Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಸ್ಲಿಂ ಬಾಂಧವ್ಯ ವೇದಿಕೆಯಿಂದ...

ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಆದಿಚುಂಚನಗಿರಿ ಮಠ ಭೇಟಿ

ವಾರ್ತಾಭಾರತಿವಾರ್ತಾಭಾರತಿ28 Aug 2023 8:19 PM IST
share
ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಆದಿಚುಂಚನಗಿರಿ ಮಠ ಭೇಟಿ

ಉಡುಪಿ, ಆ.28: ಮುಸ್ಲಿಂ ಸಾಹಿತಿಗಳು ಲೇಖಕರು ಚಿಂತಕರು ಮತ್ತು ಸಾಧಕರ ವೇದಿಕೆಯಾದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ನಿಯೋಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿತು.

ಸಂಘಟನೆಯ ಉದ್ದೇಶ, ಕಾರ್ಯ ಮತ್ತು ಸ್ವರೂಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ವಾಮೀಜಿಗಳು, ಕರ್ನಾಟಕದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯು ಎಲ್ಲ ಸಮುದಾಯಗಳ ನಡುವಿನ ಬಾಂಧವ್ಯಕ್ಕೆ ಹೊಸ ಭಾಷ್ಯ ಮುನ್ನುಡಿ ಬರೆಯಲಿದೆ. ಸಮುದಾಯಗಳ ನಡುವೆ ಕಾರಣಾಂತರಗಳಿಂದ ಉದ್ಭವವಾಗುವ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಸೂಕ್ತ ಸಂಪರ್ಕ ಸಾಧಿಸಲು ಇಂತಹ ಪ್ರಬುದ್ಧರ ವೇದಿಕೆಗಳು ಅವಶ್ಯಕ ಎಂದರು.

ಪ್ರಜ್ಞಾವಂತರು ಮತ್ತು ಪ್ರತಿಭಾವಂತರಿಂದ ಕೂಡಿದ ಈ ವೇದಿಕೆಯು ರಾಜಕೀಯ ಸಾಮಾಜಿಕ ಮತ್ತು ಧಾರ್ಮಿಕ ವಿಚಾರ ಗಳಲ್ಲಿ ಸಮುದಾಯವನ್ನು ಸೂಕ್ತ ರೀತಿಯಲ್ಲಿ ಖಂಡಿತ ಪ್ರತಿನಿಧಿಸುವ ವಿಶ್ವಾಸವಿದೆ. ಆದಿಚುಂಚನಗಿರಿ ಮಠ ಮತುತಿ ಮುಸ್ಲಿಂ ಸಮುದಾಯದ ಬಾಂಧವ್ಯಕ್ಕೆ ಒಂದು ದೊಡ್ಡ ಪರಂಪರೆ ಮತ್ತು ಇತಿಹಾಸವಿದೆ. ವೇದಿಕೆಯ ಸದಸ್ಯರು ಮಠಕ್ಕೆ ಸೌಹಾರ್ದ ಭೇಟಿ ನೀಡುವ ಮೂಲಕ ಆ ಪರಂಪರೆಗೆ ಮತತಿಷ್ಟು ಮೆರುಗು ನೀಡಿದ್ದು ಮಾತ್ರವಲ್ಲ ಸುದೀರ್ಘ ಸ್ನೇಹಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದು ಅವರು ಹೇಳಿದರು.

ನಿಯೋಗದಲ್ಲಿ ಅಧ್ಯಕ್ಷ ಅನೀಸ್ ಪಾಶಾ, ಕಾರ್ಯದರ್ಶಿ ಮುಷ್ತಾಕ್ ಹೆನ್ನಾಬೈಲ್, ಖಜಾಂಚಿ ಮುಬಾರಕ್ ಗುಲ್ವಾಡಿ, ನಝೀರ್ ಬೆಳುವಾಯಿ, ರಶೀದ್ ಉಪ್ಪಿನಂಗಡಿ, ಚಮನ್ ಷರೀಫ್ ಚಿತ್ರದುರ್ಗ, ಸಯ್ಯದ್ ಗನಿ ಖಾನ್ ಮಂಡ್ಯ,ಅಬ್ದುಲ್ ರೆಹಮನ್ ಬಿದರಕುಂದಿ, ದಸ್ತಗೀರ್ ಕಲಹಳ್ಳಿ, ಇಬ್ರಾಹಿಂ ಸಾಹೇಬ್ ಕೋಟ, ಮುಜ್ಹಫರ್ ಹುಸೈನ್ ಪಿರಿಯಾಪಟ್ಟಣ, ಜಾಕೀರ್ ಹುಸೇನ್, ಎಸ್.ಕೆ.ಇಬ್ರಾಹಿಮ್, ಲೋಹಾನಿ ಮಳಗಿ, ಅಶ್ರಫ್ ಕುಂದಾಪುರ, ಉಸ್ಮಾನ್ ಹೈಕಾಡಿ, ಹಕೀಮ್ ತೀರ್ಥಹಳ್ಳಿ, ಇಕ್ಬಾಲ್ ಹಾಲಾಡಿ ಮತ್ತು ಸ್ಥಳೀಯ ಮುಖಂಡರಾದ ಅಭಿಗೌಡ ಮತ್ತು ಕಲಿಮುಲ್ಲಾ ನಾಗಮಂಗಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X