Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ.7, 8: ಆಳ್ವಾಸ್ ಪ್ರಗತಿ-2026 ಬೃಹತ್...

ಆ.7, 8: ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ22 July 2026 10:22 PM IST
share
ಆ.7, 8: ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ

ಉಡುಪಿ: ದೇಶದ ಯುವಜನರ ಉದ್ಯೋಗ ಕನಸುಗಳಿಗೆ ಬಲ ತುಂಬುತ್ತಿರುವ ರಾಜ್ಯದ ಪ್ರತಿಷ್ಠಿತ ಉಚಿತ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2026’ರ 16ನೇ ಆವೃತ್ತಿ ಆ.7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿ ಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಯೋಜನೆಯ ಅಂಗವಾಗಿ ಈ ಮೇಳವನ್ನು ಸಂಪೂರ್ಣ ಉಚಿತ ವಾಗಿ ಆಯೋಜಿಸಲಾಗುತ್ತಿದ್ದು, ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ಈ ವರ್ಷದ ಉದ್ಯೋಗ ಮೇಳದಲ್ಲಿ ಈಗಾಗಲೇ 276ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 15,860ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರಲಿವೆ ಎಂದರು.

ಕಳೆದ ವರ್ಷದ ಆಳ್ವಾಸ್ ಪ್ರಗತಿಯಲ್ಲಿ 2,873 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 3,734 ಮಂದಿ ಮುಂದಿನ ಹಂತದ ನೇಮಕಾತಿಗೆ ಆಯ್ಕೆಯಾಗಿದ್ದರು. ಇದುವರೆಗೆ ಒಟ್ಟು 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ಮುಂದಿನ ಹಂತಕ್ಕೆ ಶಾರ್ಟ್‌ಲಿಸ್ಟ್‌ನಲ್ಲಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದರು ಎಂದರು.

ಈ ಬಾರಿಯ ಉದ್ಯೋಗಮೇಳದಲ್ಲಿ ಐಟಿ/ಐಟಿಇಎಸ್, ಉತ್ಪಾದನಾ, ಬ್ಯಾಂಕಿಂಗ್ ಮತ್ತು ಹಣಕಾಸು, ಆರೋಗ್ಯ, ಔಷಧ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ನಿರ್ಮಾಣ, ಆತಿಥ್ಯ ಹಾಗೂ ಮಾರಾಟ ಮತ್ತು ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಸಂಸ್ಥೆಗಳು ನೇಮಕಾತಿ ನಡೆಸಲಿವೆ. ಈ ಬಾರಿ ಮಹಿಳಾ ಅಬ್ಯರ್ಥಿಗಳಿಗಾಗಿ ವಿಶೇಷ ನೇಮಕಾತಿ ಅಭಿಯಾನ ನಡೆಯಲಿದೆ ಎಂದವರು ಹೇಳಿದರು.

ಡಿಪ್ಲೊಮಾ ಹಾಗೂ ಐಟಿಐ ಅಭ್ಯರ್ಥಿಗಳಿಗೆ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಾವಕಾಶಗಳೂ ಲಭ್ಯವಿದ್ದು, ಮಹಿಳಾ ಅಭ್ಯರ್ಥಿಗಳಿಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ವಿಶೇಷ ನೇಮಕಾತಿ ಅಭಿಯಾನ ಹಮ್ಮಿಕೊಂಡಿದೆ. ಕೆಲವು ಸಂಸ್ಥೆಗಳು ವಾರ್ಷಿಕ 5 ಲಕ್ಷದಿಂದ 8 ಲಕ್ಷದವರೆಗೆ ವೇತನ ಪ್ಯಾಕೇಜ್ ಹೊಂದಿರುವ ಹುದ್ದೆಗಳನ್ನೂ ಪ್ರಕಟಿಸಿವೆ. ಪದವಿ, ಸ್ನಾತಕೋತ್ತರ, ಬಿಇ/ಬಿಟೆಕ್, ಡಿಪ್ಲೊಮಾ ಐಟಿಐ ನರ್ಸಿಂಗ್ ವೈದ್ಯಕೀಯ, ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಫ್ರೆಶರ್ಸ್ ಮತ್ತು ಅನುಭವಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಐಟಿಐ ವಿದ್ಯಾರ್ಥಿಗಳಿಗೆ ಉಡುಪಿಯಿಂದ ಉಚಿತ ಬಸ್ ವ್ಯವಸ್ಥೆಯನ್ನೂ ಒದಗಿಸಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ 9611750531, 9741440490, 9008907716 ಅಥವಾ 7975223865 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಟಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್ ಸಿ.ಎಸ್ ಹಾಗೂ ಆಳ್ವಾಸ್ ಸಮಾಜಶಾಸ್ತ್ರ ವಿಭಾಗದ ಅಂಬಾಸಿಡರ್ ಈಶ್ವರ್ ಮಲ್ಪೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X