದ್ದಾರಿ ಉಳಿಸಿ ಸಮಿತಿ

ಬ್ರಹ್ಮಾವರ, ಜು.26: ದಶಕಗಳ ಬೇಡಿಕೆಯಾಗಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ 3 ಕಿ.ಮೀ ದೂರ ಸರ್ವಿಸ್ ರಸ್ತೆ ನಿರ್ಮಾಣ ಹಾಗೂ 7 ಪಿಲ್ಲರ್‌ಗಳ ಫ್ಲೈಓವರ್ ನಿರ್ಮಾಣಕ್ಕೆ ಸ್ಪಂದಿಸಿ ಆಗಸ್ಟ್ ಅಂತ್ಯದೊಳಗೆ ಲಿಖಿತ ಆದೇಶ ನೀಡದಿದ್ದರೆ ಸೆಪ್ಟೆಂಬರ್ 4ರಂದು ಬ್ರಹ್ಮಾವರ ಬಂದ್ ಕರೆ ನೀಡಲಾ ಗುವುದು ಎಂದು ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಸಮಿತಿಯ ಸಂಚಾಲಕ ಗೋವಿಂದ ರಾಜ್ ಹೆಗ್ಡೆ ಹೇಳಿದ್ದಾರೆ.

ಶನಿವಾರ ಬ್ರಹ್ಮಾವರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.4ರಂದು ಇಲ್ಲಿ ಸೇರುವ 8 ಗ್ರಾಮಗಳ ಗ್ರಾಮಸ್ಥರಿಂದಲೇ ಶ್ರಮದಾನದ ಮೂಲಕ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಸಲಾ ಗುತ್ತದೆ ಎಂದು ಅವರು ತಿಳಿಸಿದರು.

ಬ್ರಹ್ಮಾವರ ರಾ.ಹೆದ್ದಾರಿಯಲ್ಲಿ ದಕ್ಷಿಣದ ಭದ್ರಗಿರಿಯಿಂದ ಉತ್ತರದ ಮಾಬುಕಳ ಸೇತುವೆಯವರೆಗೆ ಹೆದ್ದಾರಿಯ 2 ಬದಿಗಳಲ್ಲೂ ಸರ್ವಿಸ್ ರಸ್ತೆ ನಿರ್ಮಾಣವಾಗಬೇಕು. ಆಕಾಶವಾಣಿ ಜಂಕ್ಷನ್‌ನಿಂದ ಮಹೇಶ್ ಆಸ್ಪತ್ರೆವರೆಗೆ 7 ಪಿಲ್ಲರ್‌ಗಳನ್ನು ಒಳಗೊಂಡ ಫ್ಲೈಓವರ್ ನಿರ್ಮಾಣವಾಗಬೇಕು ಎಂದು ಇಂದು ನಡೆದ ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಸಮಿತಿ ಇಂದು ನಡೆಸಿದ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ ಎಂದರು.

ಉಪ್ಪಿನಕೋಟೆ, ಬ್ರಹ್ಮಾವರ ಬೈಪಾಸ್, ದೂಪದಕಟ್ಟೆಯಲ್ಲಿ ಮೀಡಿಯನ್ ಓಪನ್ ಇಡಬೇಕೆಂಬ ಬೇಡಿಕೆ ಇರಿಸಿದ್ದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಸಮಿತಿ ಈ ಬಗ್ಗೆ ಧ್ವನಿಯೆತ್ತಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗೋವಿಂದರಾಜ ಹೆಗ್ಡೆ ದೂರಿದರು.

ದಶಕಗಳ ಹಿಂದೆ ಬ್ರಹ್ಮಾವರದಲ್ಲಿ ಹೆದ್ದಾರಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಇಲ್ಲಿನ ಹೆದ್ದಾರಿ ಅವ್ಯವಸ್ಥೆಗಳ ವಿರುದ್ಧ ಹಾಗೂ ಆಗಬೇಕಾದ ಕಾಮಗಾರಿಗಳ ಕುರಿತು ಹೋರಾಟ, ಮನವಿ, ಸಭೆಗಳನ್ನು ನಡೆಸಿದರೂ ಕೂಡ ಈ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಕೇವಲ 400 ಮೀ ರಸ್ತೆಯನ್ನು ಅವೈಜ್ಞಾ ನಿಕವಾಗಿ ಮಾಡುವ ಘೋಷಣೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಬ್ರಹ್ಮಾವರದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ (2020ರಿಂದ 2025ರವರೆಗೆ) ಆಗಿರುವ ಅಪಘಾತ ಗಳು 247. ಇವುಗಳಲ್ಲಿ 62 ಮಾರಕ ವಾಗಿದ್ದು, 185 ಸಾಧಾರಣ ಮಟ್ಟದ್ದಾಗಿದೆ. ಪೊಲೀಸರು ಇಲ್ಲಿನ ಆರು ಪ್ರದೇಶಗಳನ್ನು ಅಪಘಾತ ಪ್ರದೇಶವಾಗಿ ಗುರುತಿಸಿದ್ದಾರೆ. ಆದರೂ ಬ್ರಹ್ಮಾವರದ ಹೆದ್ದಾರಿ ಸಮಸ್ಯೆ ಗಳಿಗೆ ಹೆದ್ದಾರಿ ಪ್ರಾಧಿಕಾರ ಕುರುಡಾಗಿದೆ ಎಂದು ದೂರಿದ ಅವರು, ಹೀಗಾಗಿ ಇಂದಿನ ಸಭೆಯಲ್ಲಿ ಮುಂದಿನ ಹೋರಾಟದ ಕುರಿತಂತೆ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.

ಟ್ಯಾಕ್ಸಿ ಮಾಲಕರ ಸಂಘದ ಅಧ್ಯಕ್ಷ ರಮೇಶ ನಾಯ್ಕ, ರಿಕ್ಷಾ ಚಾಲಕರ ಗೌರವಾಧ್ಯಕ್ಷ ರಾಜು ಪೂಜಾರಿ, ಸಿ.ಐ.ಟಿ.ಯು ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಎಸ್.ಎಂ. ಸಂಸ್ಥೆಯ ಅಲ್ವಾರಿಸ್ ಡಿಸಿಲ್ವ, ಪ್ರಮುಖರಾದ ಬಿ. ಭುಜಂಗ ಶೆಟ್ಟಿ, ಮಡಾಮಕ್ಕಿ ಶಶಿಧರ ಶೆಟ್ಟಿ, ದಯಾನಂದ ಶೆಟ್ಟಿ, ಪ್ರತೀಶ್ ಹೆಗ್ಡೆ, ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಟೆಂಪೋ ಮಾಲಕರ ಸಂಘದ ಗೌರವ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ರಾಜರಾಮ್ ಶೆಟ್ಟಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನ ಚಂದ್ರಶೇಖರ ಹೆಗ್ಡೆ, ನಾಗರಿಕ ಸಮಿತಿಯ ಸದಾಶಿವ ಶೆಟ್ಟಿ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಶ್ರಮದಾನ ಮಾಡುತ್ತೇವೆ, ವಾಹನಗಳನ್ನು ನೀಡಿ!

ನಮ್ಮದು ದಶಕಗಳ ಹೋರಾಟ. ಜನರಿಗೆ ಅನುಕೂಲಕರವಾದ ಯಾವುದೇ ಬೆಳವಣಿಗೆಗಳು ಕಂಡು ಬಾರದ ಹಿನ್ನೆಲೆ ಊರಿನ ಪ್ರಮುಖರು, ರಿಕ್ಷಾ, ಟ್ಯಾಕ್ಸಿ ಯೂನಿಯನ್ ಸಭೆ ನಡೆಸಿ ಒಕ್ಕೊರಲ ತೀರ್ಮಾ ನಕ್ಕೆ ಬಂದಿದ್ದೇವೆ. ಆಗಸ್ಟ್ ತಿಂಗಳ ಅಂತ್ಯದೊಳಗೆ ಸಂಸದರಾಗಲಿ, ಜಿಲ್ಲಾಧಿಕಾರಿಯಾಗಲಿ ಎನ್‌ಎಚ್‌ಎಐ ಜೊತೆಗೆ ನಮ್ಮ ಸಮಿತಿಯ ಸಭೆ ಕರೆದು ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸುವ ಲಿಖಿತ ಭರವಸೆ ನೀಡಬೇಕು. ಇಲ್ಲವಾದಲ್ಲಿ ಸೆ.4ರಂದು ಬ್ರಹ್ಮಾವರ ಬಂದ್ ಕರೆ ನೀಡಲಾಗುತ್ತದೆ. ಇಲ್ಲಿನ ಫಾರ್ಚೂನ್ ಹೋಟೆಲ್ ಎದುರುಗಡೆಯಿಂದ ಧರ್ಮಾವರ ಆಡಿಟೋರಿಯಂವರೆಗೆ 8 ಗ್ರಾಮದ ಬಳಕೆ ದಾರರು ಶ್ರಮದಾನದ ಮೂಲಕ ರಸ್ತೆ ರಚನೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಹಕರಿಸು ತ್ತೇವೆ. ಕಾಮಗಾರಿಗೆ ಬೇಕಾದ ಜೆಸಿಬಿ, ಟಿಪ್ಪರ್, ಹಿಟಾಚಿ ಮೊದಲಾದ ಯಂತ್ರ, ವಾಹನಗಳನ್ನು ಒದಗಿಸಿ ಕೊಡುವಂತೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ನೀಡಲಿದ್ದೇವೆ.

-ಬಿ.ಗೋವಿಂದ ರಾಜ್ ಹೆಗ್ಡೆ, ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಸಮಿತಿ ಸಂಚಾಲಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X