Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಂಟಕಲ್ಲು ಬಸ್ ತಂಗುದಾಣದಲ್ಲಿ...

ಬಂಟಕಲ್ಲು ಬಸ್ ತಂಗುದಾಣದಲ್ಲಿ ತೆರೆದುಕೊಂಡ ಜನಸ್ನೇಹಿ ವಾಚನಾಲಯ

ವಾರ್ತಾಭಾರತಿವಾರ್ತಾಭಾರತಿ23 Sept 2023 6:01 PM IST
share
ಬಂಟಕಲ್ಲು ಬಸ್ ತಂಗುದಾಣದಲ್ಲಿ ತೆರೆದುಕೊಂಡ ಜನಸ್ನೇಹಿ ವಾಚನಾಲಯ

ಶಿರ್ವ, ಸೆ.23: ಬಸ್ಸು ತಂಗುದಾಣದಲ್ಲಿ ಬಸ್ ಕಾಯುವ ಅಥವಾ ವಿಶ್ರಾಂತಿ ಪಡೆಯುವ ನಾಗರಿಕರು ಮೊಬೈಲ್‌ನಲ್ಲಿಯೇ ಸಮಯ ಕಳೆಯುವುದು ಈಗ ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ನಿಲ್ದಾಣವು ಮೊಬೈಲ್‌ಗೆ ಸ್ಪಲ್ಪವಿರಾಮ ನೀಡಿ ಪುಸ್ತಕದ ಕಡೆಗೆ ಕಣ್ಣು ಹಾಯಿಸುವಂತೆ ಮಾಡುತ್ತಿದೆ. ಆ ಮೂಲಕ ಪುಸ್ತಕ ಪ್ರೀತಿಯನ್ನು ಬೆಳೆಸುವ ಪ್ರಯತ್ನ ಇಲ್ಲಿ ನಡೆಯುತ್ತಿದೆ.

ಬಂಟಕಲ್ಲು ನಾಗರಿಕ ಸಮಿತಿ ಕಳೆದ ಮೂರು ವರ್ಷಗಳಿಂದ ಬಂಟಕಲ್ಲು ಕೇಂದ್ರವಾಗಿರಿಸಿ ಪರಿಸರದ ಸುತ್ತಮುತ್ತಲಿನ ಹಲವು ಸಮಾಜ ಮುಖಿ ಕಾರ್ಯ ಗಳನ್ನು ನಿರಂತರವಾಗಿ ನಡೆಸುತ್ತಿದೆ. ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಶಿರ್ವ ಗ್ರಾಪಂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ನೇತೃತ್ವದಲ್ಲಿ ಸಮಿತಿಯ ಸದಸ್ಯರ ಸಹಕಾರ ಹಾಗೂ ನಾಗರಿಕರ ಸ್ಪಂದನವೇ ವಿವಿಧ ಸೇವಾ ಸಾಧನೆಗಳಿಗೆ ಸ್ಪೂರ್ತಿ ತುಂಬಿದೆ.

ಜನಸ್ನೇಹಿ ವಾಚನಾಲಯ: ಇದೀಗ ಸಮಿತಿಯ ವತಿಯಿಂದ ಬಂಟಕಲ್ಲು ಬಸ್ಸು ತಂಗುದಾಣದಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಜನಸ್ನೇಹಿ ತೆರೆದ ವಾಚನಾಲಯವನ್ನು ಆರಂಭಿಸಲಾಗಿದೆ.

ಇಲ್ಲಿನ ಕಪಾಟಿಗೆ ಬಾಗಿಲುಗಳಿಲ್ಲ. ದಿನಪತ್ರಿಕೆ, ವಾರ ಪತ್ರಿಕೆ, ಮಾಸಿಕ ಪತ್ರಿಕೆ, ಸಹಿತ ವಿವಿಧ ಕತೆ, ಕಾದಂಬರಿಗಳು, ಸಣ್ಣಕತೆಗಳು, ಕವನ, ಪ್ರಸಿದ್ಧ ಸಾಹಿತಿಗಳ ಪುಸ್ತಕಗಳು ಎಲ್ಲವೂ ಇವೆ. ಆಸಕ್ತ ಓದುಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ಯಾರು ಕೂಡ ಯಾವುದೇ ಪುಸ್ತಕಗಳನ್ನು ಓದಬಹುದು. ಅಲ್ಲದೆ ಮನೆಗೆ ತಕೊಂಡು ಹೋಗಿ ಓದಿದ ನಂತರ ಪುನ: ತಂದು ಇಡುವ ಅವಕಾಶಗಳಿವೆ. ಓದುಗರಿಗೆ ಉಪಯುಕ್ತ ಮಾಹಿತಿ ನೀಡುವ ಸೂಚನಾ ಫಲಕವನ್ನು ಕೂಡ ಇಲ್ಲಿ ಅಳವಡಿಸಲಾ ಗಿದೆ ಎಂದು ಕೆ.ಆರ್.ಪಾಟ್ಕರ್ ತಿಳಿಸಿದ್ದಾರೆ.

ಸಾರ್ವಜನಿಕರಿಂದ ಸ್ಪಂದನ: ವಾಚನಾಲಯ ಪ್ರಾರಂಭಿಸುವ ಬಗ್ಗೆ ಸಮಿತಿ ಯಿಂದ ನೀಡಿದ ವಾಟ್ಸಪ್ ಸಂದೇಶಕ್ಕೆ ನೂರಾರು ಮಂದಿ ಮೆಚ್ಚುಗೆ ವ್ಯಕ್ತ ಪಡಿಸಿದ್ದು, ಜೊತೆಗೆ ಉಚಿತವಾಗಿ ಪುಸ್ತಕಗಳನ್ನು ನೀಡುವ ಕುರಿತು ದಾನಿಗಳಿಂದ ಭರವಸೆಗಳ ಮಹಾಪೂರವೇ ಹರಿದು ಬಂದಿದೆ.

ತಮ್ಮ ಮನೆಗಳಲ್ಲಿ ಓದಿ ಓದಿ ಅಟ್ಟ ಸೇರಿದ ಹಲವಾರು ಅತ್ಯುತ್ತಮ ಪುಸ್ತಕ ಗಳನ್ನು ತಂದು ನೀಡಿದವರು, ಪುಸ್ತಕ ಖರೀದಿ ಸಲು ಧನಸಹಾಯ ನೀಡಲು ಮುಂದೆ ಬಂದ ದಾನಿಗಳು, ನಿರಂತರ ಪ್ರಾಯೋಜಕತ್ವವನ್ನು ವಹಿಸಲು ಸಿದ್ಧರಾದ ಪುಸ್ತಕ ಪ್ರೇಮಿಗಳು, ಜನಸ್ನೇಹಿ ಪುಸ್ತಕ ಗೂಡು ತುಂಬುವಲ್ಲಿ ಪ್ರೇರಕರಾಗಿದ್ದಾರೆ ಎಂದು ಕೆ.ಆರ್.ಪಾಟ್ಕರ್ ತಿಳಿಸಿದ್ದಾರೆ.

ವಾಚನಾಲಯ ಲೋಕಾರ್ಪಣೆ: ಈ ವಾಚನಾಲಯವನ್ನು ಮಂಗಳವಾರ ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಆರ್.ಪಾಟ್ಕರ್ ದೀಪ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಮಾತನಾಡಿದರು. ದಾನಿಗಳಾದ ರಾಮಚಂದ್ರ ನಾಯಕ್ ಪಡುಬೆಳ್ಳೆ, ಶ್ರೀಕ್ಷೇತ್ರ ಬಂಟಕಲ್ಲು ದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಕಾಮತ್, ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ, ಪ್ರಮುಖರಾದ ರಾಘವೇಂದ್ರ ನಾಯಕ್, ಉಮೇಶ ರಾವ್, ಮಂಜುನಾಥ್ ಪೂಜಾರಿ, ಜಗದೀಶ ಆಚಾರ್ಯ, ವಿಜಯ್ ಧೀರಜ್, ಪ್ರಮೀಳಾ ಲೋಬೊ, ಸರಸ್ವತಿ ಎಸ್.ಕಾಮತ್, ಶಿರ್ವ ಪಂಚಾಯತ್ ವಾಚನಾಲಯ ನಿರ್ದೇಶಕಿ ಅಮ್ಮಿ, ಸುರೇಶ್ ಆಚಾರ್ಯ, ಮಾಧವ ಆಚಾರ್ಯ, ವಾಲೆಟ್ ಕಸ್ತಲಿನೊ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕಿ ಅರುಂಧತಿ ಪ್ರಭು ನಿರೂಪಿಸಿದರು. ನಾಗರಿಕ ಸಮಿತಿ ಕಾರ್ಯದರ್ಶಿ ದಿನೇಶ ದೇವಾಡಿಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X