Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 900 ಎಂಡೋ ಸಂತ್ರಸ್ತ ಹೆಣ್ಣುಮಕ್ಕಳಲ್ಲಿ...

900 ಎಂಡೋ ಸಂತ್ರಸ್ತ ಹೆಣ್ಣುಮಕ್ಕಳಲ್ಲಿ ಶೇ.80ಕ್ಕೂ ಅಧಿಕ ಅಂಗವಿಕಲತೆ: ಡಾ.ಶಾನುಭಾಗ್

ಎಂಡೋ ಸಂತ್ರಸ್ತ ಹೆಣ್ಣುಮಕ್ಕಳ ಸೇವಾಶ್ರಮಕ್ಕೆ ಭೂಮಿಪೂಜೆ

ವಾರ್ತಾಭಾರತಿವಾರ್ತಾಭಾರತಿ12 Jan 2025 7:31 PM IST
share
900 ಎಂಡೋ ಸಂತ್ರಸ್ತ ಹೆಣ್ಣುಮಕ್ಕಳಲ್ಲಿ ಶೇ.80ಕ್ಕೂ ಅಧಿಕ ಅಂಗವಿಕಲತೆ: ಡಾ.ಶಾನುಭಾಗ್

ಉಡುಪಿ, ಜ.12: ಕಳೆದ ನಾಲ್ಕು ದಶಕಗಳಿಂದ ಕರಾವಳಿ ಕರ್ನಾಟಕದಾದ್ಯಂತ ನಡೆದಿರುವ ಎಂಡೋಸಲ್ಫಾನ್ ದುರಂತ ದಲ್ಲಿ ಅಂಗವಿಕಲ ಹಾಗೂ ವಿಶೇಷಚೇತನರಾಗಿ ಬಳಲುತ್ತಿರುವ ಹೆಣ್ಣು ಮಕ್ಕಳಿಗಾಗಿ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ರುವ ಹೊಸ ಬೆಳಕು ಸೇವಾ ಟ್ರಸ್ಟ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಆಶ್ರಮಕ್ಕೆ ಶಂಕುಸ್ಥಾಪನೆಯನ್ನು ರವಿವಾರ ನೆರವೇರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪಾಲನಾ ಕೇಂದ್ರಗಳು ಸ್ಥಾಪಿತ ವಾಗಿದ್ದರೂ, ಉಡುಪಿ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಪುನರ್ವಸತಿ ವ್ಯವಸ್ಥೆ ಕಲ್ಪಿಸಲು ಇದುವರೆಗೂ ಸಾಧ್ಯವಾಗಿರಲಿಲ್ಲ. ಇದೀಗ ಹೊಸಬೆಳಕು ಸಂಸ್ಥೆಯ ಈ ಆಶ್ರಮದ ನಿರ್ವಹಣೆಗಾಗಿ ಸರಕಾರದ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಭರವಸೆ ನೀಡಿದರು.

ಮನೋವೈದ್ಯ ಡಾ.ಪಿ.ವಿ ಭಂಡಾರಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಹೊಸಬೆಳಕು ಸಂಸ್ಥೆಯ ಚಟುವಟಿಕೆಗಳು ಈಗಾಗಲೇ ಸಾರ್ವಜನಿಕರ ಗಮನ ಸೆಳೆದಿದ್ದು, ಇದೀಗ 180 ಅಸಹಾಯಕರ ಆಶ್ರಯ ಧಾಮವಾಗಿದೆ. ಅವಶ್ಯ ವಿರುವ ಆಶ್ರಮವಾಸಿಗಳಿಗೆ ಸೂಕ್ತ ಮನೋಚಿಕಿತ್ಸೆ ನೀಡಲು ಬಾಳಿಗಾ ಆಸ್ಪತ್ರೆಯ ವತಿಯಿಂದ ವೈದ್ಯರನ್ನು ನಿಯೋಜಿಸಲಾಗುವುದು ಎಂದರು.

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶಾನುಭಾಗ್ ಮಾತನಾಡಿ, ಈ ದುರಂತದಲ್ಲಿ ಸುಮಾರು 3000 ಮಂದಿ ಸಂತ್ರಸ್ತರು ಈಗಾಗಲೇ ಕ್ಯಾನ್ಸರ್, ಎಪಿಲೆಪ್ಸಿ ಮುಂತಾದ ರೋಗಗಳಿಂದ ನರಳಿ ಮರಣ ಹೊಂದಿದ್ದಾರೆ. ಬದುಕುಳಿದ 8600 ಪೀಡಿತರಲ್ಲಿ 4000ಕ್ಕೂ ಅಧಿಕ ಬಾಧಿತರು ಹೆಣ್ಣುಮಕ್ಕಳಾಗಿದ್ದಾರೆ. ಇವರಲ್ಲಿ ಸುಮಾರು 900 ಮಂದಿಯಷ್ಟು ಶೇ.80ಕ್ಕೂ ಅಧಿಕ ಅಂಗವಿಕಲತೆಯುಳ್ಳವರಾಗಿದ್ದಾರೆ ಎಂದರು.

ಇದರಲ್ಲಿ ಹೆಚ್ಚಿನ ಹೆಣ್ಣು ಮಕ್ಕಳು ಸುಮಾರು 10ರಿಂದ 40ವರ್ಷದೊಳಗಿ ನವರು. ಈ ಸಂತ್ರಸ್ತರ ಪಾಲನೆ ಪೋಷಣೆ ಒಂದೇ ಕೋಣೆಯಲ್ಲಿ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸಬೆಳಕು ಆಶ್ರಮದ ಪ್ರಯತ್ನವನ್ನು ಬೆಂಬಲಿಸುವುದು ನಾಗರಿಕರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಎಂಡೋಸಲ್ಫಾನ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆಯ ಯೋಜನಾಧಿಕಾರಿ ಸತೀಶ್, ಸಂಸ್ಥೆಯ ಮುಖ್ಯಸ್ಥೆ ತನುಲಾ ತರುಣ, ಯು.ಎಸ್.ನಾಯಕ್ ಮೊಮೋರಿಯಲ್ ಟ್ರಸ್ಟ್‌ನ ಸುರೇಶ್ ನಾಯಕ್, ಎಂಡೋಸಲ್ಫಾನ್ ಕಾರ್ಯಕರ್ತರಾದ ಸಂಜೀವ ಕಬಕ, ಪ್ರಮೀಳಾ ಹರ್ಷ ಹಾಗೂ ದಿನೇಶ್ ಭಟ್ ಉಪಸ್ಥಿತರಿದ್ದರು.

‘ಎಂಡೋಸಲ್ಫಾನ್ ಅಷ್ಟೇ ರೋಗಕಾರಕವಾಗಿರುವ ಹಲವಾರು ಕೀಟನಾಶಕ ಗಳು ಇದೀಗ ಮಾರುಕಟ್ಟೆಯಲ್ಲಿ ಲಭ್ಯ ಇವೆ. ಇವುಗಳ ಬಳಕೆಯ ವಿರುದ್ಧ ಜನಾಭಿಪ್ರಾಯ ರೂಪಿಸಲು ಹಾಗೂ ಕಾನೂನು ಹೋರಾಟ ನಡೆಸಲು ಪ್ರತಿಷ್ಠಾನ ಬದ್ಧವಾಗಿದೆ’

-ಡಾ.ರವೀಂದ್ರನಾಥ್ ಶಾನುಭಾಗ್

150 ಎಂಡೋ ಸಂತ್ರಸ್ತರಿಗೆ ಅವಕಾಶ

ಸಾಕಷ್ಟು ಮಂದಿ ಎಂಡೋ ಸಂತ್ರಸ್ತರು ಹಾಸಿಗೆ ಬಿಟ್ಟು ಏಳಲು ಅಶಕ್ತರಾಗಿದ್ದಾರೆ. ಅವರ ಹೆತ್ತವರು ಜೀವಂತ ಇರುವ ತನಕ ತಮ್ಮ ಮಕ್ಕಳ ಪೋಷಣೆಯನ್ನು ಮಾಡುತ್ತಿದ್ದರು. ಇದೀಗ ಕೆಲವರು ಹೆತ್ತವರನ್ನು ಕಳೆದು ಕೊಂಡಿದ್ದಾರೆ. ಅಸಹಾಯಕ ಪರಿಸ್ಥತಿಯಲ್ಲಿರುವ ಒಟ್ಟು 150 ಎಂಡೋ ಸಂತ್ರಸ್ತರನ್ನು ಈ ಆಶ್ರಮಕ್ಕೆ ಸೇರಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಹೊಸಬೆಳಕು ಸಂಸ್ಥೆಯ ಮುಖ್ಯಸ್ಥೆ ತನುಲಾ ತರುಣ ತಿಳಿಸಿದರು.

ಮೂರು ಮಹಡಿಯ ಈ ಪ್ರಸ್ತಾವಿತ ಕಟ್ಟಡದ ಮೊದಲ ಹಂತದ ಕಾಮಗಾರಿ ಇದೇ ವರ್ಷದ ಜೂನ್ ತಿಂಗಳಲ್ಲಿ ಮುಗಿಸುವ ಸಾಧ್ಯತೆಯಿದ್ದು, ಆಗ 50 ಸಂತ್ರಸ್ತರನ್ನು ಸೇರಿಸಿಕೊಳ್ಳಲಾಗುವುದು. ಅನಂತರ ಸುಮಾರು ಒಂದು ವರ್ಷದೊಳಗೆ ಮೊದಲನೇ ಮಹಡಿ ಮತ್ತು ಎರಡನೇ ಮಹಡಿಯ ಕಾಮಗಾರಿಯನ್ನೂ ಮುಗಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X