Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ 82 ಸರಕಾರಿ ಕಚೇರಿಗಳು...

ಉಡುಪಿ ಜಿಲ್ಲೆಯ 82 ಸರಕಾರಿ ಕಚೇರಿಗಳು ‘ತಂಬಾಕು ಮುಕ್ತ ಕಚೇರಿ’

ಆರೋಗ್ಯ ಇಲಾಖೆಯ ಸಭೆಯಲ್ಲಿ ಡಿಸಿ ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ28 July 2023 3:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ ಜಿಲ್ಲೆಯ 82 ಸರಕಾರಿ ಕಚೇರಿಗಳು ‘ತಂಬಾಕು ಮುಕ್ತ ಕಚೇರಿ’

ಉಡುಪಿ, ಜು.28: ಮಳೆಗಾಲವು ಕೀಟಜನ್ಯ ರೋಗಗಳ ಹರಡುವಿಕೆಗೆ ಪೂರಕವಾದ ವಾತಾವರಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗಳನ್ನಾಗಿ ಅನುಷ್ಠಾನಗೊಳಿಸಿದ್ದು, ಇದುವರೆಗೆ 51 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ, 13 ಗ್ರಾಮ ಪಂಚಾಯತ್ ಕಚೇರಿ, 18 ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳನ್ನು ‘ತಂಬಾಕು ಮುಕ್ತ ಕಚೇರಿ’ ಎಂದು ಘೋಷಿಸಲಾಗಿದೆ ಎಂದರು.

ಹಾಸಿಗೆ ಪೀಡಿತರಾಗಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅವರ ಮನೆಗೆ ತೆರಳಿ ಅವಶ್ಯಕತೆ ಇರುವ ಆರೋಗ್ಯ ಸೇವೆಯನ್ನು ನೀಡಬೇಕು. ಅವರಿಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಸಹ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬೀಡಿ ಕಾರ್ಮಿಕರ ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆ ಹಾಗೂ ಪರಿಹಾರಾತ್ಮಕ ಯೋಜನೆಯಡಿ ಬೀಡಿ ಕಾರ್ಮಿಕರುಗಳ ಜೀವನಾ ದಾಯಕ್ಕೆ ಪರ್ಯಾಯ ಉದ್ಯೋಗ ಕೈಗೊಳ್ಳಲು ಸ್ವ-ಉದ್ಯೋಗ ತರಬೇತಿ ನೀಡಿ, ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ನಗರ ಸ್ಥಳೀಯ ಸಂಸ್ಥೆಗಳಿಂದ ಪ್ರತ್ಯೇಕ ಪರವಾನಿಗೆ ಪಡೆದವರು ಮಾತ್ರ ಮಾರಾಟ ಮಾಡಲು ಅವಕಾಶವಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಬೇಕು ಎಂದರು.

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸರಕಾರಿ ಆಸ್ಪತ್ರೆಗಳು ತಮ್ಮಲ್ಲಿಗೆ ಬರುವ ರೋಗಿಗಳನ್ನು ಇತರೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುವುದು ಕಡಿಮೆಯಾಗಬೇಕು. ಅವಶ್ಯವಿದ್ದಲ್ಲಿ ಮಾತ್ರ ಶಿಫಾರಸು ಮಾಡಬೇಕು ಎಂದರು.

ಗರ್ಭಿಣಿಯರಿಗೆ ಸೂಕ್ತ ಸಮಯದಲ್ಲಿ ಆರೋಗ್ಯ ತಾಯಿ ಕಾರ್ಡ್‌ಗಳನ್ನು ವಿತರಿಸಿ, ಕಾಲಕಾಲಕ್ಕೆ ತಪಾಸಣೆ ಮಾಡಿ, ಚಿಕಿತ್ಸೆ ನೀಡಿರುವ ಬಗ್ಗೆ ಕಾರ್ಡು ಗಳಲ್ಲಿ ನಮೂದಿಸಬೇಕು. ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದರಿಂದ ತಾಯಿ ಹಾಗೂ ಶಿಶು ಮರಣವನ್ನು ತಡೆಗಟ್ಟಲು ಸಾಧ್ಯವಾ ಗುತ್ತದೆ ಎಂದರು.

ಮಕ್ಕಳು ಯಾವುದೇ ಲಸಿಕೆಗಳಿಂದ ವಂಚಿತರಾಗದಂತೆ ರೋಗ ನಿರೋಧಕ ಚುಚ್ಚುಮದ್ದುಗಳನ್ನು ಸರಕಾರ ನೀಡಿರುವ ಮಾರ್ಗಸೂಚಿ ಅನ್ವಯ ನಿಗದಿತ ಅವಧಿಯಲ್ಲಿ ಮಕ್ಕಳಿಗೆ ನೀಡಬೇಕು. ಅಗತ್ಯವಿದ್ದಲ್ಲಿ ಈ ಕಾರ್ಯಕ್ಕೆ ಇತರೆ ಇಲಾಖೆಗಳ ಸಹಕಾರ ಪಡೆಯುವಂತೆ ತಿಳಿಸಿದರು.

ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಹಾಗೂ ರೋಗಗಳಿಂದ ದೂರವಿರಲು ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕೆಯ ಬಗ್ಗೆ ಆರೋಗ್ಯ ಶಿಕ್ಷಣ ನೀಡಬೇಕು ಎಂದರು.

ಜನ ಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಲಬೆರಕೆ ಆಹಾರ ಪದಾರ್ಥಗಳು ಮಾರುಕಟ್ಟೆಯಲ್ಲಿ ಮಾರಾಟವಾಗದಂತೆ ಎಚ್ಚರ ವಹಿಸಬೇಕು. ಆಹಾರ ಗುಣಮಟ್ಟದ ಬಗ್ಗೆ ಆಹಾರ ಮಾದರಿಗಳನ್ನು ತೆಗೆದು ಪರೀಕ್ಷಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಹಿರಿಯ ಸಿವಿಲ್ ನ್ಯಾಯಾ ಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಸುದೇಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X